AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಭಾರಿ ಮಳೆಗೆ ಬೃಹತ್ ಗೋಡೆ ಕುಸಿತ; ಮನೆ ಕುಸಿಯುವ ಭೀತಿಯಿಂದ ಕಣ್ಣೀರಿಡುತ್ತಿರುವ ಮಹಿಳೆ

ಮಳೆಯಿಂದ ಮತ್ತಷ್ಟು ಗೋಡೆ ಕುಸಿದು ಬೀಳುವ ಆತಂಕವಿದ್ದು ಬೃಹತ್ ಗೋಡೆ ಮೇಲಿರುವ ಮನೆ ಕುಸಿದು ಬೀಳುವ ಆತಂಕವೂ ಇದೆ. ಗೋಡೆ ಕುಸಿದ ಸಮೀಪವೇ ರೈಲ್ವೆ ಮೇಲ್ಸೇತುವೆ ಸಹ ಇದೆ. ಇನ್ನು ಮನೆ ಕುಸಿಯುವ ಆತಂಕದಿಂದ ಮಹಿಳೆ ವಿಜಯಮ್ಮ ಕಣ್ಣೀರು ಹಾಕುತ್ತಿದ್ದಾರೆ.

ಬೆಂಗಳೂರಿನಲ್ಲಿ ಭಾರಿ ಮಳೆಗೆ ಬೃಹತ್ ಗೋಡೆ ಕುಸಿತ; ಮನೆ ಕುಸಿಯುವ ಭೀತಿಯಿಂದ ಕಣ್ಣೀರಿಡುತ್ತಿರುವ ಮಹಿಳೆ
ಬೆಂಗಳೂರಿನಲ್ಲಿ ಭಾರಿ ಮಳೆಗೆ ಬೃಹತ್ ಗೋಡೆ ಕುಸಿತ; ಮನೆ ಕುಸಿಯುವ ಭೀತಿಯಿಂದ ಕಣ್ಣೀರಿಡುತ್ತಿರುವ ಮಹಿಳೆ
TV9 Web
| Updated By: ಆಯೇಷಾ ಬಾನು|

Updated on:Oct 11, 2021 | 4:48 PM

Share

ಬೆಂಗಳೂರು: ಕಳೆದ ಕೆಲವು ದಿನಗಳಿಂದ ನಗರದಲ್ಲಿ ಕಟ್ಟಡಗಳು ಕುಸಿಯುತ್ತಿರುವ ಘಟನೆಗಳು ನಡೆಯುತ್ತಿವೆ. ಅದರಂತೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾರಿ ಮಳೆ ಹಿನ್ನೆಲೆ ಮೆಜೆಸ್ಟಿಕ್ ಸಮೀಪ ಮುಖ್ಯ ರಸ್ತೆಯಲ್ಲಿ ಬೃಹತ್ ಗೋಡೆ ಕುಸಿದಿರುವ ಘಟನೆ ನಡೆದಿದೆ. ಶೇಷಾದ್ರಿಪುರಂನಿಂದ ಮೆಜೆಸ್ಟಿಕ್‌ಗೆ ತೆರಳುವ ಮುಖ್ಯ ರಸ್ತೆಯಲ್ಲಿ ಬೃಹತ್ ಗೋಡೆಯೊಂದು ಕುಸಿದಿದ್ದು ಆತಂಕ ಹೆಚ್ಚಾಗಿದೆ.

ಮಳೆಯಿಂದ ಮತ್ತಷ್ಟು ಗೋಡೆ ಕುಸಿದು ಬೀಳುವ ಆತಂಕವಿದ್ದು ಬೃಹತ್ ಗೋಡೆ ಮೇಲಿರುವ ಮನೆ ಕುಸಿದು ಬೀಳುವ ಆತಂಕವೂ ಇದೆ. ಗೋಡೆ ಕುಸಿದ ಸಮೀಪವೇ ರೈಲ್ವೆ ಮೇಲ್ಸೇತುವೆ ಸಹ ಇದೆ. ಇನ್ನು ಮನೆ ಕುಸಿಯುವ ಆತಂಕದಿಂದ ಮಹಿಳೆ ವಿಜಯಮ್ಮ ಕಣ್ಣೀರು ಹಾಕುತ್ತಿದ್ದಾರೆ. ಎರಡು ಬಾರಿ ಇದೇ ರೀತಿ ಘಟನೆ ನಡೆದಿದೆ. ಈ ಹಿಂದೆಯೂ ಮನೆಯ ಮೂಲೆ ಕುಸಿದಿತ್ತು. ಈಗಲೂ ಮತ್ತೊಮ್ಮೆ ಗೋಡೆ ಕುಸಿದಿದೆ. ಹೀಗಾಗಿ ಸದ್ಯ ಮನೆಯಿಂದ ಖಾಲಿ ಮಾಡಿಸಿ‌ ಅಧಿಕಾರಿಗಳು ತೆರಳಿದ್ದಾರೆ.

