ಮಹಿಳಾ ಎಸ್​ಪಿ ಕಾರಿಗೆ ಡಿಕ್ಕಿ ಹೊಡೆದು ಅವಾಚ್ಯ ಶಬ್ದಗಳಿಂದ ನಿಂದನೆ: ಬೈಕ್ ಸವಾರ ಅರೆಸ್ಟ್

ಬಿಎಂಟಿಎಫ್ ಮಹಿಳಾ ಎಸ್​ಪಿ ಕಾರಿಗೆ ಬೈಕ್ ಸವಾರನೊಬ್ಬ ಡಿಕ್ಕಿ ಹೊಡೆದ ಘಟನೆ ಬೆಂಗಳೂರು ನಗರದ ಗೊರಗುಂಟೆಪಾಳ್ಯದಲ್ಲಿ ನಡೆದಿದೆ. ಡಿಕ್ಕಿ ಹೊಡೆದಿದ್ದಲ್ಲದೆ ಬುದ್ಧಿವಾದ ಹೇಳಲು ಮುಂದಾದ ಎಸ್​ಪಿಗೆ ಅವಾಚ್ಯ ಶಬ್ದಗಳಿಂದ ಸವಾರ ನಿಂದಿಸಿದ್ದಾನೆ. ಈ ಬಗ್ಗೆ ಎಸ್​ಪಿ ನೀಡಿದ ದೂರಿನ ಮೇರೆಗೆ ಆರ್​ಎಂಸಿ ಯಾರ್ಡ್ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮಹಿಳಾ ಎಸ್​ಪಿ ಕಾರಿಗೆ ಡಿಕ್ಕಿ ಹೊಡೆದು ಅವಾಚ್ಯ ಶಬ್ದಗಳಿಂದ ನಿಂದನೆ: ಬೈಕ್ ಸವಾರ ಅರೆಸ್ಟ್
ಸಾಂದರ್ಭಿಕ ಚಿತ್ರ
Edited By: Rakesh Nayak Manchi

Updated on: Jan 06, 2024 | 8:46 PM

ಬೆಂಗಳೂರು, ಜ.6: ಬಿಎಂಟಿಎಫ್ ಮಹಿಳಾ ಎಸ್​ಪಿ ಕಾರಿಗೆ ಬೈಕ್ ಸವಾರನೊಬ್ಬ ಡಿಕ್ಕಿ ಹೊಡೆದ ಘಟನೆ ಬೆಂಗಳೂರು (Bengaluru) ನಗರದ ಗೊರಗುಂಟೆಪಾಳ್ಯದಲ್ಲಿ ನಡೆದಿದೆ. ಡಿಕ್ಕಿ (Accident) ಹೊಡೆದಿದ್ದಲ್ಲದೆ ಬುದ್ಧಿವಾದ ಹೇಳಲು ಮುಂದಾದ ಎಸ್​ಪಿಗೆ ಅವಾಚ್ಯ ಶಬ್ದಗಳಿಂದ ಸವಾರ ನಿಂದಿಸಿದ್ದಾನೆ. ಈ ಬಗ್ಗೆ ಎಸ್​ಪಿ ನೀಡಿದ ದೂರಿನ ಮೇರೆಗೆ ಆರ್​ಎಂಸಿ ಯಾರ್ಡ್ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಬಿಎಂಟಿಎಫ್ ಎಸ್​ಪಿಯಾಗಿರುವ ಡಾ. ಶೋಭರಾಣಿ ಅವರು ಕರ್ತವ್ಯ ಮುಗಿಸಿ ಕಾರು ಮೂಲಕ ಮನೆಗೆ ಹಿಂದಿರುಗುತ್ತಿದ್ದಾಗ ಗೊರೆಗುಂಟೆಪಾಳ್ಯ ಜಂಕ್ಷನ್ ಬಳಿ ಬೈಕ್ ಡಿಕ್ಕಿಯಾಗಿದೆ. ಯುವಕನಿಗೆ ಬುದ್ಧಿವಾದ ಹೇಳಲು ಹೋಗಿದ್ದಾಗ ಶೋಭರಾಣಿ ಅವರಿಗೆ ಬೈಕ್ ಸವಾರ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಾನೆ.

ಇದನ್ನೂ ಓದಿ: Viral Video: ವೈರಲ್​​ ಆಗುತ್ತಿದೆ ಎದೆ ಝಲ್ ಎನಿಸುವ ಕಾರು ಅಪಘಾತ 

ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಸಿದ್ದ ಯುವಕನ ವಿರುದ್ಧ ಆರ್ ಎಂಸಿಯಾರ್ಡ್ ಪೊಲೀಸ್ ಠಾಣೆಗೆ ಎಸ್​ಪಿ ಶೋಭರಾಣಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಯುವಕನನ್ನ ಬಂಧಿಸಿ ಜೈಲಿಗೆ ಕಳಿಸಿದ್ದಾರೆ. ಬಂಧಿತ ಆರೋಪಿ ಸಿಎ ವಿದ್ಯಾರ್ಥಿ ಎಂದು ತಿಳಿದುಬಂದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
Follow Us