AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಎಸ್​ಪಿ ಕಾರಿಗೆ ಡಿಕ್ಕಿ ಹೊಡೆದು ಅವಾಚ್ಯ ಶಬ್ದಗಳಿಂದ ನಿಂದನೆ: ಬೈಕ್ ಸವಾರ ಅರೆಸ್ಟ್

ಬಿಎಂಟಿಎಫ್ ಮಹಿಳಾ ಎಸ್​ಪಿ ಕಾರಿಗೆ ಬೈಕ್ ಸವಾರನೊಬ್ಬ ಡಿಕ್ಕಿ ಹೊಡೆದ ಘಟನೆ ಬೆಂಗಳೂರು ನಗರದ ಗೊರಗುಂಟೆಪಾಳ್ಯದಲ್ಲಿ ನಡೆದಿದೆ. ಡಿಕ್ಕಿ ಹೊಡೆದಿದ್ದಲ್ಲದೆ ಬುದ್ಧಿವಾದ ಹೇಳಲು ಮುಂದಾದ ಎಸ್​ಪಿಗೆ ಅವಾಚ್ಯ ಶಬ್ದಗಳಿಂದ ಸವಾರ ನಿಂದಿಸಿದ್ದಾನೆ. ಈ ಬಗ್ಗೆ ಎಸ್​ಪಿ ನೀಡಿದ ದೂರಿನ ಮೇರೆಗೆ ಆರ್​ಎಂಸಿ ಯಾರ್ಡ್ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮಹಿಳಾ ಎಸ್​ಪಿ ಕಾರಿಗೆ ಡಿಕ್ಕಿ ಹೊಡೆದು ಅವಾಚ್ಯ ಶಬ್ದಗಳಿಂದ ನಿಂದನೆ: ಬೈಕ್ ಸವಾರ ಅರೆಸ್ಟ್
ಸಾಂದರ್ಭಿಕ ಚಿತ್ರ
ರಾಚಪ್ಪಾಜಿ ನಾಯ್ಕ್
| Edited By: |

Updated on: Jan 06, 2024 | 8:46 PM

Share

ಬೆಂಗಳೂರು, ಜ.6: ಬಿಎಂಟಿಎಫ್ ಮಹಿಳಾ ಎಸ್​ಪಿ ಕಾರಿಗೆ ಬೈಕ್ ಸವಾರನೊಬ್ಬ ಡಿಕ್ಕಿ ಹೊಡೆದ ಘಟನೆ ಬೆಂಗಳೂರು (Bengaluru) ನಗರದ ಗೊರಗುಂಟೆಪಾಳ್ಯದಲ್ಲಿ ನಡೆದಿದೆ. ಡಿಕ್ಕಿ (Accident) ಹೊಡೆದಿದ್ದಲ್ಲದೆ ಬುದ್ಧಿವಾದ ಹೇಳಲು ಮುಂದಾದ ಎಸ್​ಪಿಗೆ ಅವಾಚ್ಯ ಶಬ್ದಗಳಿಂದ ಸವಾರ ನಿಂದಿಸಿದ್ದಾನೆ. ಈ ಬಗ್ಗೆ ಎಸ್​ಪಿ ನೀಡಿದ ದೂರಿನ ಮೇರೆಗೆ ಆರ್​ಎಂಸಿ ಯಾರ್ಡ್ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಬಿಎಂಟಿಎಫ್ ಎಸ್​ಪಿಯಾಗಿರುವ ಡಾ. ಶೋಭರಾಣಿ ಅವರು ಕರ್ತವ್ಯ ಮುಗಿಸಿ ಕಾರು ಮೂಲಕ ಮನೆಗೆ ಹಿಂದಿರುಗುತ್ತಿದ್ದಾಗ ಗೊರೆಗುಂಟೆಪಾಳ್ಯ ಜಂಕ್ಷನ್ ಬಳಿ ಬೈಕ್ ಡಿಕ್ಕಿಯಾಗಿದೆ. ಯುವಕನಿಗೆ ಬುದ್ಧಿವಾದ ಹೇಳಲು ಹೋಗಿದ್ದಾಗ ಶೋಭರಾಣಿ ಅವರಿಗೆ ಬೈಕ್ ಸವಾರ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಾನೆ.

ಇದನ್ನೂ ಓದಿ: Viral Video: ವೈರಲ್​​ ಆಗುತ್ತಿದೆ ಎದೆ ಝಲ್ ಎನಿಸುವ ಕಾರು ಅಪಘಾತ 

ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಸಿದ್ದ ಯುವಕನ ವಿರುದ್ಧ ಆರ್ ಎಂಸಿಯಾರ್ಡ್ ಪೊಲೀಸ್ ಠಾಣೆಗೆ ಎಸ್​ಪಿ ಶೋಭರಾಣಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಯುವಕನನ್ನ ಬಂಧಿಸಿ ಜೈಲಿಗೆ ಕಳಿಸಿದ್ದಾರೆ. ಬಂಧಿತ ಆರೋಪಿ ಸಿಎ ವಿದ್ಯಾರ್ಥಿ ಎಂದು ತಿಳಿದುಬಂದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Rachappaji Naik S
Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More