ಹೂ-ಹಣ್ಣು ತರಕಾರಿ ಬೆನ್ನಲ್ಲೆ ತೆಂಗಿನ ಕಾಯಿ ಬೆಲೆ ಹೆಚ್ಚಳ; ಬೆಲೆ ಕೇಳಿ ಗ್ರಾಹಕರು ಶಾಕ್

ದಸರಾ ಹಬ್ಬಕ್ಕೆ ಕೌಂಟ್ ಡೌನ್ ಆರಂಭವಾಗಿದ್ದು, ಈ ಮಧ್ಯೆ ಬೆಲೆ ಏರಿಕೆ ಅನ್ನೋ ಭೂತ ಜನರನ್ನ ಬೆಂಬಿಡದೇ ಕಾಡುತ್ತಿದೆ. ಈ ಬೆನ್ನಲ್ಲೆ ಅಡುಗೆ ಹಾಗೂ ಪೂಜೆಗೆ ಪ್ರಮುಖವಾಗಿ ಬೇಕಾಗುವ ತೆಂಗಿನ ಕಾಯಿ ಬೆಲೆ ಏರಿಕೆಯಾಗಿದ್ದು, ಬೆಲೆ ಏರಿಕೆ ಕೇಳಿ ಗ್ರಾಹಕರು ಶಾಕ್ ಆಗಿದ್ದಾರೆ.

ಹೂ-ಹಣ್ಣು ತರಕಾರಿ ಬೆನ್ನಲ್ಲೆ ತೆಂಗಿನ ಕಾಯಿ ಬೆಲೆ ಹೆಚ್ಚಳ; ಬೆಲೆ ಕೇಳಿ ಗ್ರಾಹಕರು ಶಾಕ್
ತೆಂಗಿನಕಾಯಿ
Follow us
| Updated By: ಆಯೇಷಾ ಬಾನು

Updated on: Oct 01, 2024 | 7:26 AM

ಬೆಂಗಳೂರು, ಅಕ್ಟೋಬರ್,01: ಹೂ-ಹಣ್ಣು, ಟೊಮೆಟೊ, ಈರುಳ್ಳಿ, ತರಕಾರಿ, ಅಡುಗೆ ಎಣ್ಣೆ ಹೀಗೆ ಪ್ರತಿನಿತ್ಯ ಒಂದಲ್ಲ ಒಂದು ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗ್ತಾನೆ ಇದೆ. ಸತತ ಬೆಲೆ ಏರಿಕೆಯಿಂದಾಗಿ ಕಂಗೆಟ್ಟಿದ್ದ ಜನರಿಗೆ ಇದೀಗ ಪ್ರತಿನಿತ್ಯ ಬಳಸುವ ತೆಂಗಿನಕಾಯಿ ಬೆಲೆ ಏರಿಕೆಯಾಗಿದ್ದು, ಹಬ್ಬದ ಸಮಯದಲ್ಲೇ ಈ ರೀತಿ ಬೆಲೆ ಏರಿಕೆ ಆದ್ರೆ ಹೇಗೆ ಅನ್ನೋ ಹೊಸ ತಲೆನೋವು ಶುರುವಾಗಿದೆ.

ಕಳೆದ ಹದಿನೈದು ದಿನಗಳ ಹಿಂದೆ ಒಂದು‌ ಕೆ.ಜಿ ತೆಂಗಿನ ಕಾಯಿ 30ರಿಂದ 35ರೂಪಾಯಿಗೆ ಮಾರಾಟವಾಗುತ್ತಿತ್ತು. ಆದ್ರೆ ಇದೀಗಾ ಅದೇ ತೆಂಗಿನ ಕಾಯಿ 50-57 ರೂಪಾಯಿಗೆ ಮಾರಾಟವಾಗುತ್ತಿದೆ. ಇನ್ನೂ,ಕಳೆದ 2010ರ ನಂತರ ಇದೇ ಮೊದಲ ಬಾರಿಗೆ ಹೆಚ್ಚಿನ ಮಟ್ಟದಲ್ಲಿ ಬೆಲೆ ಏರಿಕೆಯಾಗಿದ್ದು, ದಸರಾ, ದೀಪಾವಳಿ ಇರುವ ಕಾರಣ ಹಬ್ಬದ ಸಮಯದಲ್ಲಿ ಮತ್ತಷ್ಟು ಬೆಲೆ ಏರಿಕೆಯಾಗುತ್ತದೆ ಎನ್ನಲಾಗುತ್ತಿದೆ. ಜೊತೆಗೆ ಮುಂದಿನ ಆರು ತಿಂಗಳವರೆಗೆ ಈ ಬೆಲೆ ಏರಿಕೆ ಜನರನ್ನ ಕಾಡಲಿದೆ ಎಂದು ವ್ಯಾಪಾರಸ್ಥರು ಹೇಳುತ್ತಿದ್ದಾರೆ.

