AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನಪಟ್ಟಣ ನೂತನ ಹೆಚ್ಚುವರಿ ಪಿಡಿಎಗಳಿಗೆ ಬಿಗ್ ಶಾಕ್, ನಿಯೋಜನೆ ಆದೇಶ ರದ್ದುಗೊಳಿಸಿದ ಸರ್ಕಾರ

ಚನ್ನಪಟ್ಟಣ ನೂತನ ಪಿಡಿಒಗಳಿಗೆ ಬಿಗ್ ಶಾಕ್. ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧನಸಭಾ ಕ್ಷೇತ್ರಕ್ಕೆ ಹೆಚ್ಚುವರಿ 20 ಪಿಡಿಒಗಳನ್ನು ನಿಯೋಜನೆ ಮಾಡಿ ಆದೇಶ ಹೊರಡಿಸಲಾಗಿತ್ತು. ಈ ಆದೇಶವನ್ನು ರಾಜ್ಯ ಸರ್ಕಾರ ರದ್ದುಗೊಳಿಸಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಪತ್ರ ಬರೆದ ಹಿನ್ನೆಲೆಯಲ್ಲಿ ತರಾತುರಿಯಲ್ಲಿ ಜಿಲ್ಲಾಮಟ್ಟದ ಸಿಇಒ ಹಂತದಲ್ಲಿ 20 ಪಿಡಿಒ ನೇಮಕ ಮಾಡಲಾಗಿತ್ತು.

ಚನ್ನಪಟ್ಟಣ ನೂತನ ಹೆಚ್ಚುವರಿ ಪಿಡಿಎಗಳಿಗೆ ಬಿಗ್ ಶಾಕ್, ನಿಯೋಜನೆ ಆದೇಶ ರದ್ದುಗೊಳಿಸಿದ ಸರ್ಕಾರ
7ನೇ ವೇತನ ಆಯೋಗದ ಶಿಫಾರಸಿನಂತೆ ರಾಜ್ಯ ಸರ್ಕಾರಿ ನೌಕರರ ನಿವೃತ್ತಿ ವೇತನ ಸೌಲಭ್ಯಗಳ ಪರಿಷ್ಕರಣೆ
ಪ್ರಸನ್ನ ಗಾಂವ್ಕರ್​
| Edited By: |

Updated on:Aug 17, 2024 | 10:25 AM

Share

ಬೆಂಗಳೂರು, ಆಗಸ್ಟ್​.17: ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ 20 ಜನ ಹೆಚ್ಚುವರಿ ಪಿಡಿಒಗಳನ್ನ ನಿಯೋಜನೆಗೊಳಿಸಿದ್ದ ಆದೇಶವನ್ನು ರದ್ದು ಮಾಡಲಾಗಿದೆ. ಸರ್ಕಾರದಿಂದ (Karnataka Government) ಅನುಮೋದನೆ ಪಡೆಯದೆ ಜಿಲ್ಲಾಮಟ್ಟದಲ್ಲಿಯೇ ಪಿಡಿಒಗಳ ನಿಯೋಜನೆ ಹಿನ್ನೆಲೆಯಲ್ಲಿ ಹೆಚ್ಚುವರಿ ಪಿಡಿಒಗಳ ನಿಯೋಜನೆ ಆದೇಶವನ್ನು ರಾಜ್ಯ ಸರ್ಕಾರ ರದ್ದುಗೊಳಿಸಿದೆ.

ನಿಯೋಜನೆಗೂ ಮೊದಲು ಇಲಾಖೆ ಆಯುಕ್ತರಿಂದ ಅನುಮೋದನೆ ಕಡ್ಡಾಯ. ಆದರೆ ಅನುಮೋದನೆ ಪಡೆಯದೆ ತರಾತುರಿಯಲ್ಲಿ ಜಿಲ್ಲಾಮಟ್ಟದ ಸಿಇಒ ಹಂತದಲ್ಲಿಯೇ ನಿಯೋಜನೆ ಮಾಡಲಾಗಿದೆ, ಹೀಗಾಗಿ ಆದೇಶಕ್ಕೆ ತಡೆ ನೀಡಿ RDPR ಆಯುಕ್ತೆ ಅರುಂಧತಿ ಚಂದ್ರಶೇಖರ್ ಆದೇಶ ಹೊರಡಿಸಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಅವರು ಪತ್ರ ಬರೆದಿದ್ದ ಹಿನ್ನೆಲೆಯಲ್ಲಿ ಜಿಲ್ಲಾಮಟ್ಟದಲ್ಲಿಯೇ ನೇಮಕ ಮಾಡಲಾಗಿತ್ತು. ಇದೀಗ 20 ಪಿಡಿಒಗಳ ನಿಯೋಜನೆ ಆದೇಶವನ್ನು ಸರ್ಕಾರ ರದ್ದುಗೊಳಿಸಿದೆ.

