AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಿ ಮೇಲೆ ಹರಿದ ತ್ರಿಬಲ್​ ರೈಡರ್ಸ್​​​ ಬೈಕ್​: ವಿಡಿಯೋ ವೈರಲ್​

ಆಗಸ್ಟ್​ 4 ರಂದು ಬೆಂಗಳೂರಿನ ರಸ್ತೆಯೊಂದರಲ್ಲಿ ಮನಕಲಕುವ ಘಟನೆ ನಡೆದಿದೆ. ದಿಢೀರನೆ ಅಡ್ಡ ಬಂದ ನಾಯಿ ಮೇಲೆ ಬೈಕ್​ನ ಹಿಂದಿನ ಚಕ್ರ ಹಿರದಿದ್ದು, ನಾಯಿ ನಡುರಸ್ತೆಯಲ್ಲಿ ನರಾಳಾಡಿದ ದೃಶ್ಯ ಮನಕಲಕುವಂತಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ನಾಯಿ ಮೇಲೆ ಹರಿದ ತ್ರಿಬಲ್​ ರೈಡರ್ಸ್​​​ ಬೈಕ್​: ವಿಡಿಯೋ ವೈರಲ್​
ನಾಯಿ ಮೇಲೆ ಹರಿದ ಬೈಕ್​
ವಿವೇಕ ಬಿರಾದಾರ
|

Updated on:Aug 06, 2024 | 11:35 AM

Share

ಬೆಂಗಳೂರು, ಆಗಸ್ಟ್​ 06: ದಿಢೀರನೆ ಅಡ್ಡ ಬಂದ ಪರಿಣಾಮ ನಾಯಿಯ (Dog) ಮೇಲೆ ದ್ವೀಚಕ್ರ ವಾಹನ ಹರಿದ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ನಾಯಿ ಮೇಲೆ ದ್ವೀಚಕ್ರ ವಾಹನ (Bike) ಹರಿದ ವಿಡಿಯೋ ಹಿಂದಿನ ಕಾರಿನ ಡ್ಯಾಶ್​​​​ಬೋರ್ಡ್​ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ವೈರಲ್​ ಆಗುತ್ತಿದೆ. ಆಗಸ್ಟ್​​ 4 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಹೆಲ್ಮೇಟ್​ ಧರಿಸದೆ, ಬೈಕ್​​ನಲ್ಲಿ ಮೂವರು ಸಾಗುತ್ತಿದ್ದರು. ಈ ವೇಳೆ ನಾಯಿ ಓಡುತ್ತ ರಸ್ತೆ ಮೇಲೆ ದಿಢೀರನೆ ಬಂದಿದೆ. ಆಗ ಸವಾರ ವಾಹನವನ್ನು ಸ್ಲೋ ಮಾಡಿ ಮುಂದಿನ ಚಕ್ರ ನಾಯಿ ಮೇಲೆ ಹರಿಯದಂತೆ ತಪ್ಪಿಸಿದ್ದಾನೆ. ಆದರೆ, ಹಿಂದಿನ ಚಕ್ರ ನಾಯಿ ಮೇಲೆ ಹರಿದಿದೆ. ಇದರಿಂದ ನಾಯಿ ಕಾಲಿಗೆ ಪೆಟ್ಟಾಗಿದೆ. ಬಳಿಕ ವಾಹನ ಸವಾರ ಬೈಕ್​ ನಿಲ್ಲಿಸಿ ನಾಯಿ ಬಳಿ ಬಂದು ಏನಾಗಿದೆ ಎಂದು ಗಮನಿಸಿದ್ದಾನೆ. ಸ್ಥಳೀಯರು ನಾಯಿ ಬಳಿ ಬಂದು ಅದನ್ನು ಸುರಕ್ಷಿತವಾಗಿ ರಸ್ತೆಬದಿಗೆ ಕರೆದೊಯ್ದರು.

ಈ ವಿಡಿಯೋವನ್ನು ನಾನು ವಾಚಿಂಗ್​​ ಎಂಬ ಎಕ್ಸ್​ ಖಾತೆದಾರ ಟ್ವೀಟ್​​ ಮಾಡಿದ್ದು, ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಎಂದು ಬೆಂಗಳೂರು ನಗರ ಪೊಲೀಸ್​​ ಟ್ಯಾಗ್​ ಮಾಡಿ ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಈ ರಸ್ತೆಯಲ್ಲಿ 1 ವಾರ ವಾಹನ ಸಂಚಾರ ಬಂದ್​!

ಇದಕ್ಕೆ ಪ್ರತಿಕ್ರಿಯಿಸಿದ ನಗರ ಪೊಲೀಸರು ಸಂಬಂಧಪಟ್ಟ ಪ್ರದೇಶದ ಪೊಲೀಸರಿಗೆ ವಿಚಾರ ತಿಳಿಸಲಾಗುವುದು ಮತ್ತು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿಲಾಗುವುದು ಎಂದು ತಿಳಿಸಿದರು.

ದ್ವೀಚಕ್ರ ವಾಹನದಲ್ಲಿ ಹೋಗುವಾಗ ನಿಧಾನ ಮತ್ತು ಹೆಲ್ಮೇಟ್​ ಧರಿಸಿ ಸಂಚರಿಸಬೇಕೆಂದು ಬೆಂಗಳೂರು ನಗರ ಸಂಚಾರ ಪೊಲೀಸರು ಸೂಚನೆ ನೀಡುತ್ತಿದ್ದರೂ, ಸವಾರರು ಮಾತ್ರ ಪಾಲನೆ ಮಾಡುತ್ತಿಲ್ಲ. ಸಂಚಾರಿ ನಿಯಮಗಳನ್ನು ಉಲ್ಲಂಘನೆ ಮಾಡುತ್ತಲೇ ಇದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:32 am, Tue, 6 August 24

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