ಬೆಂಗಳೂರಿಗೆ ಸಾಮಾನ್ಯವಾಗಿ ಕರ್ನಾಟಕದ ಎಲ್ಲಾ ಭಾಗದಿಂದಲೂ ತೆಂಗಿನಕಾಯಿ ಆಮದಾಗುತ್ತದೆ. ಆದರೆ ಈ ಬಾರಿ ವಿಪರೀತ ಬಿಸಿಲಿದ್ದ ಕಾರಣ ಎಳನೀರಿಗೆ ಬೇಡಿಕೆ ಹೆಚ್ಚಾಗಿದ್ದು, ಉತ್ತರ ಭಾರತಕ್ಕೆ ಸಾಕಷ್ಟು ಎಳನೀರು ರಫ್ತಾಗಿದೆ. ಇದೇ ಕಾರಣದಿಂದಾಗಿ ತೆಂಗಿನ ಕಾಯಿ ಬೆಳೆಯಲ್ಲಿ ಕುಸಿತವಾಗಿದ್ದು ಏಕಾಏಕಿ ಬೆಲೆ ಹೆಚ್ಚಾಗಿದೆ ಎನ್ನಲಾಗುತ್ತಿದೆ. ಹೀಗಾಗಿ ತೆಂಗಿನ ಕಾಯಿ ಬೆಲೆ ಏರಿಕೆಯಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ದುಬಾರಿಯಾಗುವ ಸಾಧ್ಯತೆ ಇದೆ.‌ ಆದರೆ ಹಬ್ಬದ ಹೊಸ್ತಿಲಲ್ಲಿ ಇದ್ದಂತಹ ಗ್ರಾಹಕರಿಗೆ ಈ ಬೆಲೆ‌ ನುಂಗಲಾರದ ತುತ್ತಾಗಿದೆ.

ಇದನ್ನೂ ಓದಿ: ನಂದಿನಿ ಹಾಲಿನ ಬೆಲೆ ಏರಿಕೆ ಪ್ರಯೋಜನ ರೈತರಿಗೆ ಸಿಗಲ್ಲ! ಹಾಲು ಉತ್ಪಾದಕರು ಹೇಳುವ ಲೆಕ್ಕಾಚಾರ ಇಲ್ಲಿದೆ

ಇನ್ನು, ಇದು ತೆಂಗಿನ ಕಾಯಿಯ ಕಥೆಯಾದ್ರೆ ಮತ್ತೊಂದೆಡೆ ತರಕಾರಿಗಳ ಬೆಲೆಯು ಕೊಂಚ ಜಾಸ್ತಿಯಾಗಿದೆ. ಈರುಳ್ಳಿ, ಕ್ಯಾರೇಟ್, ಟೊಮೆಟೊ, ಬೀನ್ಸ್, ಮೂಲಂಗಿಯ ಬೆಲೆ ಜಾಸ್ತಿಯಾಗಿದ್ದು, ಹಬ್ಬಕ್ಕೆ ತರಕಾರಿಯನ್ನ ಖರೀದಿಸುವುದಕ್ಕೆ ಬಂದಿದ್ದಂತಹ ಗ್ರಾಹಕರು ಶಾಕ್ ಆಗಿದ್ದಾರೆ. ಹಾಗಾದ್ರೆ ತರಕಾರಿಗಳ ಬೆಲೆ ಎಷ್ಟಿತ್ತು, ಈಗ ಎಷ್ಟಿದೆ ಇಲ್ಲಿ ತಿಳಿಯಿರಿ.

ತರಕಾರಿ ಹಿಂದಿನ ಬೆಲೆ ಇಂದಿನ ಬೆಲೆ
ನಾಟಿ ಬೀನ್ಸ್ 50Rs 60Rs
ಟೊಮೆಟೊ 15Rs 30Rs
ಬಿಳಿ ಬದನೆ 60Rs 35Rs
ಮೆಣಸಿನಕಾಯಿ 60Rs 50Rs
ನುಗ್ಗೆಕಾಯಿ(ಕೆಜಿ) 60Rs 120Rs
ಊಟಿ ಕ್ಯಾರೆಟ್ 80Rs 60Rs
ನವಿಲುಕೋಸು 40Rs 40Rs
ಕ್ಯಾಪ್ಸಿಕಂ 40Rs 60Rs
ಶುಂಠಿ 150Rs 180Rs
ನಾಟಿ ಬಟಾಣಿ 200Rs 250Rs
ಫಾರಂ ಬಟಾಣಿ 100Rs 150Rs
ಬೆಳ್ಳುಳ್ಳಿ 400Rs 400Rs

