AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವೈಜ್ಞಾನಿಕ ಹಂಪ್​​ ಗೆ ಬಿದ್ದು ಕೈ ಮುರಿದುಕೊಂಡ ಬೈಕ್​ ಸವಾರ; ಸಾಮಾಜಿಕ ಜಾಲತಾಣದಲ್ಲಿ ಬಿಬಿಎಂಪಿ ಹಾಗೂ ಸಂಚಾರಿ ಪೊಲೀಸರ ವಿರುದ್ಧ ಆಕ್ರೋಶ

ಜಯನಗರದ ಮೌಂಟ್​​ ಕಾರ್ಮೆಲ್​ ಶಾಲೆ ಸಮೀಪ ಇರುವ ಅವೈಜ್ಞಾನಿಕ ಹಂಪ್​​ ಗೆ ಬಿದ್ದು ಬೈಕ್​ ಸವಾರ ಇರ್ಷಾದ್ ಕೈ ಮುರಿದುಕೊಂಡ ಘಟನೆ ನಡೆದಿದೆ.

ಅವೈಜ್ಞಾನಿಕ ಹಂಪ್​​ ಗೆ ಬಿದ್ದು ಕೈ ಮುರಿದುಕೊಂಡ ಬೈಕ್​ ಸವಾರ; ಸಾಮಾಜಿಕ ಜಾಲತಾಣದಲ್ಲಿ ಬಿಬಿಎಂಪಿ ಹಾಗೂ ಸಂಚಾರಿ ಪೊಲೀಸರ ವಿರುದ್ಧ ಆಕ್ರೋಶ
ಇರ್ಷಾದ್
ಆಯೇಷಾ ಬಾನು
ಆಯೇಷಾ ಬಾನು|

Updated on:Feb 21, 2023 | 9:48 AM

Share

ಬೆಂಗಳೂರು: ಸವಾರರ ಸ್ಪೀಡ್​ಗೆ ಬ್ರೇಕ್ ಹಾಕಲು ನಗರದಲ್ಲಿ ಎಲ್ಲೆಂದರಲ್ಲಿ ಅವೈಜ್ಞಾನಿಕವಾಗಿ ಹಂಪ್​ಗಳನ್ನು ಅಳವಡಿಸಲಾಗಿದೆ. ಇದರಿಂದ ಅನೇಕ ಸವಾರರು ಕಿರಿ ಕಿರಿ ಅನುಭವಿಸುತ್ತಿದ್ದಾರೆ. ಜಯನಗರದ ಮೌಂಟ್​​ ಕಾರ್ಮೆಲ್​ ಶಾಲೆ ಸಮೀಪ ಇರುವ ಅವೈಜ್ಞಾನಿಕ ಹಂಪ್​​ ಗೆ ಬಿದ್ದು ಬೈಕ್​ ಸವಾರ ಇರ್ಷಾದ್ ಕೈ ಮುರಿದುಕೊಂಡ ಘಟನೆ ನಡೆದಿದೆ. ರಾತ್ರಿ ವೇಳೆ ಹಂಪ್​ ಕಾಣದೆ ಬೈಕ್​ ಸ್ಕಿಡ್ ಆಗಿ ಘಟನೆ ಸಂಭವಿಸಿದೆ. ಟ್ವಿಟರ್​ ಹಾಗೂ ಫೇಸ್​​ಬುಕ್​​ ನಲ್ಲಿ ಬಿಬಿಎಂಪಿ ಹಾಗೂ ಸಂಚಾರಿ ಪೊಲೀಸರ ನಿರ್ಲಕ್ಷ್ಯದ ವಿರುದ್ಧ ಸವಾರ ಇರ್ಷಾದ್ ಆಕ್ರೋಶ ಹೊರ ಹಾಕಿದ್ದಾರೆ.

