AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಿ ಮೇಲೆ ಹರಿದ ತ್ರಿಬಲ್​ ರೈಡರ್ಸ್​​​ ಬೈಕ್​: ವಿಡಿಯೋ ವೈರಲ್​

ಆಗಸ್ಟ್​ 4 ರಂದು ಬೆಂಗಳೂರಿನ ರಸ್ತೆಯೊಂದರಲ್ಲಿ ಮನಕಲಕುವ ಘಟನೆ ನಡೆದಿದೆ. ದಿಢೀರನೆ ಅಡ್ಡ ಬಂದ ನಾಯಿ ಮೇಲೆ ಬೈಕ್​ನ ಹಿಂದಿನ ಚಕ್ರ ಹಿರದಿದ್ದು, ನಾಯಿ ನಡುರಸ್ತೆಯಲ್ಲಿ ನರಾಳಾಡಿದ ದೃಶ್ಯ ಮನಕಲಕುವಂತಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ನಾಯಿ ಮೇಲೆ ಹರಿದ ತ್ರಿಬಲ್​ ರೈಡರ್ಸ್​​​ ಬೈಕ್​: ವಿಡಿಯೋ ವೈರಲ್​
ನಾಯಿ ಮೇಲೆ ಹರಿದ ಬೈಕ್​
ವಿವೇಕ ಬಿರಾದಾರ
|

Updated on:Aug 06, 2024 | 11:35 AM

Share

ಬೆಂಗಳೂರು, ಆಗಸ್ಟ್​ 06: ದಿಢೀರನೆ ಅಡ್ಡ ಬಂದ ಪರಿಣಾಮ ನಾಯಿಯ (Dog) ಮೇಲೆ ದ್ವೀಚಕ್ರ ವಾಹನ ಹರಿದ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ನಾಯಿ ಮೇಲೆ ದ್ವೀಚಕ್ರ ವಾಹನ (Bike) ಹರಿದ ವಿಡಿಯೋ ಹಿಂದಿನ ಕಾರಿನ ಡ್ಯಾಶ್​​​​ಬೋರ್ಡ್​ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ವೈರಲ್​ ಆಗುತ್ತಿದೆ. ಆಗಸ್ಟ್​​ 4 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಹೆಲ್ಮೇಟ್​ ಧರಿಸದೆ, ಬೈಕ್​​ನಲ್ಲಿ ಮೂವರು ಸಾಗುತ್ತಿದ್ದರು. ಈ ವೇಳೆ ನಾಯಿ ಓಡುತ್ತ ರಸ್ತೆ ಮೇಲೆ ದಿಢೀರನೆ ಬಂದಿದೆ. ಆಗ ಸವಾರ ವಾಹನವನ್ನು ಸ್ಲೋ ಮಾಡಿ ಮುಂದಿನ ಚಕ್ರ ನಾಯಿ ಮೇಲೆ ಹರಿಯದಂತೆ ತಪ್ಪಿಸಿದ್ದಾನೆ. ಆದರೆ, ಹಿಂದಿನ ಚಕ್ರ ನಾಯಿ ಮೇಲೆ ಹರಿದಿದೆ. ಇದರಿಂದ ನಾಯಿ ಕಾಲಿಗೆ ಪೆಟ್ಟಾಗಿದೆ. ಬಳಿಕ ವಾಹನ ಸವಾರ ಬೈಕ್​ ನಿಲ್ಲಿಸಿ ನಾಯಿ ಬಳಿ ಬಂದು ಏನಾಗಿದೆ ಎಂದು ಗಮನಿಸಿದ್ದಾನೆ. ಸ್ಥಳೀಯರು ನಾಯಿ ಬಳಿ ಬಂದು ಅದನ್ನು ಸುರಕ್ಷಿತವಾಗಿ ರಸ್ತೆಬದಿಗೆ ಕರೆದೊಯ್ದರು.

ಈ ವಿಡಿಯೋವನ್ನು ನಾನು ವಾಚಿಂಗ್​​ ಎಂಬ ಎಕ್ಸ್​ ಖಾತೆದಾರ ಟ್ವೀಟ್​​ ಮಾಡಿದ್ದು, ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಎಂದು ಬೆಂಗಳೂರು ನಗರ ಪೊಲೀಸ್​​ ಟ್ಯಾಗ್​ ಮಾಡಿ ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಈ ರಸ್ತೆಯಲ್ಲಿ 1 ವಾರ ವಾಹನ ಸಂಚಾರ ಬಂದ್​!

ಇದಕ್ಕೆ ಪ್ರತಿಕ್ರಿಯಿಸಿದ ನಗರ ಪೊಲೀಸರು ಸಂಬಂಧಪಟ್ಟ ಪ್ರದೇಶದ ಪೊಲೀಸರಿಗೆ ವಿಚಾರ ತಿಳಿಸಲಾಗುವುದು ಮತ್ತು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿಲಾಗುವುದು ಎಂದು ತಿಳಿಸಿದರು.

ದ್ವೀಚಕ್ರ ವಾಹನದಲ್ಲಿ ಹೋಗುವಾಗ ನಿಧಾನ ಮತ್ತು ಹೆಲ್ಮೇಟ್​ ಧರಿಸಿ ಸಂಚರಿಸಬೇಕೆಂದು ಬೆಂಗಳೂರು ನಗರ ಸಂಚಾರ ಪೊಲೀಸರು ಸೂಚನೆ ನೀಡುತ್ತಿದ್ದರೂ, ಸವಾರರು ಮಾತ್ರ ಪಾಲನೆ ಮಾಡುತ್ತಿಲ್ಲ. ಸಂಚಾರಿ ನಿಯಮಗಳನ್ನು ಉಲ್ಲಂಘನೆ ಮಾಡುತ್ತಲೇ ಇದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:32 am, Tue, 6 August 24

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?