ಒಟ್ನಲ್ಲಿ, ನಿರಂತರ ಬೆಲೆ ಏರಿಕೆಯಿಂದಾಗಿ ಗ್ರಾಹಕರು ರೋಸಿಹೋಗುತ್ತಿದ್ದು, ಇದೀಗ ತೆಂಗಿನ ಕಾಯಿ ಬೆಲೆ ಏರಿಕೆಗೆ ಶಾಕ್ ಆಗಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ರಾಹುಲ್ ಗಾಂಧಿ ಕಾರಿನ ಪಕ್ಕ ಬೈಕ್​ನಲ್ಲಿ ಕೋಲು ಹಿಡಿದು ಬಂದ ವ್ಯಕ್ತಿ
ರಾಹುಲ್ ಗಾಂಧಿ ಕಾರಿನ ಪಕ್ಕ ಬೈಕ್​ನಲ್ಲಿ ಕೋಲು ಹಿಡಿದು ಬಂದ ವ್ಯಕ್ತಿ
ಪೊಲೀಸ್ ಠಾಣೆ ಮುಂದೆ ಯುವಕನ ಹೈಡ್ರಾಮಾ: ಕೊನೆಗೆ ಪೊಲೀಸ್​ ಮಾಡಿದ್ದೇನು?
ಪೊಲೀಸ್ ಠಾಣೆ ಮುಂದೆ ಯುವಕನ ಹೈಡ್ರಾಮಾ: ಕೊನೆಗೆ ಪೊಲೀಸ್​ ಮಾಡಿದ್ದೇನು?
ಆಂಧ್ರಪ್ರದೇಶದ ಎಟಿಎಂನಲ್ಲಿ ಹಾವು ಕಂಡು ಬೆಚ್ಚಿಬಿದ್ದ ಜನ
ಆಂಧ್ರಪ್ರದೇಶದ ಎಟಿಎಂನಲ್ಲಿ ಹಾವು ಕಂಡು ಬೆಚ್ಚಿಬಿದ್ದ ಜನ
‘ದೇವರು ಬಂದ್ರು, ಹುಲಿ ಬಂತು’: ದರ್ಶನ್ ಕಂಡು ಜೈಕಾರ ಹಾಕಿದ ಫ್ಯಾನ್ಸ್
‘ದೇವರು ಬಂದ್ರು, ಹುಲಿ ಬಂತು’: ದರ್ಶನ್ ಕಂಡು ಜೈಕಾರ ಹಾಕಿದ ಫ್ಯಾನ್ಸ್
ರೆಡ್ಮಿ ಲೇಟೆಸ್ಟ್ ಸ್ಮಾರ್ಟ್​​ಫೋನ್ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
ರೆಡ್ಮಿ ಲೇಟೆಸ್ಟ್ ಸ್ಮಾರ್ಟ್​​ಫೋನ್ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
ಜಿಗಣಿಯಲ್ಲಿ ಪಾಕಿಸ್ತಾನ ಪ್ರಜೆ ಬಂಧನ: ಗೃಹ ಸಚಿವ ಪರಮೇಶ್ವರ್ ಹೇಳಿದ್ದಿಷ್ಟು​
ಜಿಗಣಿಯಲ್ಲಿ ಪಾಕಿಸ್ತಾನ ಪ್ರಜೆ ಬಂಧನ: ಗೃಹ ಸಚಿವ ಪರಮೇಶ್ವರ್ ಹೇಳಿದ್ದಿಷ್ಟು​
ಡಿಸಿಎಂ ಡಿ.ಕೆ ಶಿವಕುಮಾರ್ ಸುದ್ದಿಗೋಷ್ಠಿ ಲೈವ್ ​
ಡಿಸಿಎಂ ಡಿ.ಕೆ ಶಿವಕುಮಾರ್ ಸುದ್ದಿಗೋಷ್ಠಿ ಲೈವ್ ​
ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಸಿರಾಜ್
ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಸಿರಾಜ್
ಪರಮೇಶ್ವರ್ ಭೇಟಿಯ ರಹಸ್ಯ ಬಿಚ್ಚಿಟ್ಟ ಡಿಕೆ ಶಿವಕುಮಾರ್: ಏನದು?
ಪರಮೇಶ್ವರ್ ಭೇಟಿಯ ರಹಸ್ಯ ಬಿಚ್ಚಿಟ್ಟ ಡಿಕೆ ಶಿವಕುಮಾರ್: ಏನದು?
KSRTC ಬಸ್​ ಅಪಘಾತ, ಪವಾಡ ಸದೃಶ್ಯ ರೀತಿಯಲ್ಲಿ ಪಾರಾದ ಬೈಕ್​ ಸವಾರ
KSRTC ಬಸ್​ ಅಪಘಾತ, ಪವಾಡ ಸದೃಶ್ಯ ರೀತಿಯಲ್ಲಿ ಪಾರಾದ ಬೈಕ್​ ಸವಾರ