AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆಯಲ್ಲಿ ಕ್ರೈಸ್ತ ಧರ್ಮ ಹೇರಿಕೆ ಆರೋಪ: ಹಿಂದೂ ಜನಜಾಗೃತಿ ಸಮಿತಿ ಆಕ್ರೋಶ

ಶಾಲೆಯಲ್ಲಿ ಬೈಲ್ ಓದುವುದು ಕಡ್ಡಾಯ ಎಂದು ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ. ಆಡಳಿತ ಮಂಡಳಿಯ ನಡೆಗೆ ಹಿಂದೂ ಜನಜಾಗೃತಿ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.

ಶಾಲೆಯಲ್ಲಿ ಕ್ರೈಸ್ತ ಧರ್ಮ ಹೇರಿಕೆ ಆರೋಪ: ಹಿಂದೂ ಜನಜಾಗೃತಿ ಸಮಿತಿ ಆಕ್ರೋಶ
ಪವಿತ್ರ ಬೈಬಲ್ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: Apr 24, 2022 | 12:15 PM

Share

ಬೆಂಗಳೂರು: ಶಾಲೆಯಲ್ಲಿ ದಿನನಿತ್ಯ ಬೈಬಲ್ ಓದುವುದು ಕಡ್ಡಾಯಗೊಳಿಸುವ ಮೂಲಕ ವಿದ್ಯಾರ್ಥಿಗಳ ಮೇಲೆ ಕ್ರೈಸ್ತ ಧರ್ಮವನ್ನು ಹೇರಲಾಗುತ್ತಿದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಬೆಂಗಳೂರಿನ ರಿಚರ್ಡ್​ ಟೌನ್​ನಲ್ಲಿರುವ ಕ್ಲಾರೆನ್ಸ್​ ಪ್ರೌಢಶಾಲೆಯಲ್ಲಿ ನಡೆದಿದೆ. ಬೈಬಲ್ ವಿರೋಧಿಸಿದರೆ ಶಾಲೆಗೆ ದಾಖಲಾತಿ ಸಿಗುವುದಿಲ್ಲ. ಶಾಲೆಯಲ್ಲಿ ಬೈಲ್ ಓದುವುದು ಕಡ್ಡಾಯ ಎಂದು ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ. ಆಡಳಿತ ಮಂಡಳಿಯ ನಡೆಗೆ ಹಿಂದೂ ಜನಜಾಗೃತಿ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.

ಆಡಳಿತ ಮಂಡಳಿಯು ಹೇರುತ್ತಿರುವ ಈ ನಿಯಮವು ಮಕ್ಕಳ ಹಕ್ಕುಗಳ ಸಂರಕ್ಷಣೆ ಅಧಿನಿಯಮ 2005 ಹಾಗೂ ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಉಲ್ಲಂಘನೆ ಮಾಡಿದೆ ಎಂದು ಹಿಂದೂ ಜನಜಾಗೃತಿ ಸಮಿತಿ ಹೇಳಿದೆ. ಮಕ್ಕಳು ಉತ್ತಮ ನಾಗರಿಕನಾಗಲು ಬೈಬಲ್ ಕಲಿಕೆ ಮುಖ್ಯ. ಬೈಬಲ್ ಕಲಿಕೆ ವಿರೋಧಿಸುವವರಿಗೆ ಶಾಲೆಯಲ್ಲಿ ಅಡ್ಮಿಷನ್ ಸಿಗುವುದಿಲ್ಲ. ದಿನನಿತ್ಯ ಬೈಬಲ್ ಓದುವುದು ಶಾಲೆಯಲ್ಲಿ ಕಡ್ಡಾಯ ಎಂದು ಆಡಳಿತ ಮಂಡಳಿ ತಿಳಿಸಿದೆ.

ಕ್ಲಾರೆನ್ಸ್​ ಸ್ಕೂಲ್ ಬೈಬಲ್ ಓದುವುದನ್ನು ಕಡ್ಡಾಯಗೊಳಿಸಿರುವ ಕುರಿತು ರಿಪಬ್ಲಿಕ್ ವರ್ಲ್ಡ್​ ಜಾಲತಾಣಕ್ಕೆ ಪ್ರತಿಕ್ರಿಯಿಸಿರುವ ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ ಮೋಹನ್ ಗೌಡ, ‘ಯಾವುದೇ ಧರ್ಮಕ್ಕೆ ಸೇರಿದವರಾಗಿದ್ದರೂ ಕ್ಲಾರೆನ್ಸ್ ಶಾಲೆಯಲ್ಲಿ ಓದುವ ವಿದ್ಯಾರ್ಥಿಗಳು ಬೈಬಲ್ ಇರಿಸಿಕೊಳ್ಳಬೇಕು. ಓದಬೇಕು ಎಂಬ ನಿಯಮವಿದೆ. ಶಾಲೆಯ ದಾಖಲಾತಿ ಅರ್ಜಿಯಲ್ಲಿಯೂ ಈ ಅಂಶವನ್ನು ನಮೂದಿಸಲಾಗಿದೆ. ಶಾಲೆಯಲ್ಲಿ ಕ್ರಿಶ್ಚಿಯನ್ ಧರ್ಮಕ್ಕೆ ಸೇರದ ಹಲವು ವಿದ್ಯಾರ್ಥಿಗಳಿದ್ದಾರೆ. ಅವರಿಗೆ ಒತ್ತಾಯಪೂರ್ವಕವಾಗಿ ಬೈಬಲ್ ಕಲಿಸಲಾಗುತ್ತಿದೆ’ ಎಂದು ದೂರಿದ್ದಾರೆ.

ಶಾಲೆಯ ಈ ನಡೆಯು ಸಂವಿಧಾನದ 25 ಮತ್ತು 30ನೇ ವಿಧಿಗಳ ಉಲ್ಲಂಘನೆಯಾಗುತ್ತದೆ. ಯಾವುದೇ ಶಿಕ್ಷಣ ಸಂಸ್ಥೆಯು ಧಾರ್ಮಿಕ ನಂಬಿಕೆಗಳನ್ನು ಹೇರುವಂತಿಲ್ಲ ಎಂಬ ನಿಯಮವಿದೆ ಎಂದು ಮೋಹನ್ ಗೌಡ ತಿಳಿಸಿದ್ದಾರೆ.

ಇದನ್ನೂ ಓದಿ: Gadag Jail: ಗದಗ ಕಾರಾಗೃಹದಲ್ಲಿ ಕೈದಿಗಳಿಗೆ ಕ್ರೈಸ್ತರ ಬೈಬಲ್​ ಹಂಚುವ ಮೂಲಕ ಮತಾಂತರ ನಡೆಸಿದ ಆರೋಪ

ಇದನ್ನೂ ಓದಿ: ಸಂವಿಧಾನದಲ್ಲಿ ಇರುವ ವಿಚಾರಗಳೇ ಬೈಬಲ್, ಕುರಾನ್, ಭಗವದ್ಗೀತೆಯಲ್ಲಿ ಇದೆ: ಡಿಕೆ ಶಿವಕುಮಾರ್

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು