AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬಿಎಂಟಿಸಿ ಬಸ್​ಗೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು

ಬೆಂಗಳೂರಿನ ಡಿಪೋ-35 ಸೀಗೆಹಳ್ಳಿ ಬಿಎಂಟಿಸಿ ಬಸ್​ನ ಹಿಂದಿನ ಚಕ್ರ ಹೀರೋ ಹೊಂಡ ಸ್ಪೆಲಂಡರ್ ಬೈಕ್ ಮೇಲೆ ಹರಿದು ಯುವಕನ ತಲೆ ಮತ್ತು ಎದೆ ಭಾಗ ನಂಜುಗುಜ್ಜಾಗಿದ್ದು, ಸ್ಥಳದಲ್ಲೇ ಸವಾರ  ಮೃತಪಟ್ಟಿದ್ದಾರೆ.

ಬೆಂಗಳೂರು: ಬಿಎಂಟಿಸಿ ಬಸ್​ಗೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು
ವಿಶ್ವ (25)
Follow us
TV9 Web
| Updated By: Digi Tech Desk

Updated on:Dec 06, 2021 | 2:20 PM

ಬೆಂಗಳೂರು: ಬಿಎಂಟಿಸಿ ಬಸ್​ಗೆ ಬೈಕ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ನಗರದ ಓಕಳಿಪುರಂನ ಲೂಲೂ ಮಾರ್ಟ್ ಬಳಿ ನಡೆದಿದೆ. ಬಿಎಂಟಿಸಿ ಬಸ್ (BMTC Bus) ಡಿಕ್ಕಿಯಾಗಿ ಸವಾರ ವಿಶ್ವ(25) ಸಾವನ್ನಪ್ಪಿದ್ದಾರೆ. ಬೈಕ್​​ನಲ್ಲಿ ಹಿಂಬದಿ ಕುಳಿತ ಯುವಕ ಜಗನ್​ಗೂ ಕೂಡ ಸಣ್ಣಪುಟ್ಟ ಗಾಯವಾಗಿದೆ. ಸದ್ಯ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಪೋ-35 ಸೀಗೆಹಳ್ಳಿ ಬಿಎಂಟಿಸಿ ಬಸ್​ನ ಹಿಂದಿನ ಚಕ್ರ ಹೀರೋ ಹೊಂಡ ಸ್ಪೆಲಂಡರ್ ಬೈಕ್ ಮೇಲೆ ಹರಿದು ಯುವಕನ ತಲೆ ಮತ್ತು ಎದೆ ಭಾಗ ನಂಜುಗುಜ್ಜಾಗಿದ್ದು, ಸ್ಥಳದಲ್ಲೇ ಸವಾರ  ಮೃತಪಟ್ಟಿದ್ದಾರೆ. ಸದ್ಯ ಮೃತದೇಹವನ್ನು ರಾಜ್ ಕುಮಾರ್ ರಸ್ತೆಯಲ್ಲಿರುವ ಸುಗುಣ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಓಕಳೀಪುರಂ ರಸ್ತೆ ಬಂದ್ ಮಾಡಿ ಆಕ್ರೋಶ ಅಪಘಾತ ಬೆನ್ನೆಲ್ಲೆ ರಸ್ತೆ ಮಧ್ಯೆ ಮಲಗಿ ನ್ಯಾಯ ಬೇಕು ಎಂದು ಕನ್ನಡಪರ ಹೋರಾಟಗಾರರು ಓಕಳೀಪುರಂ ರಸ್ತೆ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರು, ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ.

