ಬೆಂಗಳೂರು: ಬೈಕ್​, ಆಟೋ ಮತ್ತು ಲಾರಿ ಮಧ್ಯೆ ಅಪಘಾತ; ಕಾಲು ಕಳೆದುಕೊಂಡ ಯುವತಿ

ಯಶವಂತಪುರ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಬೈಕ್-ಆಟೋ ಮತ್ತು ಲಾರಿ ಮಧ್ಯೆ ಅಪಘಾತ ಸಂಭವಿಸಿ ಇಬ್ಬರು ದ್ವಿಚಕ್ರ ವಾಹನ ​ ಸವಾರರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರು: ಬೈಕ್​, ಆಟೋ ಮತ್ತು ಲಾರಿ ಮಧ್ಯೆ ಅಪಘಾತ; ಕಾಲು ಕಳೆದುಕೊಂಡ ಯುವತಿ
ಅಪಘಾತದಲ್ಲಿ ಗಾಯಗೊಂಡ ಸವಾರರು
Edited By:

Updated on: Oct 01, 2023 | 7:50 AM

ಬೆಂಗಳೂರು ಅ.1: ಯಶವಂತಪುರ (Yashawantpura) ಸಂಚಾರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಬೈಕ್-ಆಟೋ ಮತ್ತು ಲಾರಿ ಮಧ್ಯೆ ಅಪಘಾತ (Accident) ಸಂಭವಿಸಿ ಇಬ್ಬರು ದ್ವಿಚಕ್ರ ವಾಹನ ​ ಸವಾರರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಓವರ್​ ಟೇಕ್​ ಮಾಡಲು ಹೋಗಿ ಆಟೋ ಮುಂದೆ ಹೋಗುತ್ತಿದ್ದ ಬೈಕ್​ಗೆ​​ ಡಿಕ್ಕಿ ಹೊಡೆದು, ಪರಾರಿಯಾಗಿದ್ದಾನೆ. ಆಟೋ ಡಿಕ್ಕಿಯಿಂದಾಗಿ ಇಬ್ಬರು ಬೈಕ್​​ ಸವಾರರು ರಸ್ತೆ ಮೇಲೆ ಬಿದಿದ್ದಾರೆ. ಕೆಳೆಗೆ ಬಿದ್ದ ಸವಾರರ ಮೇಲೆ ಹಿಂದಿನಿಂದ ಬಂದ ಲಾರಿ ಹರಿದಿದೆ. ಇದರಿಂದ ಯುವತಿ ಕಾಲು ಕಳೆದುಕೊಂಡಿದ್ದಾಳೆ. ಯುವಕನಿಗೆ ಗಂಭೀರವಾಗಿ ಗಾಯವಾಗಿದೆ.

ಕೆಎಸ್​​ಆರ್​ಟಿಸಿ ಬಸ್ ಡಿಕ್ಕಿ ಹೊಡೆದು ಯುವಕ ಸಾವು

ಮೈಸೂರು ಅ.01: ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಂಜನಗೂಡಿನ ಜೆಎಸ್ಎಸ್ ಪಾಲಿಟೆಕ್ನಿಕ್ ಕಾಲೇಜು ಮುಂಭಾಗ ನಡೆದಿದೆ. ನಂಜನಗೂಡಿನ ಈದ್ಗಾ ಮೈದಾನದ ನಿವಾಸಿ ಮುಬಾರಕ್ (28) ಮೃತ ಯುವಕ. ಮುಬಾರಕ್ ರಸ್ತೆ ದಾಟುತ್ತಿದ್ದ ವೇಳೆ ಕೆಎಸ್​​ಆರ್​ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ನಂಜನಗೂಡಿನ ಸಂಚಾರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಈ ಬಾಲಕನ ಸಮಯಪ್ರಜ್ಞೆಗೊಂದು ಸಲಾಂ, ರೈಲು ಅಪಘಾತ ತಪ್ಪಿಸಿ ನೂರಾರು ಜನರ ಪ್ರಾಣ ಉಳಿಸಿದ ಪೋರ

ವಿದ್ಯುತ್ ಸ್ಪರ್ಶದಿಂದ ಎತ್ತು ಸಾವು

ಇನ್ನು ನಂಜನಗೂಡು ತಾಲೂಕಿನ ಕೋಣನೂರು ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ ಎತ್ತು ಸಾವೀಗೀಡಾಗಿದ್ದು, ರೈತ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ರೈತ ಪುರುಷೋತ್ತಮ್ ಎಂಬುವರಿಗೆ ಸೇರಿದ ಎತ್ತು ವಿದ್ಯುತ್​ ತಂತಿ ತುಳಿದ ಪರಿಣಾಮ ಮೃತಪಟ್ಟಿದೆ. ಸ್ಥಳಕ್ಕೆ ಚೆಸ್ಕಾಂ ಜೂನಿಯರ್ ಇಂಜಿನಿಯರ್ ಮಂಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೊಡ್ಡ ಕವಲಂದೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us