ನಾಯಿ ಮೇಲೆ ಹರಿದ ತ್ರಿಬಲ್​ ರೈಡರ್ಸ್​​​ ಬೈಕ್​: ವಿಡಿಯೋ ವೈರಲ್​

ಆಗಸ್ಟ್​ 4 ರಂದು ಬೆಂಗಳೂರಿನ ರಸ್ತೆಯೊಂದರಲ್ಲಿ ಮನಕಲಕುವ ಘಟನೆ ನಡೆದಿದೆ. ದಿಢೀರನೆ ಅಡ್ಡ ಬಂದ ನಾಯಿ ಮೇಲೆ ಬೈಕ್​ನ ಹಿಂದಿನ ಚಕ್ರ ಹಿರದಿದ್ದು, ನಾಯಿ ನಡುರಸ್ತೆಯಲ್ಲಿ ನರಾಳಾಡಿದ ದೃಶ್ಯ ಮನಕಲಕುವಂತಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ನಾಯಿ ಮೇಲೆ ಹರಿದ ತ್ರಿಬಲ್​ ರೈಡರ್ಸ್​​​ ಬೈಕ್​: ವಿಡಿಯೋ ವೈರಲ್​
ನಾಯಿ ಮೇಲೆ ಹರಿದ ಬೈಕ್​
Follow us
|

Updated on:Aug 06, 2024 | 11:35 AM

ಬೆಂಗಳೂರು, ಆಗಸ್ಟ್​ 06: ದಿಢೀರನೆ ಅಡ್ಡ ಬಂದ ಪರಿಣಾಮ ನಾಯಿಯ (Dog) ಮೇಲೆ ದ್ವೀಚಕ್ರ ವಾಹನ ಹರಿದ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ನಾಯಿ ಮೇಲೆ ದ್ವೀಚಕ್ರ ವಾಹನ (Bike) ಹರಿದ ವಿಡಿಯೋ ಹಿಂದಿನ ಕಾರಿನ ಡ್ಯಾಶ್​​​​ಬೋರ್ಡ್​ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ವೈರಲ್​ ಆಗುತ್ತಿದೆ. ಆಗಸ್ಟ್​​ 4 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಹೆಲ್ಮೇಟ್​ ಧರಿಸದೆ, ಬೈಕ್​​ನಲ್ಲಿ ಮೂವರು ಸಾಗುತ್ತಿದ್ದರು. ಈ ವೇಳೆ ನಾಯಿ ಓಡುತ್ತ ರಸ್ತೆ ಮೇಲೆ ದಿಢೀರನೆ ಬಂದಿದೆ. ಆಗ ಸವಾರ ವಾಹನವನ್ನು ಸ್ಲೋ ಮಾಡಿ ಮುಂದಿನ ಚಕ್ರ ನಾಯಿ ಮೇಲೆ ಹರಿಯದಂತೆ ತಪ್ಪಿಸಿದ್ದಾನೆ. ಆದರೆ, ಹಿಂದಿನ ಚಕ್ರ ನಾಯಿ ಮೇಲೆ ಹರಿದಿದೆ. ಇದರಿಂದ ನಾಯಿ ಕಾಲಿಗೆ ಪೆಟ್ಟಾಗಿದೆ. ಬಳಿಕ ವಾಹನ ಸವಾರ ಬೈಕ್​ ನಿಲ್ಲಿಸಿ ನಾಯಿ ಬಳಿ ಬಂದು ಏನಾಗಿದೆ ಎಂದು ಗಮನಿಸಿದ್ದಾನೆ. ಸ್ಥಳೀಯರು ನಾಯಿ ಬಳಿ ಬಂದು ಅದನ್ನು ಸುರಕ್ಷಿತವಾಗಿ ರಸ್ತೆಬದಿಗೆ ಕರೆದೊಯ್ದರು.

ಈ ವಿಡಿಯೋವನ್ನು ನಾನು ವಾಚಿಂಗ್​​ ಎಂಬ ಎಕ್ಸ್​ ಖಾತೆದಾರ ಟ್ವೀಟ್​​ ಮಾಡಿದ್ದು, ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಎಂದು ಬೆಂಗಳೂರು ನಗರ ಪೊಲೀಸ್​​ ಟ್ಯಾಗ್​ ಮಾಡಿ ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಈ ರಸ್ತೆಯಲ್ಲಿ 1 ವಾರ ವಾಹನ ಸಂಚಾರ ಬಂದ್​!

ಇದಕ್ಕೆ ಪ್ರತಿಕ್ರಿಯಿಸಿದ ನಗರ ಪೊಲೀಸರು ಸಂಬಂಧಪಟ್ಟ ಪ್ರದೇಶದ ಪೊಲೀಸರಿಗೆ ವಿಚಾರ ತಿಳಿಸಲಾಗುವುದು ಮತ್ತು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿಲಾಗುವುದು ಎಂದು ತಿಳಿಸಿದರು.

ದ್ವೀಚಕ್ರ ವಾಹನದಲ್ಲಿ ಹೋಗುವಾಗ ನಿಧಾನ ಮತ್ತು ಹೆಲ್ಮೇಟ್​ ಧರಿಸಿ ಸಂಚರಿಸಬೇಕೆಂದು ಬೆಂಗಳೂರು ನಗರ ಸಂಚಾರ ಪೊಲೀಸರು ಸೂಚನೆ ನೀಡುತ್ತಿದ್ದರೂ, ಸವಾರರು ಮಾತ್ರ ಪಾಲನೆ ಮಾಡುತ್ತಿಲ್ಲ. ಸಂಚಾರಿ ನಿಯಮಗಳನ್ನು ಉಲ್ಲಂಘನೆ ಮಾಡುತ್ತಲೇ ಇದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:32 am, Tue, 6 August 24

‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