ಆನೆಕಲ್: 12ನೇ ಮಹಡಿಯಿಂದ ಬಿದ್ದ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು ಅಪಾರ್ಟ್​ಮೆಂಟ್​ನ 12ನೇ ಮಹಡಿಯಿಂದ ವಿದ್ಯಾರ್ಥಿನಿ ಬಿದ್ದು ಮೃತಪಟ್ಟಿರುವ ಘಟನೆ ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯ ವೇಣುಗೋಪಾಲ ನಗರದಲ್ಲಿ ನಡೆದಿದೆ. ವೇಣುಗೋಪಾಲ ನಗರದ ನಿತೀಶ್ ಪಾರ್ಕ್ ಅಪಾರ್ಟ್​ಮೆಂಟ್​ನ 12ನೇ ಮಹಡಿಯಿಂದ 13 ವರ್ಷದ ವೈಷ್ಣವಿ ಬಿದ್ದು ಸಾವನ್ನಪ್ಪಿದ್ದಾಳೆ. ಆತ್ಮಹತ್ಯೆಯೋ ಅಥವಾ ಆಯತಪ್ಪಿ ಬಿದ್ದಳು ಎಂಬುದರ ಬಗ್ಗೆ ಪೊಲೀಸರು ಸದ್ಯ ತನಿಖೆ ನಡೆಸುತ್ತಿದ್ದಾರೆ.

ಮೃತ ದುರ್ದೈವಿ ವೈಷ್ಣವಿ ಉತ್ತರಪ್ರದೇಶ ಮೂಲದ ವೀರೇಂದ್ರಕುಮಾರ್ ಹಾಗೂ ಸುಮನ್ ದಂಪತಿಯ ಪುತ್ರಿ. ಕಳೆದ 20 ವರ್ಷದಿಂದ ಈ ಕುಟುಂಬ ಬೆಂಗಳೂರಿನಲ್ಲಿ ನೆಲೆಸಿದೆ. ವೈಷ್ಣವಿ ಖಾಸಗಿ ಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ರಾತ್ರಿ ಕುಟುಂಬದವರ ಜೊತೆ ಕುಳಿತು ಊಟ ಮಾಡಿದ್ದಳು. ಮನೆಯವರೆಲ್ಲರೂ ಹಾಲ್ನಲ್ಲಿ ಕುಳಿತಿದ್ದರು. ಬಾಲ್ಕನಿಯಲ್ಲಿ ಲಾಕ್ ಮಾಡಿಕೊಂಡು ಆಟವಾಡುತ್ತಿದ್ದ ಸಮಯದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.

ಏನೋ ಬಿದ್ದ ರೀತಿ ಶಬ್ದ ಆದಾಗ ಬಾಲ್ಕನಿ ಬಳಿ ಹೋಗಿ ನೋಡಿದಾಗ ಮಗಳು ಬಿದ್ದಿರುವುದು ಗೊತ್ತಾಗಿದೆ. ಬಾಲ್ಕನಿ ಬಳಿ ಬಂದು ನೋಡಿದಾಗ ವೈಷ್ಣವಿ ಕೆಳಗೆ ಬಿದ್ದಿದ್ದಳು. ತಲೆಗೆ ತೀವ್ರ ಪೆಟ್ಟಾದ ಕಾರಣ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಸದ್ಯ ಈ ಪ್ರಕರಣ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Hassan Accident: ಕಾರು-ಬೈಕ್ ಮುಖಾಮುಖಿ ಡಿಕ್ಕಿ; ಬೈಕ್ ಸವಾರ ಸಾವು, ಕಾರು ಚಾಲಕ ಎಸ್ಕೇಪ್

