AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬೈಕ್​, ಆಟೋ ಮತ್ತು ಲಾರಿ ಮಧ್ಯೆ ಅಪಘಾತ; ಕಾಲು ಕಳೆದುಕೊಂಡ ಯುವತಿ

ಯಶವಂತಪುರ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಬೈಕ್-ಆಟೋ ಮತ್ತು ಲಾರಿ ಮಧ್ಯೆ ಅಪಘಾತ ಸಂಭವಿಸಿ ಇಬ್ಬರು ದ್ವಿಚಕ್ರ ವಾಹನ ​ ಸವಾರರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರು: ಬೈಕ್​, ಆಟೋ ಮತ್ತು ಲಾರಿ ಮಧ್ಯೆ ಅಪಘಾತ; ಕಾಲು ಕಳೆದುಕೊಂಡ ಯುವತಿ
ಅಪಘಾತದಲ್ಲಿ ಗಾಯಗೊಂಡ ಸವಾರರು
TV9 Web
| Edited By: |

Updated on: Oct 01, 2023 | 7:50 AM

Share

ಬೆಂಗಳೂರು ಅ.1: ಯಶವಂತಪುರ (Yashawantpura) ಸಂಚಾರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಬೈಕ್-ಆಟೋ ಮತ್ತು ಲಾರಿ ಮಧ್ಯೆ ಅಪಘಾತ (Accident) ಸಂಭವಿಸಿ ಇಬ್ಬರು ದ್ವಿಚಕ್ರ ವಾಹನ ​ ಸವಾರರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಓವರ್​ ಟೇಕ್​ ಮಾಡಲು ಹೋಗಿ ಆಟೋ ಮುಂದೆ ಹೋಗುತ್ತಿದ್ದ ಬೈಕ್​ಗೆ​​ ಡಿಕ್ಕಿ ಹೊಡೆದು, ಪರಾರಿಯಾಗಿದ್ದಾನೆ. ಆಟೋ ಡಿಕ್ಕಿಯಿಂದಾಗಿ ಇಬ್ಬರು ಬೈಕ್​​ ಸವಾರರು ರಸ್ತೆ ಮೇಲೆ ಬಿದಿದ್ದಾರೆ. ಕೆಳೆಗೆ ಬಿದ್ದ ಸವಾರರ ಮೇಲೆ ಹಿಂದಿನಿಂದ ಬಂದ ಲಾರಿ ಹರಿದಿದೆ. ಇದರಿಂದ ಯುವತಿ ಕಾಲು ಕಳೆದುಕೊಂಡಿದ್ದಾಳೆ. ಯುವಕನಿಗೆ ಗಂಭೀರವಾಗಿ ಗಾಯವಾಗಿದೆ.

ಕೆಎಸ್​​ಆರ್​ಟಿಸಿ ಬಸ್ ಡಿಕ್ಕಿ ಹೊಡೆದು ಯುವಕ ಸಾವು

ಮೈಸೂರು ಅ.01: ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಂಜನಗೂಡಿನ ಜೆಎಸ್ಎಸ್ ಪಾಲಿಟೆಕ್ನಿಕ್ ಕಾಲೇಜು ಮುಂಭಾಗ ನಡೆದಿದೆ. ನಂಜನಗೂಡಿನ ಈದ್ಗಾ ಮೈದಾನದ ನಿವಾಸಿ ಮುಬಾರಕ್ (28) ಮೃತ ಯುವಕ. ಮುಬಾರಕ್ ರಸ್ತೆ ದಾಟುತ್ತಿದ್ದ ವೇಳೆ ಕೆಎಸ್​​ಆರ್​ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ನಂಜನಗೂಡಿನ ಸಂಚಾರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಈ ಬಾಲಕನ ಸಮಯಪ್ರಜ್ಞೆಗೊಂದು ಸಲಾಂ, ರೈಲು ಅಪಘಾತ ತಪ್ಪಿಸಿ ನೂರಾರು ಜನರ ಪ್ರಾಣ ಉಳಿಸಿದ ಪೋರ

ವಿದ್ಯುತ್ ಸ್ಪರ್ಶದಿಂದ ಎತ್ತು ಸಾವು

ಇನ್ನು ನಂಜನಗೂಡು ತಾಲೂಕಿನ ಕೋಣನೂರು ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ ಎತ್ತು ಸಾವೀಗೀಡಾಗಿದ್ದು, ರೈತ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ರೈತ ಪುರುಷೋತ್ತಮ್ ಎಂಬುವರಿಗೆ ಸೇರಿದ ಎತ್ತು ವಿದ್ಯುತ್​ ತಂತಿ ತುಳಿದ ಪರಿಣಾಮ ಮೃತಪಟ್ಟಿದೆ. ಸ್ಥಳಕ್ಕೆ ಚೆಸ್ಕಾಂ ಜೂನಿಯರ್ ಇಂಜಿನಿಯರ್ ಮಂಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೊಡ್ಡ ಕವಲಂದೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್