ಪ್ರತಿ ನಿತ್ಯ ನಾಲ್ಕೈದು ಮಂದಿಗೆ ಗಾಯ

ನಿತ್ಯ ಇದೇ ರಸ್ತೆಯಲ್ಲಿ ಮೂರರಿಂದ ನಾಲ್ಕು ಜನ ಬಿದ್ದು ಗಾಯಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಹಂಪ್ಸ್​ ಕಾಣದೆ ಬಿದ್ದು ಹಲವು ಜನರಿಗೆ ಗಂಭೀರ ಗಾಯಗಳಾಗಿವೆ. ಬಿದ್ದಾಗ ಕೆಲವರಿಗೆ ಕೆಲವೊಮ್ಮೆ ಶಸ್ತ್ರಚಿಕಿತ್ಸೆ ಅನಿವಾರ್ಯವಾಗುತ್ತದೆ. ₹50 ಸಾವಿರದಿಂದ ಒಂದೂವರೆ ಲಕ್ಷ ಖರ್ಚು ಮಾಡಬೇಕಾಗುತ್ತದೆ. ಹೀಗಾಗಿ ಬಿಬಿಎಂಪಿ ಅಧಿಕಾರಿಗಳು ಕ್ರಮಕೈಗೊಳ್ಳಿ ಅಂತ ಸ್ಥಳೀಯರು ಆಗ್ರಹಿಸಿದ್ದಾರೆ. ರಾತ್ರಿ ಕೆಲಸ ಮುಗಿಸಿಕೊಂಡು ಜೆಪಿ ನಗರದಿಂದ ಆಡುಗೋಡಿಗೆ ತೆರಳುತ್ತಿದ್ದ ಇರ್ಷಾದ್ ಜಯನಗರದ ಬಳಿಯಿರುವ ಮೌಂಟ್​​ ಕಾರ್ಮೆಲ್​ ಶಾಲೆಯ ಬಳಿ ಬೈಕ್​​ ಸ್ಕಿಡ್​ ಆಗಿ ಬಿದ್ದು ಕೈ ಮುರಿದುಕೊಂಡಿದ್ದಾರೆ. ಕತ್ತಲಿದ್ದರಿಂದ ರಸ್ತೆಯಲ್ಲಿದ್ದ ಹಂಪ್ಸ್​ ಕಾಣದೆ ಬೈಕ್​​ ಸ್ಕಿಡ್​ ಆಗಿದೆ. ಬೈಕ್​ನಿಂದ ಬಿದ್ದಾಗ ಸವಾರ ಇರ್ಷಾದ್​​ ಕೈಗೆ ಗಾಯವಾಗಿತ್ತು. ಹಂಪ್​​ ಮೇಲೆ ಕ್ಯಾಟ್‍ ಐ ಇಲ್ಲದಿರುವುದು ಘಟನೆಗೆ ಕಾರಣವಾಗಿದೆ.

ಇದನ್ನೂ ಓದಿ: ಅಪಘಾತ ತಡೆಗೆ ಬೆಂಗಳೂರಿನಲ್ಲಿ 500 ರೋಡ್ ಹಂಪ್ಸ್​ ನಿರ್ಮಾಣಕ್ಕೆ ಬೇಡಿಕೆ ಇಟ್ಟ ಟ್ರಾಫಿಕ್ ಪೊಲೀಸರು

ಹಂಪ್ಸ್​ ನಿರ್ಮಾಣಕ್ಕೆ ನಿಯಮ ಏನಿರಬೇಕು?

  • ಹಂಪ್ಸ್​​ ವ್ಯಾಸ 17 ಮೀಟರ್ ಹಾಗೂ ಉದ್ದ 3.7 ಮಿಟರ್ ಇರಬೇಕು
  • 0.10 ಮೀಟರ್ ಎತ್ತರ, ವಾಹನ ಚಕ್ರದ ಅಗಲಕ್ಕಿಂತ ಹೆಚ್ಚು ಇರಬೇಕು
  • ಉಬ್ಬುಗಳ ಮೇಲೆ ಕಪ್ಪು, ಬಿಳಿ ಬಣ್ಣದ ಪಟ್ಟಿಯನ್ನ ಬಳಿದಿರಬೇಕು
  • ಕತ್ತಲಿನಲ್ಲಿ ಸೆಲ್ಫ್ ರಿಫ್ಲೆಕ್ಟ್ ಆಗುವ ಪಟ್ಟಿಯನ್ನು ಕೂಡ ಬಳಿದಿರಬೇಕು
  • ರಾತ್ರಿಯಲ್ಲಿ ಸ್ಪಷ್ಟವಾಗಿ ಕಾಣಿಸುವ ಸಲುವಾಗಿ ಕ್ಯಾಟ್‍ ಐಗಳು ಇರಬೇಕು
  • 40 ಮೀಟರ್ ಮೊದಲೇ ಮುಂದೆ ಹಂಪ್ಸ್ ಇದೆ ಎಂಬ ಫಲಕ ಇರಬೇಕು

    ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ 

Published On - 9:48 am, Tue, 21 February 23

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