ಬೆಂಗಳೂರಿನಲ್ಲಿ ಅಪಾರ್ಟ್​ಮೆಂಟ್ 12ನೇ ಮಹಡಿಯಿಂದ ಬಿದ್ದ ವಿದ್ಯಾರ್ಥಿನಿ; ಸ್ಥಳದಲ್ಲೇ ಸಾವು

Published On - 1:39 pm, Mon, 6 December 21

ಅಪ್ಪನಿಗೆ ತುತ್ತು ಹಾಕದ ಅವಳದ್ದೆಂಥ ದೇಶಪ್ರೇಮ: ಚೈತ್ರಾ ತಂದೆ ಪ್ರಶ್ನೆ
ಅಪ್ಪನಿಗೆ ತುತ್ತು ಹಾಕದ ಅವಳದ್ದೆಂಥ ದೇಶಪ್ರೇಮ: ಚೈತ್ರಾ ತಂದೆ ಪ್ರಶ್ನೆ
ಪಾಕ್ ಎಸೆದಿದ್ದ ಶೆಲ್​ಗಳನ್ನು ವೀಕ್ಷಿಸಿದ ರಕ್ಷಣಾ ಸಚಿವ ರಾಜನಾಥ್​ ಸಿಂಗ್
ಪಾಕ್ ಎಸೆದಿದ್ದ ಶೆಲ್​ಗಳನ್ನು ವೀಕ್ಷಿಸಿದ ರಕ್ಷಣಾ ಸಚಿವ ರಾಜನಾಥ್​ ಸಿಂಗ್
ವಿಜಯ್ ಶಾ ವಿರುದ್ಧ ಎಫ್​ಐಅರ್ ದಾಖಲಿಸಲು ಸೂಚಿಸಲಾಗಿದೆ: ಪರಮೇಶ್ವರ್
ವಿಜಯ್ ಶಾ ವಿರುದ್ಧ ಎಫ್​ಐಅರ್ ದಾಖಲಿಸಲು ಸೂಚಿಸಲಾಗಿದೆ: ಪರಮೇಶ್ವರ್
ಒಂದು ಟಗರನ್ನಿಟ್ಟುಕೊಂಡಿರುವ ರೌಡಿಯೊಬ್ಬ ಹೊಟ್ಟೆಪಾಡಿಗೆ ಕುರಿ ಕಾಯ್ತೀನಿ ಅಂದ
ಒಂದು ಟಗರನ್ನಿಟ್ಟುಕೊಂಡಿರುವ ರೌಡಿಯೊಬ್ಬ ಹೊಟ್ಟೆಪಾಡಿಗೆ ಕುರಿ ಕಾಯ್ತೀನಿ ಅಂದ
ಹೇಗಿದ್ದಾರೆ ನೋಡಿ ಅರ್ಜುನ್ ಜನ್ಯ ಮಗಳು; ತಂದೆಯನ್ನು ಅಭಿನಂದಿಸಿದ ರಜಿತಾ
ಹೇಗಿದ್ದಾರೆ ನೋಡಿ ಅರ್ಜುನ್ ಜನ್ಯ ಮಗಳು; ತಂದೆಯನ್ನು ಅಭಿನಂದಿಸಿದ ರಜಿತಾ
ಬೆಂಗಳೂರಿನಲ್ಲಿ ಬೆತ್ತಲೆ ಕಳ್ಳನ ಕೈಚಳಕ: ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬೆತ್ತಲೆ ಕಳ್ಳನ ಕೈಚಳಕ: ವಿಡಿಯೋ ನೋಡಿ
ಬಾಳೆಗಿಡ ನೆಲಕಚ್ಚಿದ್ದು ಕಂಡು ಆಘಾತಕ್ಕೊಳಗಾಗಿ ಪ್ರಜ್ಞೆತಪ್ಪಿ ಬಿದ್ದ ರೈತ
ಬಾಳೆಗಿಡ ನೆಲಕಚ್ಚಿದ್ದು ಕಂಡು ಆಘಾತಕ್ಕೊಳಗಾಗಿ ಪ್ರಜ್ಞೆತಪ್ಪಿ ಬಿದ್ದ ರೈತ
ರಾಮನಗರ ಜಿಲ್ಲೆಯ ಹಲವೆಡೆ ಭಾರಿ ಮಳೆ: ಮಾಗಡಿಯಲ್ಲಿ ಮನೆಗಳಿಗೆ ನುಗ್ಗಿದ ನೀರು
ರಾಮನಗರ ಜಿಲ್ಲೆಯ ಹಲವೆಡೆ ಭಾರಿ ಮಳೆ: ಮಾಗಡಿಯಲ್ಲಿ ಮನೆಗಳಿಗೆ ನುಗ್ಗಿದ ನೀರು
ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ, ಐವರು ಸಾವು
ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ, ಐವರು ಸಾವು
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?