ಇದನ್ನೂ ಓದಿ: ಮಳೆ ಹಾನಿ ಸ್ಥಳಕ್ಕೆ ತಡವಾಗಿ ಬಂದದ್ದನ್ನು ಪ್ರಶ್ನಿಸಿದವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಬಿಜೆಪಿ ಶಾಸಕ ಹರೀಶ್ ಪೂಂಜಾ

ಟಿವಿ9 ಇಂಪ್ಯಾಕ್ಟ್.. ಅಂಗನವಾಡಿ ಕಾರ್ಯಕರ್ತೆ ಸಸ್ಪೆಂಡ್

ಮಕ್ಕಳಿಗೆ ನೀಡಬೇಕಿದ್ದ ಆಹಾರ ಪದಾರ್ಥಗಳನ್ನು ಕಾಳಸಂತೆಯಲ್ಲಿ ಮಾರುತ್ತಿದ್ದ, ಅಂಗನವಾಡಿ ಕಾರ್ಯಕರ್ತೆ ಸಸ್ಪೆಂಡ್ ಆಗಿದ್ದಾರೆ. ಟಿವಿ9ನಲ್ಲಿ ಸುದ್ದಿ ಬಿತ್ತರವಾಗ್ತಿದ್ದಂತೆ ಯಾದಗಿರಿ ಜಿಲ್ಲೆ ಹುಣಸಗಿಯ ಹಗರಟಗಿ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಉಮಾದೇವಿ ಸಸ್ಪೆಂಡ್ ಆಗಿದ್ದಾರೆ. ಅಕ್ಕಿ, ಮೊಟ್ಟೆ, ಗೋಧಿ, ರವೆ, ಅಡುಗೆ ಎಣ್ಣೆ, ಬೆಲ್ಲ ಹಾಗೂ ಬೇಳೆಯನ್ನ ಕಾರ್ಯಕರ್ತೆ ಉಮಾದೇವಿ ಮಾರಾಟ ಮಾಡ್ತಿದ್ದ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿತ್ತು. ಈ ಕುರಿತು ನಿನ್ನೆ ಟಿವಿ9ನಲ್ಲಿ ಸುದ್ದಿ ಬಿತ್ತರಿಸಲಾಗಿತ್ತು.

ಮೆಟ್ರೋ ಪ್ರಯಾಣಿಕರಿಗೆ ಕೇಂದ್ರದಿಂದ ಗುಡ್ ನ್ಯೂಸ್

ಮೆಟ್ರೋ ಪ್ರಯಾಣಿಕರಿಗೆ ಕೇಂದ್ರ ಸರ್ಕಾರ ಗುಡ್​ನ್ಯೂಸ್ ಕೊಟ್ಟಿದೆ. ನಮ್ಮ ಮೆಟ್ರೋ 3ನೇ ಹಂತದ ಕಾಮಗಾರಿಗೆ ಕೇಂದ್ರ ಸಂಪುಟ ಗ್ರೀನ್​ಸಿಗ್ನಲ್ ಕೊಟ್ಟಿದೆ. ಬರೋಬ್ಬರಿ ₹15,611 ಕೋಟಿ ವೆಚ್ಚದಲ್ಲಿ ಕಾಮಗಾರಿಗೆ ಒಪ್ಪಿಗೆ ನೀಡಿದೆ. ಕಾರಿಡಾರ್-1 ಜೆಪಿ ನಗರದ 4ನೇ ಹಂತದಿಂದ ಕೆಂಪಾಪುರವರೆಗೆ 21 ಸ್ಟೇಷನ್​ಗಳು, 32.15 ಕಿಲೋ ಮೀಟರ್ ವಿಸ್ತೀರ್ಣವಿರುವ ಮಾರ್ಗದಲ್ಲಿ ಕಾಮಗಾರಿ ನಡೆಯಲಿದೆ. ಇನ್ನು, ಕಾರಿಡಾರ್- 2 ಹೊಸಹಳ್ಳಿಯಿಂದ ಕಡಬಗೆರೆಯವರೆಗೆ 9 ಸ್ಟೇಷನ್​ಗಳು, ಮಾಗಡಿ ರಸ್ತೆಯಲ್ಲಿ 12.50 ಕಿಲೋ ಮೀಟರ್ ಮಾರ್ಗದಲ್ಲಿ ಕಾಮಗಾರಿ ನಡೆಯಲಿದೆ. ಇದರಿಂದ ಮೆಟ್ರೋ ವಿಸ್ತೀರ್ಣ 220.20 ಕಿಲೋ ಮೀಟರ್ ಹೊಂದಲಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:12 am, Sat, 17 August 24

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