ಮನೆ‌ ಒಳಗೆ ಹೋಗದೆ‌ ಹೊರಗೆ ನಿಂತಿದ್ದೇವೆ. ನಮಗೆ ಯಾವುದೇ ಪರಿಹಾರದ ಭರವಸೆ ನೀಡಿಲ್ಲ. ಮನೆ ಹಿಂಭಾಗದ‌ ರೈಲ್ವೆ ಗೋಡೆ ಅರ್ಧ ಕುಸಿದಿದೆ. ಪೂರ್ಣವಾಗಿ ಬೀಳಿಸಿದರೆ ಅಪಾಯವಾಗುವುದಿಲ್ಲ. ಬಿಬಿಎಂಪಿ ಅಧಿಕಾರಿಗಳು ಏನೂ ಕ್ರಮ ತೆಗೆದುಕೊಂಡಿಲ್ಲ ಎಂದು ಮನೆಯಲ್ಲಿ ವಾಸಿಸುತ್ತಿದ್ದ ನಿವಾಸಿಗಳು ಕಣ್ಣೀರು ಹಾಕುತ್ತಿದ್ದಾರೆ. ಇನ್ನು ಮತ್ತೊಂದೆಡೆ ಮನೆ ಕುಸಿಯುವ ಆತಂಕ ಹಿನ್ನೆಲೆ ಶಿಫ್ಟ್ ಮಾಡಲು ಬಿಬಿಎಂಪಿ ಚಿಂತನೆ ನಡೆಸಿದೆ. ನಿವಾಸಿಗಳು ಕೆಲಸಕ್ಕೆ ಹೋಗಿರುವ ಹಿನ್ನೆಲೆ ಬಿಬಿಎಂಪಿ ಸಿಬ್ಬಂದಿ ಮನೆಯವರನ್ನು ಸಂಪರ್ಕಿಸುತ್ತಿದೆ. ಸ್ಥಳಕ್ಕೆ ಬಿಬಿಎಂಪಿ ಇಂಜಿನಿಯರ್ ಮಾರ್ಕಂಡೇಯ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ.

ಮಿಲಿಟರಿ ಕಾಂಪೌಂಡ್ ಕುಸಿದು 10ಕ್ಕೂ ಹೆಚ್ಚು ವಾಹನ ಜಖಂ ಇನ್ನು ಮತ್ತೊಂದೆಡೆ ಬೆಂಗಳೂರಿನ ಇಂದಿರಾನಗರದಲ್ಲಿರುವ ಮಿಲಿಟರಿ ಕಾಂಪೌಂಡ್ ಕುಸಿದು 10ಕ್ಕೂ ಹೆಚ್ಚು ವಾಹನ ಜಖಂಗೊಂಡಿದೆ. ಜಖಂ ಆಗಿರುವ ವಾಹನಗಳ ಮಾಲೀಕರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. MEG ಸೆಂಟರ್ ಗೆ ಸೇರಿರುವ ಮಿಲಿಟರಿ ಕಾಂಪೌಂಡ್ ಕುಸಿದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಇದು ರೆಸಿಡೆನ್ಸಿಯಲ್ ಏರಿಯಾ ಆಗಿರುವುದರಿಂದ ಮಕ್ಕಳ ಓಡಾಟ ಜಾಸ್ತಿ ಇರುತ್ತೆ. ಹೀಗಾಗಿ ಸ್ಥಳೀಯರು ಮಾಧ್ಯಮಗಳ ಮೂಲಕ ನ್ಯಾಯ ಬೇಕು ಎಂದು ಆಕ್ರೋಶ ಹೊರ ಹಾಕಿದ್ದಾರೆ. ಕಳೆದ ಬಾರಿಯೂ ಮಹಿಳೆ ಮೇಲೆ ಗೋಡೆ ಬಿದ್ದಿದೆ. ಸದ್ಯ ಆ ಮಹಿಳೆ ಮನೆ ಖಾಲಿ ಮಾಡಿ ಬೇರೆ ಕಡೆಗೆ ಹೋಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಇದನ್ನೂ ಓದಿ: ಕಸ್ತೂರಿನಗರದಲ್ಲಿ 5 ಅಂತಸ್ತಿನ ಕಟ್ಟಡ ಕುಸಿತ; ಸೆಕ್ಯೂರಿಟಿ ಗಾರ್ಡ್ ಸಮಯಪ್ರಜ್ಞೆಯಿಂದ 15 ಜನ ಪಾರು

Published On - 4:39 pm, Mon, 11 October 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!