AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಿ ಮೇಲೆ ಹರಿದ ತ್ರಿಬಲ್​ ರೈಡರ್ಸ್​​​ ಬೈಕ್​: ವಿಡಿಯೋ ವೈರಲ್​

ಆಗಸ್ಟ್​ 4 ರಂದು ಬೆಂಗಳೂರಿನ ರಸ್ತೆಯೊಂದರಲ್ಲಿ ಮನಕಲಕುವ ಘಟನೆ ನಡೆದಿದೆ. ದಿಢೀರನೆ ಅಡ್ಡ ಬಂದ ನಾಯಿ ಮೇಲೆ ಬೈಕ್​ನ ಹಿಂದಿನ ಚಕ್ರ ಹಿರದಿದ್ದು, ನಾಯಿ ನಡುರಸ್ತೆಯಲ್ಲಿ ನರಾಳಾಡಿದ ದೃಶ್ಯ ಮನಕಲಕುವಂತಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ನಾಯಿ ಮೇಲೆ ಹರಿದ ತ್ರಿಬಲ್​ ರೈಡರ್ಸ್​​​ ಬೈಕ್​: ವಿಡಿಯೋ ವೈರಲ್​
ನಾಯಿ ಮೇಲೆ ಹರಿದ ಬೈಕ್​
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Aug 06, 2024 | 11:35 AM

Share

ಬೆಂಗಳೂರು, ಆಗಸ್ಟ್​ 06: ದಿಢೀರನೆ ಅಡ್ಡ ಬಂದ ಪರಿಣಾಮ ನಾಯಿಯ (Dog) ಮೇಲೆ ದ್ವೀಚಕ್ರ ವಾಹನ ಹರಿದ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ನಾಯಿ ಮೇಲೆ ದ್ವೀಚಕ್ರ ವಾಹನ (Bike) ಹರಿದ ವಿಡಿಯೋ ಹಿಂದಿನ ಕಾರಿನ ಡ್ಯಾಶ್​​​​ಬೋರ್ಡ್​ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ವೈರಲ್​ ಆಗುತ್ತಿದೆ. ಆಗಸ್ಟ್​​ 4 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಹೆಲ್ಮೇಟ್​ ಧರಿಸದೆ, ಬೈಕ್​​ನಲ್ಲಿ ಮೂವರು ಸಾಗುತ್ತಿದ್ದರು. ಈ ವೇಳೆ ನಾಯಿ ಓಡುತ್ತ ರಸ್ತೆ ಮೇಲೆ ದಿಢೀರನೆ ಬಂದಿದೆ. ಆಗ ಸವಾರ ವಾಹನವನ್ನು ಸ್ಲೋ ಮಾಡಿ ಮುಂದಿನ ಚಕ್ರ ನಾಯಿ ಮೇಲೆ ಹರಿಯದಂತೆ ತಪ್ಪಿಸಿದ್ದಾನೆ. ಆದರೆ, ಹಿಂದಿನ ಚಕ್ರ ನಾಯಿ ಮೇಲೆ ಹರಿದಿದೆ. ಇದರಿಂದ ನಾಯಿ ಕಾಲಿಗೆ ಪೆಟ್ಟಾಗಿದೆ. ಬಳಿಕ ವಾಹನ ಸವಾರ ಬೈಕ್​ ನಿಲ್ಲಿಸಿ ನಾಯಿ ಬಳಿ ಬಂದು ಏನಾಗಿದೆ ಎಂದು ಗಮನಿಸಿದ್ದಾನೆ. ಸ್ಥಳೀಯರು ನಾಯಿ ಬಳಿ ಬಂದು ಅದನ್ನು ಸುರಕ್ಷಿತವಾಗಿ ರಸ್ತೆಬದಿಗೆ ಕರೆದೊಯ್ದರು.

ಈ ವಿಡಿಯೋವನ್ನು ನಾನು ವಾಚಿಂಗ್​​ ಎಂಬ ಎಕ್ಸ್​ ಖಾತೆದಾರ ಟ್ವೀಟ್​​ ಮಾಡಿದ್ದು, ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಎಂದು ಬೆಂಗಳೂರು ನಗರ ಪೊಲೀಸ್​​ ಟ್ಯಾಗ್​ ಮಾಡಿ ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಈ ರಸ್ತೆಯಲ್ಲಿ 1 ವಾರ ವಾಹನ ಸಂಚಾರ ಬಂದ್​!

ಇದಕ್ಕೆ ಪ್ರತಿಕ್ರಿಯಿಸಿದ ನಗರ ಪೊಲೀಸರು ಸಂಬಂಧಪಟ್ಟ ಪ್ರದೇಶದ ಪೊಲೀಸರಿಗೆ ವಿಚಾರ ತಿಳಿಸಲಾಗುವುದು ಮತ್ತು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿಲಾಗುವುದು ಎಂದು ತಿಳಿಸಿದರು.

ದ್ವೀಚಕ್ರ ವಾಹನದಲ್ಲಿ ಹೋಗುವಾಗ ನಿಧಾನ ಮತ್ತು ಹೆಲ್ಮೇಟ್​ ಧರಿಸಿ ಸಂಚರಿಸಬೇಕೆಂದು ಬೆಂಗಳೂರು ನಗರ ಸಂಚಾರ ಪೊಲೀಸರು ಸೂಚನೆ ನೀಡುತ್ತಿದ್ದರೂ, ಸವಾರರು ಮಾತ್ರ ಪಾಲನೆ ಮಾಡುತ್ತಿಲ್ಲ. ಸಂಚಾರಿ ನಿಯಮಗಳನ್ನು ಉಲ್ಲಂಘನೆ ಮಾಡುತ್ತಲೇ ಇದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:32 am, Tue, 6 August 24

Follow Us
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!