AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಕ್ಲು ಶಿವ ಕೊಲೆ ಕೇಸ್: ಮತ್ತಿಬ್ಬರ ಬಂಧನ, ಭೈರತಿ ಬಸವರಾಜ್ ಸಹೋದರನ ಮಗ ವಶಕ್ಕೆ

ಬೆಂಗಳೂರಿನ ರೌಡಿಶೀಟರ್​ ಬಿಕ್ಲು ಶಿವನ ಕೊಲೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಪೊಲೀಸರು ಇದೀಗ ಮತ್ತೆ ಇಬ್ಬರನ್ನು ಬಂಧಿಸಿದ್ದಾರೆ. ಜೊತೆಗೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ಸಹೋದರನ ಮಗನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಭೈರತಿ ಬಸವರಾಜ್ ಸಹೋದರನ ಮಗ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಕಾರು ನೀಡಿದ್ದ.

ಬಿಕ್ಲು ಶಿವ ಕೊಲೆ ಕೇಸ್: ಮತ್ತಿಬ್ಬರ ಬಂಧನ, ಭೈರತಿ ಬಸವರಾಜ್ ಸಹೋದರನ ಮಗ ವಶಕ್ಕೆ
ಶಾಸಕ ಭೈರತಿ ಬಸವರಾಜ್ ಸಹೋದರನ ಮಗ ಅನಿಲ್, ಬಿಕ್ಲು ಶಿವ
ಗಂಗಾಧರ​ ಬ. ಸಾಬೋಜಿ
|

Updated on:Jul 21, 2025 | 11:41 AM

Share

ಬೆಂಗಳೂರು, ಜುಲೈ 21: ಬಿಕ್ಲು ಶಿವ ಕೊಲೆ ಕೇಸ್ (bilkul shiva case) ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ಇದೇ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ (Byrathi Basavaraj) ಹೆಸರು ಕೂಡ ತಳಕು ಹಾಕಿಕೊಂಡಿದ್ದು, ಐದನೇ ಆರೋಪಿ ಆಗಿದ್ದಾರೆ. ಇತ್ತೀಚೆಗೆ ವಿಚಾರಣೆಗೆ ಕೂಡ ಹಾಜರಾಗಿದ್ದರು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರನ್ನು ಬಂಧಿಸಿದ್ದು, ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅರುಣ್, ನವೀನ್​ ಬಂಧಿತರು. ಭೈರತಿ ಬಸವರಾಜ್ ಸಹೋದರನ ಮಗ ಅನಿಲ್​ನನ್ನು ವಶಕ್ಕೆ ಪಡೆದಿದ್ದಾರೆ.

ಅರುಣ್ ಮತ್ತು ನವೀನ್ ಮೊದಲನೇ ಆರೋಪಿ ಜಗದೀಶ್ ಸಹಚರರು. ಕೊಲೆ ಬಳಿಕ ಇಬ್ಬರು ತಲೆಮರೆಸಿಕೊಂಡಿದ್ದರು. ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಅನಿಲ್ ಕಾರು ನೀಡಿದ್ದ. ಹೀಗಾಗಿ ಸದ್ಯ ಅನಿಲ್​ನನ್ನು ವಶಕ್ಕೆ ಪಡೆದಿರುವ ಬೆಂಗಳೂರಿನ ಭಾರತಿನಗರ ಠಾಣೆ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಇದನ್ನೂ ಓದಿ: ಬಿಕ್ಲು ಶಿವ ಹತ್ಯೆ: ಬಿಜೆಪಿ ಎಂಎಲ್​​ಎಗೆ ನೋಟಿಸ್, ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಕೊಟ್ಟ ಮೃತನ ತಾಯಿ

ಇದನ್ನೂ ಓದಿ
Image
ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ: ಮೂವರು ಸಾವು
Image
112ಗೆ ಕರೆ ಮಾಡಿದ್ದ ಮಹಿಳೆಯನ್ನೇ ಬಲೆಗೆ ಬೀಳಿಸಿಕೊಂಡ ಪೊಲೀಸಪ್ಪ!
Image
ಬಿಜೆಪಿ ಎಂಎಲ್​​ಎಗೆ ನೋಟಿಸ್, ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಮೃತನ ತಾಯಿ
Image
ರೌಡಿಶೀಟರ್​ ಕೊಲೆ: ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್​ಐಆರ್​

