AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಿ ಮೇಲೆ ಹರಿದ ತ್ರಿಬಲ್​ ರೈಡರ್ಸ್​​​ ಬೈಕ್​: ವಿಡಿಯೋ ವೈರಲ್​

ಆಗಸ್ಟ್​ 4 ರಂದು ಬೆಂಗಳೂರಿನ ರಸ್ತೆಯೊಂದರಲ್ಲಿ ಮನಕಲಕುವ ಘಟನೆ ನಡೆದಿದೆ. ದಿಢೀರನೆ ಅಡ್ಡ ಬಂದ ನಾಯಿ ಮೇಲೆ ಬೈಕ್​ನ ಹಿಂದಿನ ಚಕ್ರ ಹಿರದಿದ್ದು, ನಾಯಿ ನಡುರಸ್ತೆಯಲ್ಲಿ ನರಾಳಾಡಿದ ದೃಶ್ಯ ಮನಕಲಕುವಂತಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ನಾಯಿ ಮೇಲೆ ಹರಿದ ತ್ರಿಬಲ್​ ರೈಡರ್ಸ್​​​ ಬೈಕ್​: ವಿಡಿಯೋ ವೈರಲ್​
ನಾಯಿ ಮೇಲೆ ಹರಿದ ಬೈಕ್​
ವಿವೇಕ ಬಿರಾದಾರ
|

Updated on:Aug 06, 2024 | 11:35 AM

Share

ಬೆಂಗಳೂರು, ಆಗಸ್ಟ್​ 06: ದಿಢೀರನೆ ಅಡ್ಡ ಬಂದ ಪರಿಣಾಮ ನಾಯಿಯ (Dog) ಮೇಲೆ ದ್ವೀಚಕ್ರ ವಾಹನ ಹರಿದ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ನಾಯಿ ಮೇಲೆ ದ್ವೀಚಕ್ರ ವಾಹನ (Bike) ಹರಿದ ವಿಡಿಯೋ ಹಿಂದಿನ ಕಾರಿನ ಡ್ಯಾಶ್​​​​ಬೋರ್ಡ್​ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ವೈರಲ್​ ಆಗುತ್ತಿದೆ. ಆಗಸ್ಟ್​​ 4 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಹೆಲ್ಮೇಟ್​ ಧರಿಸದೆ, ಬೈಕ್​​ನಲ್ಲಿ ಮೂವರು ಸಾಗುತ್ತಿದ್ದರು. ಈ ವೇಳೆ ನಾಯಿ ಓಡುತ್ತ ರಸ್ತೆ ಮೇಲೆ ದಿಢೀರನೆ ಬಂದಿದೆ. ಆಗ ಸವಾರ ವಾಹನವನ್ನು ಸ್ಲೋ ಮಾಡಿ ಮುಂದಿನ ಚಕ್ರ ನಾಯಿ ಮೇಲೆ ಹರಿಯದಂತೆ ತಪ್ಪಿಸಿದ್ದಾನೆ. ಆದರೆ, ಹಿಂದಿನ ಚಕ್ರ ನಾಯಿ ಮೇಲೆ ಹರಿದಿದೆ. ಇದರಿಂದ ನಾಯಿ ಕಾಲಿಗೆ ಪೆಟ್ಟಾಗಿದೆ. ಬಳಿಕ ವಾಹನ ಸವಾರ ಬೈಕ್​ ನಿಲ್ಲಿಸಿ ನಾಯಿ ಬಳಿ ಬಂದು ಏನಾಗಿದೆ ಎಂದು ಗಮನಿಸಿದ್ದಾನೆ. ಸ್ಥಳೀಯರು ನಾಯಿ ಬಳಿ ಬಂದು ಅದನ್ನು ಸುರಕ್ಷಿತವಾಗಿ ರಸ್ತೆಬದಿಗೆ ಕರೆದೊಯ್ದರು.

ಈ ವಿಡಿಯೋವನ್ನು ನಾನು ವಾಚಿಂಗ್​​ ಎಂಬ ಎಕ್ಸ್​ ಖಾತೆದಾರ ಟ್ವೀಟ್​​ ಮಾಡಿದ್ದು, ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಎಂದು ಬೆಂಗಳೂರು ನಗರ ಪೊಲೀಸ್​​ ಟ್ಯಾಗ್​ ಮಾಡಿ ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಈ ರಸ್ತೆಯಲ್ಲಿ 1 ವಾರ ವಾಹನ ಸಂಚಾರ ಬಂದ್​!

ಇದಕ್ಕೆ ಪ್ರತಿಕ್ರಿಯಿಸಿದ ನಗರ ಪೊಲೀಸರು ಸಂಬಂಧಪಟ್ಟ ಪ್ರದೇಶದ ಪೊಲೀಸರಿಗೆ ವಿಚಾರ ತಿಳಿಸಲಾಗುವುದು ಮತ್ತು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿಲಾಗುವುದು ಎಂದು ತಿಳಿಸಿದರು.

ದ್ವೀಚಕ್ರ ವಾಹನದಲ್ಲಿ ಹೋಗುವಾಗ ನಿಧಾನ ಮತ್ತು ಹೆಲ್ಮೇಟ್​ ಧರಿಸಿ ಸಂಚರಿಸಬೇಕೆಂದು ಬೆಂಗಳೂರು ನಗರ ಸಂಚಾರ ಪೊಲೀಸರು ಸೂಚನೆ ನೀಡುತ್ತಿದ್ದರೂ, ಸವಾರರು ಮಾತ್ರ ಪಾಲನೆ ಮಾಡುತ್ತಿಲ್ಲ. ಸಂಚಾರಿ ನಿಯಮಗಳನ್ನು ಉಲ್ಲಂಘನೆ ಮಾಡುತ್ತಲೇ ಇದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:32 am, Tue, 6 August 24

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