AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMTC Accident: ಬಿಎಂಟಿಸಿ ಬಸ್​ ಹರಿದು ಬೈಕ್​ ಸವಾರ ಸ್ಥಳದಲ್ಲೇ ಸಾವು

ಬಿಎಂಟಿಸಿ ಬಸ್​ ಹರಿದು ಬೈಕ್​ ಸವಾರ ಮೃತಪಟ್ಟ ಘಟನೆ ಬೆಂಗಳೂರಿನ ಸರ್ಜಾಪುರದ ಯಮರೆ ಬಳಿ ನಡೆದಿದೆ. ಸ್ಥಳಕ್ಕೆ ಸರ್ಜಾಪುರ ಪೊಲೀಸರು ಭೇಟಿ ನೀಡಿದ್ದು ಮೃತದೇಹ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.

BMTC Accident: ಬಿಎಂಟಿಸಿ ಬಸ್​ ಹರಿದು ಬೈಕ್​ ಸವಾರ ಸ್ಥಳದಲ್ಲೇ ಸಾವು
ಬಿಎಂಟಿಸಿ ಬಸ್​ ಹರಿದು ಬೈಕ್​ ಸವಾರ ಸ್ಥಳದಲ್ಲೇ ಸಾವು
TV9 Web
| Edited By: |

Updated on:Sep 15, 2022 | 11:55 AM

Share

ಆನೇಕಲ್: ಬಿಎಂಟಿಸಿ ಬಸ್​ ಹರಿದು ಬೈಕ್​ ಸವಾರ ಮೃತಪಟ್ಟ ಘಟನೆ ಬೆಂಗಳೂರಿನ ಸರ್ಜಾಪುರದ ಯಮರೆ ಬಳಿ ನಡೆದಿದೆ. ಬೈಕ್​ಗೆ​​ ಡಿಕ್ಕಿಯಾಗಿ ಬಸ್​ ಸವಾರನ ಮೇಲೆ ಹರಿದಿದೆ.​​ ಇದರಿಂದ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸ್ಥಳಕ್ಕೆ ಸರ್ಜಾಪುರ ಪೊಲೀಸರು ಭೇಟಿ ನೀಡಿದ್ದು ಮೃತದೇಹ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.

ಅಪಘಾತದಲ್ಲಿ ಗಾಯಗೊಂಡಿದ್ದ ಶಾಲಾ ಬಾಲಕ ಕೊನೆಯುಸಿರು

ಖಾಸಗಿ ಶಾಲೆಯ ಬಸ್ ಗೆ ಸರ್ಕಾರಿ ಶಾಲೆ ಬಾಲಕ ಬಲಿಯಾಗಿದ್ದಾನೆ. ಸೆ. 14ರ ಬೆಳಗ್ಗೆ ಮುನ್ನೆಕೊಳಲು ಸರ್ಕಾರಿ ಶಾಲೆಯ ವಿದ್ಯಾರ್ಥಿ ನಿತೀಶ್(6) ಶಾಲೆಗೆ ನಡೆದುಕೊಂಡು ಹೋಗುವಾಗ ರಾಯನ್ ಇಂಟರ್ ನ್ಯಾಷನಲ್ ಶಾಲೆ ಬಸ್ ಡಿಕ್ಕಿ ಹೊಡೆದಿತ್ತು. ಈ ವೇಳೆ ಕುಟುಂಬಸ್ಥರು ಆಸ್ಪತ್ರೆಗಳನ್ನು ಅಲೆದಾಡಿ ಚಿಕಿತ್ಸೆ ಕೊಡಿಸಿದ್ದಾರೆ. ಆದ್ರೆ ಇಂದು ಚಿಕಿತ್ಸೆ ಫಲಿಸದೆ ಬಾಲಕ ಮೃತಪಟ್ಟಿದ್ದಾನೆ.