ರೌಡಿಶೀಟರ್​ ಬಿಕ್ಲು ಶಿವನ ಕೊಲೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ಅಷ್ಟಕ್ಕೂ, ಬಿಕ್ಲು ಕೊಲೆಗೆ ಕಾರಣ ಕಿತ್ತಗನೂರಲ್ಲಿರುವ ಒಂದೂವರೆ ಎಕರೆ ಜಮೀನು. ಜಮೀನಿಗೆ ಮೂವರು ಮಾಲೀಕರಿದ್ದು, ಈ ಪೈಕಿ ನದಾಫ್​ ಬಳಿ ಬಿಕ್ಲು ಜಮೀನು ಖರೀದಿ ಅಗ್ರಿಮೆಂಟ್ ಮಾಡಿಸಿಕೊಂಡಿದ್ದ.

ಮತ್ತೊಬ್ಬ ಮಾಲೀಕನಿಂದ ರವಿ ಅಗ್ರಿಮೆಂಟ್ ಮಾಡಿಸಿಕೊಂಡು ಕಾಂಪೌಂಡ್ ಹಾಕುತ್ತಿದ್ದ. ಇದರಿಂದ ಕೆರಳಿದ ಶಿವು ಕಾಂಪೌಂಡ್ ಕೆಡವಿದ್ದ. ಬಳಿಕ ರವಿ ಬೆನ್ನಿಂದೆ ಇದ್ದ ಜಗದೀಶ್ ಮತ್ತು ಕಿರಣ್, ಶಿವುಗೆ ಪ್ರಾಣ ಬೆದರಿಕೆ ಹಾಕಿದ್ದರು. ಈ ಬಗ್ಗೆ ಶಿವು ಅಂದಿನ ಕಮಿಷನರ್​​ಗೆ ದೂರು ನೀಡಿದ್ದ. ರಾಮಮೂರ್ತಿನಗರ ಠಾಣೆಗೆ ದೂರು ನೀಡಿದ್ದ. ಆದರೆ ಅವರು ಎನ್​ಸಿಆರ್​ ದಾಖಲಿಸಿ ಕೈ ಚೆಲ್ಲಿದ್ದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ರೌಡಿಶೀಟರ್​ ಕೊಲೆ: ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್​ಐಆರ್​

ಶಿವನನ್ನ ಮುಗಿಸುವುದಕ್ಕೆ ಸ್ಕೆಚ್ ಹಾಕಿದ್ದ ಜಗದೀಶ್, ಸ್ಯಾಮ್ಯುಯೆಲ್​ ಎಂಬಾತನನ್ನ ವಾಚ್ ಮಾಡುವುದಕ್ಕೆ ಬಿಟ್ಟಿದ್ದ. ಕಳೆದ 45 ದಿನಗಳಿಂದ ಶಿವನ ಚಲನವಲನಗಳನ್ನ ಸ್ಯಾಮ್ಯುಯೆಲ್ ಗಮನಿಸ್ತಿದ್ನಂತೆ. ಆತನಿಗೆ ಪ್ರತಿ ನಿತ್ಯ 1 ಸಾವಿರ ಹಣವನ್ನ ಜಗ್ಗ ಕೊಡ್ತಿದ್ನಂತೆ. ಕೊಲೆ ದಿನ ಕೂಡ ಸ್ಯಾಮ್ಯುಯೆಲ್ ಕೊಟ್ಟ ಲೊಕೇಷನ್ ಆಧರಿಸಿ ಬಂದವರು, ಬಿಕ್ಲು ಶಿವುನನ್ನ ಕೊಂದು ಪರಾರಿ ಆಗಿದ್ದರು.

