AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಬಿಹಾರದ ವ್ಯಕ್ತಿಯ ಕೊಲೆ ಪ್ರಕರಣ: ಮೃತನ 2ನೇ ಪತ್ನಿ ಮತ್ತು ನಾದಿನಿ ಬಂಧನ

ಬಿಹಾರ ಮೂಲದ ಶಕೀಲ್ ಅಕ್ತಾರ್ ಎಂಬಾತನನ್ನು ಬೆಂಗಳೂರು ನಗರದಲ್ಲಿ ಕೊಲೆ ಮಾಡಲಾಗಿತ್ತು. ಆದರೆ ತನ್ನ ಪತಿ ಕಾಣೆಯಾಗಿದ್ದಾರೆ ಎಂದು ಎರಡನೇ ಪತ್ನಿ ಸಂಪಿಗೆಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿ ತನಿಖೆಗೆ ಇಳಿದ ಪೊಲೀಸರು, ದೂರು ನೀಡಿದ ಮೃತನ ಎರಡನೇ ಪತ್ನಿ ಮತ್ತು ನಾದಿನಿಯನ್ನು ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ ಬಿಹಾರದ ವ್ಯಕ್ತಿಯ ಕೊಲೆ ಪ್ರಕರಣ: ಮೃತನ 2ನೇ ಪತ್ನಿ ಮತ್ತು ನಾದಿನಿ ಬಂಧನ
ಬೆಂಗಳೂರಿನಲ್ಲಿ ಬಿಹಾರದ ವ್ಯಕ್ತಿಯ ಕೊಲೆ ಪ್ರಕರಣ ಸಂಬಂಧ ಮೃತನ 2ನೇ ಪತ್ನಿ ಮತ್ತು ನಾದಿನಿಯನ್ನು ಬಂಧಿಸಿದ ಸಂಪಿಗೆಹಳ್ಳಿ ಪೊಲೀಸರು
ಜಗದೀಶ ಬಿ.
| Edited By: Rakesh Nayak Manchi|

Updated on:Oct 19, 2023 | 7:40 AM

Share

ಬೆಂಗಳೂರು, ಅ.19: ನಗರದಲ್ಲಿ ನಡೆದ ಬಿಹಾರ ಮೂಲದ ಶಕೀಲ್ ಅಕ್ತಾರ್ ಎಂಬಾತನ ಕೊಲೆ (Murder) ಪ್ರಕರಣ ಸಂಬಂಧ ತನಿಖೆ ನಡೆಸುತ್ತಿದ್ದ ಸಂಪಿಗೆಹಳ್ಳಿ ಠಾಣಾ ಪೊಲೀಸರು ಮೃತನ ಎರಡನೇ ಪತ್ನಿ ಮತ್ತು ನಾದಿನಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ನಜೀರ್ ಖಾಟುನ್ ಮತ್ತು ಕಾಶ್ಮೀರಿ ಬಂಧಿತ ಆರೋಪಿಗಳಾಗಿದ್ದಾರೆ.

ಅಕ್ಟೋಬರ್ 9 ರಂದು ರಾತ್ರಿ ಮಂಚದ ಮೇಲೆ ಮಲಗಿದ್ದ ಶಕೀಲ್ ಎದೆ ಮೇಲೆ ಕುಳಿತ ಎರಡನೇ ಪತ್ನಿ ನಜೀರ್ ಖಾಟುನ್ ಬಲವಾಗಿ ಕತ್ತು ಹಿಸುಕಿದ್ದಾಳೆ. ಕೃತ್ಯದ ವೇಳೆ ನಾದಿನಿ ಕಾಶ್ಮೀರಿ ಶಕೀಲ್​ನ ಕೈಕಾಲುಗಳನ್ನು ಬಿಗಿಯಾಗಿ ಹಿಡಿದಿದ್ದಾಳೆ.

ಇದನ್ನೂ ಓದಿ: ಬೆಂಗಳೂರಿನ ನಾಗಸಂದ್ರ ಬಳಿ ನಡೆದ ಕಿಡ್ನಾಪ್ ಪ್ರಕರಣಕ್ಕೆ ಟ್ವಿಸ್ಟ್​​; ಕೊಲೆ ಹಿಂದೆ ಇದೆ ಪ್ರೇಮ ಕಹಾನಿ

ಈ ವೇಳೆ ಪ್ರಾಣ ಉಳಿಸಿಕೊಳ್ಳಲು ಒದ್ದಾಡಿದಾಗ ಶಕೀಲ್ ಮಂಚದಿಂದ ಕೆಳಗೆ ಬಿದ್ದರೂ ಬಿಡದ ಆರೋಪಿಗಳು, ಕತ್ತು ಹಿಸುಕು ಕೊಲೆ ಮಾಡಿದ್ದಾರೆ. ಹತ್ಯೆ ಬಳಿಕ ಬೆಡ್ ಶೀಟ್​ನಲ್ಲೇ ಶವವನ್ನು ಕಟ್ಟಿದ್ದರು. ಭಾರೀ ಮಳೆ ಹಿನ್ನೆಲೆ‌ ಯಾರ ಗಮನಕ್ಕೂ ಬಾರದ ರೀತಿ ಖತರ್ನಾಕ್ ಪ್ಲ್ಯಾನ್ ಮಾಡಿದ ಆರೋಪಿಗಳು, ಮಧ್ಯರಾತ್ರಿಯಲ್ಲಿ ಸುರಿಯುತ್ತಿದ್ದ ಮಳೆಯಲ್ಲೇ ಶವ ಸಾಗಿಸಿದ್ದಾರೆ.

ಮನೆಯಿಂದ ಸ್ವಲ್ಪ ದೂರದಲ್ಲೇ ಇದ್ದ ಹೊಂಡಕ್ಕೆ ಹಾಕಿ ಬಂದಿದ್ದರು. ಕೃತ್ಯ ಎಸಗಿದ ಎರಡು ದಿನಗಳ ಬಳಿಕ ನಾಟಕ ಮಾಡಲು ಆರಂಭಿಸಿದ ಶಕೀಲ್ ಎರಡನೇ ಪತ್ನಿ, ಠಾಣೆಗೆ ತೆರಳಿ ಪತಿ ಕಾಣೆಯಾಗಿದ್ದಾನೆಂದು ದೂರು ನೀಡಿದ್ದಾಳೆ.

ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರಿಗೆ ಅಕ್ಟೋಬರ್ 15 ರಂದು ಹೊಂಡದಲ್ಲಿ ಕೆಟ್ಟ ವಾಸನ ಬರುತ್ತಿದ್ದೆ ಎಂಬ ಮಾಹಿತಿ ತಿಳಿದುಬಂದಿದೆ. ಅದರಂತೆ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದಾಗ ಮೃತದೇಹ ಪತ್ತೆಯಾಗಿದೆ. ಶವ ಹೊರತೆಗೆದು ತನಿಖೆ ಕೈಗೊಂಡಿದ್ದ ಸಂಪಿಗೇಹಳ್ಳಿ ಪೊಲೀಸರು ನಜೀರ್ ಖಾಟುನ್ ಮತ್ತು ಕಾಶ್ಮೀರಿಯನ್ನು ಬಂಧಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:39 am, Thu, 19 October 23

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