ಶಾಲಾ ವಾಹನ ಡಿಕ್ಕಿಯಾಗಿ ಬಾಲಕನ ತಲೆಗೆ ಗಾಯ ಆಗಿತ್ತು. ಬಾಲಕನ ಚಿಕಿತ್ಸೆಗಾಗಿ ಮೂರು ಆಸ್ಪತ್ರೆಗಳಿಗೆ ಪೋಷಕರು ಅಲೆದಾಡಿದ್ದರು. ಮೂರು ಆಸ್ಪತ್ರೆಗಳಲ್ಲೂ ಬಾಲಕನಿಗೆ ಚಿಕಿತ್ಸೆ ನೀಡದ ವೈದ್ಯರು. ಮತ್ತೊಂದು ಆಸ್ಪತ್ರೆಗೆ ತೆರಳುತ್ತಿದ್ದಾಗ ಟ್ರಾಫಿಕ್ ಜಾಮ್​​ ಸಮಸ್ಯೆ ಎದುರಾಗಿತ್ತು. ಆದ್ರೆ ಆಸ್ಪತ್ರೆಗೆ ದಾಖಲಾದ ಕೆಲವೇ ಕ್ಷಣಗಳಲ್ಲಿ ಬಾಲಕ ಸಾವನ್ನಪ್ಪಿದ್ದಾನೆ.

ಮಗುವನ್ನು ಗಮನಿಸದೆ ಬೀಗ ಹಾಕಿಕೊಂಡು ಹೋದ ಅಂಗನವಾಡಿ ಶಿಕ್ಷಕಿ

ಅಂಗನವಾಡಿ ಶಿಕ್ಷಕಿ ಹಾಗೂ ಸಹಾಯಕಿಯ ನಿರ್ಲಕ್ಷ್ಯದಿಂದಾಗಿ ಮಗುವೊಂದು ಶೌಚಾಲಯ ದಲ್ಲಿಯೇ ಕಾಲ‌ಕಳೆದಿರುವ ಘಟನೆ ಕೋಲಾರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಆರೋಹಳ್ಳಿ ಗ್ರಾಮದಲ್ಲಿ ಈ ಘಟನೆ ಜರುಗಿದ್ದು, ಅಂಗನವಾಡಿ ಶಿಕ್ಷಕಿ ಹಾಗೂ ಸಹಾಯಕಿಯ ವಿರುದ್ದ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಂಗನವಾಡಿ ಶಿಕ್ಷಕಿ ಸುಧಾ ಹಾಗೂ ಸಹಾಯಕಿ ಶಾರದ ಎಂಬುವರ ಎಡವಟ್ಟಿನಿಂದಾಗಿ, ಗಜೇಂದ್ರ ಎಂಬ ಮಗು ಕೆಲ ಗಂಟೆಗಳ ಕಾಲ ಶೌಚಾಲಯದಲ್ಲಿಯೇ ಬಂಧಿಯಾಗಿದ್ದಾನೆ. ಅಂಗನವಾಡಿಗೆ ಹೋಗಿದ್ದ ಮಗು ಮನೆಗೆ ಬರುವ ವೇಳೆ‌ ಶೌಚಾಲಯಕ್ಕೆ ಹೋಗಿದ್ದು, ಅದನ್ನ ನೋಡದೆ ಶಿಕ್ಷಕಿ ಹಾಗೂ ಸಹಾಯಕಿ ಅಂಗನವಾಡಿ ಶೌಚಾಲಯಕ್ಕೆ ಬೀಗಜಡಿದುಕೊಂಡು ಬಂದಿದ್ದಾರೆ. ನಂತರ ಉರಲ್ಲೆಲ್ಲಾ ಮಗನಿಗಾಗಿ ಹುಡುಕಾಡಿದ ಪೋಷಕರು, ಕೊನೆಗೆ ಅಂಗನವಾಡಿ ಬಳಿ ಬಂದಾಗ. ಶೌಚಾಲಯದಲ್ಲಿ ಮಗು ಅಳುತ್ತಿರುವುದು ಕಂಡು ಬಂದಿದ್ದು, ಶೌಚಾಲಯದಲ್ಲಿ ಮಗು ಪತ್ತೆಯಾಗಿದ್ದಾನೆ. ಅಂಗನವಾಡಿ ಶಿಕ್ಷಕಿ ಹಾಗೂ ಸಹಾಯಕಿ ಬೇಜವಾಬ್ದಾರಿಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು ಮಗುವನ್ನು ಶೌಚಾಲಯದಿಂದ ಹೊರಗೆ ಕರೆತಂದ ವಿಡಿಯೋ ವೈರಲ್ ಆಗಿದೆ.

Published On - 11:37 am, Thu, 15 September 22

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