ವರದಿ: ವಿಕಾಸ್​ ಕ್ರೈಂ 

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:40 am, Mon, 21 July 25

ಕ್ರಾಂತಿ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ನಿರಾಸೆ ತಂದ ಬಿಹಾರ ರಿಸಲ್ಟ್​!
ಕ್ರಾಂತಿ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ನಿರಾಸೆ ತಂದ ಬಿಹಾರ ರಿಸಲ್ಟ್​!
ವೃಕ್ಷಮಾತೆ ಸಾಲುಮರದ ತಿಮ್ಮಕ್ಕರ ಅಂತಿಮ ಕ್ಷಣ ಹೇಗಿತ್ತು?
ವೃಕ್ಷಮಾತೆ ಸಾಲುಮರದ ತಿಮ್ಮಕ್ಕರ ಅಂತಿಮ ಕ್ಷಣ ಹೇಗಿತ್ತು?
ಚುನಾವಣಾ ಆಯೋಗ ಆರ್​ಎಸ್​ಎಸ್​ ಘಟಕವೇ? ಬಿಕೆ ಹರಿಪ್ರಸಾದ್ ಟೀಕೆ
ಚುನಾವಣಾ ಆಯೋಗ ಆರ್​ಎಸ್​ಎಸ್​ ಘಟಕವೇ? ಬಿಕೆ ಹರಿಪ್ರಸಾದ್ ಟೀಕೆ
ಬಿಹಾರದಲ್ಲಿ ಎನ್​ಡಿಎ ಜಯಭೇರಿ: ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು ನೋಡಿ
ಬಿಹಾರದಲ್ಲಿ ಎನ್​ಡಿಎ ಜಯಭೇರಿ: ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು ನೋಡಿ
ಹಾಸ್ಟೆಲ್​ನಲ್ಲಿ ಅನ್ನದ ಪಾತ್ರೆಯೊಳಗೆ ಕಾಲಿಟ್ಟು ಮಲಗಿದ ಕಾವಲುಗಾರ
ಹಾಸ್ಟೆಲ್​ನಲ್ಲಿ ಅನ್ನದ ಪಾತ್ರೆಯೊಳಗೆ ಕಾಲಿಟ್ಟು ಮಲಗಿದ ಕಾವಲುಗಾರ
ಎನ್ಡಿಎಗೆ ಬಹುಮತ ಬರುತ್ತಿದ್ದಂತೆ ಕಾಂಗ್ರೆಸ್​ನಿಂದ ಶುರುವಾಯ್ತು ಪ್ರತಿಭಟನೆ
ಎನ್ಡಿಎಗೆ ಬಹುಮತ ಬರುತ್ತಿದ್ದಂತೆ ಕಾಂಗ್ರೆಸ್​ನಿಂದ ಶುರುವಾಯ್ತು ಪ್ರತಿಭಟನೆ
ಕಬ್ಬು ಬೆಳೆಗಾರರ ಪ್ರತಿಭಟನೆ ವೇಳೆ ವಾಹನಗಳಿಗೆ ಬೆಂಕಿ: ADGP ಏನಂದ್ರು?
ಕಬ್ಬು ಬೆಳೆಗಾರರ ಪ್ರತಿಭಟನೆ ವೇಳೆ ವಾಹನಗಳಿಗೆ ಬೆಂಕಿ: ADGP ಏನಂದ್ರು?
ದುಡ್ಡು ಕೊಟ್ಟು ‘ಜೈ’ ಸಿನಿಮಾ ಮೊದಲ ಟಿಕೆಟ್ ಖರೀದಿಸಿದ ಸುದೀಪ್
ದುಡ್ಡು ಕೊಟ್ಟು ‘ಜೈ’ ಸಿನಿಮಾ ಮೊದಲ ಟಿಕೆಟ್ ಖರೀದಿಸಿದ ಸುದೀಪ್
ಬೆಳಗಾವಿ ಅಧಿವೇಶನ ಮೋಜು-ಮಸ್ತಿಗೆ ನಡೆಯುತ್ತಾ!? ಏನಂದ್ರು ಖಾದರ್?
ಬೆಳಗಾವಿ ಅಧಿವೇಶನ ಮೋಜು-ಮಸ್ತಿಗೆ ನಡೆಯುತ್ತಾ!? ಏನಂದ್ರು ಖಾದರ್?
ಸಮೀರವಾಡಿ ಸಕ್ಕರೆ ಕಾರ್ಖಾನೆ ಬಳಿ ಬೆಂಕಿ, ಹತ್ತಾರು ಟ್ರ್ಯಾಕ್ಟರ್ ಕಬ್ಬು ನಾಶ
ಸಮೀರವಾಡಿ ಸಕ್ಕರೆ ಕಾರ್ಖಾನೆ ಬಳಿ ಬೆಂಕಿ, ಹತ್ತಾರು ಟ್ರ್ಯಾಕ್ಟರ್ ಕಬ್ಬು ನಾಶ