AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರವಿಕಾಂತೇಗೌಡ ಅಭಿಮಾನಿ ಎಂದು ಬರೆಸಿಕೊಂಡು ಟ್ರಾಫಿಕ್ ರೂಲ್ಸ್ ಬ್ರೇಕ್; ವಾಹನ ವಶಕ್ಕೆ

Bengaluru News: ಜಯನಗರ ಟ್ರಾಫಿಕ್ ಪೊಲೀಸ್ ಇನ್ಸ್​ಪೆಕ್ಟರ್ ಗಿರೀಶ್ ಬಾಬುಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ರವಿಕಾಂತೇಗೌಡರ ಅಭಿಮಾನಿ ಆದ್ರೆ ಕೈ, ಎದೆ ಮೇಲೆ ಹಚ್ಚೆ ಹಾಕಿಸಿಕೊಳ್ಳಿ. ಬೈಕ್ ಮೇಲೆ ಯಾಕೆ ಬರೆಸಿಕೊಂಡಿರೋದು ಎಂದು ಕೇಳಿದ್ದಾರೆ.

ರವಿಕಾಂತೇಗೌಡ ಅಭಿಮಾನಿ ಎಂದು ಬರೆಸಿಕೊಂಡು ಟ್ರಾಫಿಕ್ ರೂಲ್ಸ್ ಬ್ರೇಕ್; ವಾಹನ ವಶಕ್ಕೆ
ರವಿಕಾಂತೇಗೌಡ ಅಭಿಮಾನಿ ಎಂದು ಬರೆಸಿಕೊಂಡು ಟ್ರಾಫಿಕ್ ರೂಲ್ಸ್ ಬ್ರೇಕ್
TV9 Web
| Edited By: |

Updated on: Sep 11, 2021 | 3:11 PM

Share

ಬೆಂಗಳೂರು: ಸ್ಕೂಟರ್ ಮೇಲೆ ರವಿಕಾಂತೇಗೌಡ ಅಭಿಮಾನಿ ಎಂದು ಬರೆಸಿಕೊಂಡು ಟ್ರಾಫಿಕ್ ನಿಯಮ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದ ಬೈಕ್​ನ್ನು ಜಯನಗರ ಟ್ರಾಫಿಕ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಂಚಾರಿ ವಿಭಾಗ ಜಂಟಿ ಪೊಲೀಸ್ ಆಯುಕ್ತ ಆಗಿರುವ ರವಿಕಾಂತೇಗೌಡ ಹೆಸರು ಬರೆಸಿಕೊಂಡು ನಿಯಮ ಉಲ್ಲಂಘಿಸುತ್ತಿದ್ದವರ ಸ್ಕೂಟರ್ ವಶಪಡಿಸಿಕೊಳ್ಳಲಾಗಿದೆ. ಕೆಎ 05 ಜೆಎಸ್ 2581 ನಂಬರಿನ ಸ್ಕೂಟರ್ ಸೀಜ್ ಮಾಡಲಾಗಿದೆ. ಸ್ವತಃ ರವಿಕಾಂತರೆಗೌಡರ ಆದೇಶದ ಮೇರೆಗೆ ಸ್ಕೂಟರ್ ಸೀಜ್ ಮಾಡಲಾಗಿದೆ.

ಆರ್​ಟಿಐ ಕಾರ್ಯಕರ್ತ ಗಿರೀಶ್ ಬಾಬು ಓಡಿಸುತ್ತಿದ್ದ ವಾಹನ ಇದಾಗಿದ್ದು, ಗಿರೀಶ್, ಪರಮೇಶ್ ಎಂಬ ಸ್ನೇಹಿತನಿಂದ ಸ್ಕೂಟರ್ ಖರೀದಿಸಿಕೊಂಡಿದ್ದರು ಎಂದು ತಿಳಿದುಬಂದಿದೆ. ಆದರೆ ಇವರ ಹೆಸರಿಗೆ ವಾಹನ ವರ್ಗಾವಣೆ ಮಾಡಿಕೊಂಡಿರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. 12.30 ಸುಮಾರಿಗೆ ಜಯನಗರ ಟ್ರಾಫಿಕ್ ಪೊಲೀಸರು ವಾಹನ ಸೀಜ್ ಮಾಡಿ ತಂದಿದ್ದಾರೆ. ಬಳಿಕ, ದಂಡ ಮೊತ್ತ ಪಾವತಿಗೆ ಗಿರೀಶ್ ಬಾಬು ಸಮಯ ಕೇಳಿದ್ದಾರೆ. ಈಗ ಕೊರೊನಾ ಟೈಂ ಹಣ ಇಲ್ಲ ಸಮಯ ಬೇಕು ಎಂದು ಗಿರೀಶ್ ಬಾಬು ಹೇಳಿದ್ದಾರೆ.

ಜಯನಗರ ಟ್ರಾಫಿಕ್ ಪೊಲೀಸ್ ಇನ್ಸ್​ಪೆಕ್ಟರ್ ಗಿರೀಶ್ ಬಾಬುಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ರವಿಕಾಂತೇಗೌಡರ ಅಭಿಮಾನಿ ಆದ್ರೆ ಕೈ, ಎದೆ ಮೇಲೆ ಹಚ್ಚೆ ಹಾಕಿಸಿಕೊಳ್ಳಿ. ವಾಹನದ ಮೇಲೆ ಯಾಕೆ ಬರೆಸಿಕೊಂಡಿರೋದು ಎಂದು ಕೇಳಿದ್ದಾರೆ. ಸರಿಯಾಗಿ ಸಂಚಾರಿ ನಿಯಮ ಪಾಲಿಸೋದಾದರೆ ಪರವಾಗಿಲ್ಲ. ನೀವು ಹೆಸರು ಬರೆಸಿಕೊಂಡರು ಪರವಾಗಿಲ್ಲ ಎಂದು ತಿಳಿಸಿ ಹೇಳಿದ್ದಾರೆ. ಸದ್ಯ ಜಯನಗರ ಟ್ರಾಫಿಕ್ ಪೊಲೀಸರು ರವಿಕಾಂತೇಗೌಡ ಹೆಸರಿಗೆ ಪೈಂಟ್ ಬಳಿದಿದ್ದಾರೆ. ಫೈನ್ ಕಟ್ಟಲು ಕಾಲಾವಕಾಶ ಕೇಳಿರುವುದರಿಂದ ಅಲ್ಲಿವರೆಗೂ ಸ್ಕೂಟರ್ ಠಾಣೆಯಲ್ಲಿ ಇರಲಿ ಎಂದು ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಅಪರಾಧ ಸುದ್ದಿಗಳು: ಬೆಂಗಳೂರಿನಲ್ಲಿ ಹೆಚ್ಚಿದ ಪೆಟ್ರೋಲ್ ಕಳ್ಳರ ಹಾವಳಿ

ಇದನ್ನೂ ಓದಿ: ಮಂಗಳೂರು: ಕಾರಿಗೆ ಅಂಟಿಸಿದ್ದ ದೇವರ ಚಿತ್ರ ತೆಗೆಯಲು ಸೂಚಿಸಿದ ಟ್ರಾಫಿಕ್ ಪೊಲೀಸರ ವಿರುದ್ಧ ಜನರ ಆಕ್ರೋಶ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!