AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯತ್ನಾಳ್​ಗೆ ಬಿಗ್​ ರಿಲೀಫ್: ಸಿದ್ದಸಿರಿ ಸೌಹಾರ್ದ ಸಹಕಾರ ನಿಯಮಿತ ವಿರುದ್ಧದ ಕೇಸ್ ರದ್ದು

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಿದ್ದಸಿರಿ ಸೌಹಾರ್ದ ಸಹಕಾರ ನಿಯಮಿತ ವಿರುದ್ಧ ದಾಖಲಾಗಿದ್ದ ಕೇಸ್​ನ್ನು ಸುದಿರ್ಘ ವಿಚಾರಣೆ ನಡೆಸಿ ಹೈಕೋರ್ಟ್ ರದ್ದುಗೊಳಿಸಿದೆ. ಈ ಮೂಲಕ ಸಂಸ್ಥೆಯ ಅಧ್ಯಕ್ಷ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿ ರಮಣಗೌಡ ಪಾಟೀಲ್, ಶಿವಕುಮಾರ್ ಪಾಟೀಲ್​ಗೂ ಬಿಗ್​ ರಿಲೀಫ್ ಸಿಕ್ಕಂತಾಗಿದೆ. ಏನಿದು ಪ್ರಕರಣ ಅಂತೀರಾ? ಈ ಸ್ಟೋರಿ ಓದಿ.

ಯತ್ನಾಳ್​ಗೆ ಬಿಗ್​ ರಿಲೀಫ್: ಸಿದ್ದಸಿರಿ ಸೌಹಾರ್ದ ಸಹಕಾರ ನಿಯಮಿತ ವಿರುದ್ಧದ ಕೇಸ್ ರದ್ದು
ಬಸನಗೌಡ ಪಾಟೀಲ್ ಯತ್ನಾಳ್
Ramesha M
| Edited By: |

Updated on:Sep 03, 2024 | 4:13 PM

Share

ಬೆಂಗಳೂರು, ಸೆ.03:  ಸಿದ್ದಸಿರಿ ಸೌಹಾರ್ದ ಸಹಕಾರ ನಿಯಮಿತ ವಿರುದ್ಧ ದಾಖಲಾಗಿದ್ದ ಕೇಸ್​ನ್ನು ಸುದಿರ್ಘ ವಿಚಾರಣೆ ನಡೆಸಿ ಹೈಕೋರ್ಟ್ ರದ್ದುಗೊಳಿಸಿದೆ. ಈ ಮೂಲಕ ಸಂಸ್ಥೆಯ ಅಧ್ಯಕ್ಷ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಸೇರಿದಂತೆ ರಮಣಗೌಡ ಪಾಟೀಲ್, ಶಿವಕುಮಾರ್ ಪಾಟೀಲ್​ಗೂ ಬಿಗ್​ ರಿಲೀಫ್ ಸಿಕ್ಕಂತಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿ ಈ ಹಿಂದೆ ಚಿಂಚೋಳಿ ಜೆಎಂಎಫ್‌ಸಿ ಕೋರ್ಟ್‌(Court)ನಲ್ಲಿ ದೂರು ದಾಖಲಿಸಲಾಗಿತ್ತು .

ಏನಿದು ಪ್ರಕರಣ?

ವಾಯು, ಜಲ ಕಾಯ್ದೆ ಉಲ್ಲಂಘನೆ ಆರೋಪ ಹಿ‌ನ್ನಲೆ ಚಿಂಚೋಳಿ ತಾಲೂಕಿನ ಚಿಮ್ಮಾಯಿದಲಾಯಿ ಗ್ರಾಮದ ಬಳಿ ಇರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಿದ್ದ ಶ್ರೀ ಸಕ್ಕರೆ ಕಾರ್ಖಾನೆಗೆ ಬೀಗ ಹಾಕಲು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿತ್ತು. ಈ ಆದೇಶ ಪ್ರಶ್ನಿಸಿ ಬಿಜೆಪಿ ಶಾಸಕ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅದರಂತೆ 2024 ಜನವರಿ 29 ರಂದು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಆದೇಶಕ್ಕೆ ತಡೆ ನೀಡಿತ್ತು.ಇದೀಗ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.

ಇದನ್ನೂ ಓದಿ:ಯತ್ನಾಳ್​-ರಾಜ್ಯ ಸರ್ಕಾರ ಗುದ್ದಾಟ: ಕಬ್ಬಿನ ರಸದಿಂದ ಎಥೆನಾಲ್​ ಉತ್ಪಾದನೆಗೆ ಕೇಂದ್ರ ಅನುಮತಿ

ಇನ್ನು ಇತ್ತೀಚೆಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ವಿರುದ್ದ ಮಾನನಷ್ಟ ಮೊಕದ್ದಮೆ ದಾಖಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅನುಮತಿ ನೀಡಿತ್ತು. ಹೌದು, ಲೋಕಸಭ ಚುನಾವಣಾ ಸಂದರ್ಭದಲ್ಲಿ ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂದು ಹೇಳಿಕೆ ನೀಡಿದ್ದರು. ಈ ಕುರಿತು ಸಚಿವ ದಿನೇಶ್​ ಗುಂಡೂರಾವ್ ಪತ್ನಿ ತಬಸ್ಸುಮ್​ ದಿನೇಶ್​ ರಾವ್ ಅವರು, ‘ದೇಶವಿರೋಧಿ ಎಂದು ಹೇಳಿರುವ ಶಾಸಕ ಯತ್ನಾಳ್​​ ಅವರ ಹೇಳಿಕೆಯಿಂದ​ ನನ್ನ ಮನಸ್ಸಿಗೆ ನೋವಾಗಿದೆ ಎಂದು ಆರೋಪಿಸಿ ದೂರು ದಾಖಲಿಸಲು ನಿರ್ದೇಶನ ಕೋರಿದ್ದರು. ಇವರು ನೀಡಿದ ದೂರನ್ನು ಪರಿಗಣಿಸಿದ ನ್ಯಾಯಾಲಯ ಯತ್ನಾಳ್​ ವಿರುದ್ದ ದೂರು ದಾಖಲಿಸಲು ಸಂಬಂಧಿಸಿದ ಪೊಲೀಸ್​ ಠಾಣೆಗೆ ಸೂಚಿಸಿತ್ತು. ಈ ಸಂಬಂಧ ವಿಚಾರಣೆಯನ್ನು ಸೆ.20 ಕ್ಕೆ ಮುಂದೂಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:13 pm, Tue, 3 September 24

Follow Us
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು