AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯರ ಕಳ್ಳಾಟ ಪತ್ತೆ ಹಚ್ಚಲು ದಿನದಲ್ಲಿ 3 ಬಾರಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ ಮಾಡಿದ ವೈದ್ಯಕೀಯ ಶಿಕ್ಷಣ ಇಲಾಖೆ

ವೈದ್ಯರು ಕರ್ತವ್ಯದ ಅವಧಿಯಲ್ಲಿ ಪೂರ್ತಿ ಕರ್ತವ್ಯ ನಿರ್ವಹಿಸಿದ್ದಾರೆ ಎಂಬುದನ್ನು ಖಚಿತಪಡಿಸಿಕೊಳ್ಳಲು ದಿನಕ್ಕೆ ಮೂರು ಬಾರಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ ಮಾಡಿ ವೈದ್ಯಕೀಯ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ವೈದ್ಯರ ಕಳ್ಳಾಟ ಪತ್ತೆ ಹಚ್ಚಲು ದಿನದಲ್ಲಿ 3 ಬಾರಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ ಮಾಡಿದ  ವೈದ್ಯಕೀಯ ಶಿಕ್ಷಣ ಇಲಾಖೆ
ಸಾಂದರ್ಭಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on:Feb 02, 2022 | 3:10 PM

Share

ಬೆಂಗಳೂರು: ಸರ್ಕಾರಿ ವೈದ್ಯರು ತಮ್ಮ ಕೆಲಸದ ಅವಧಿಯಲ್ಲಿ ಬೇರೆ ಕಡೆಗಳಿಗೆ ಹೋಗಿ ಕೆಲಸ ಮಾಡುತ್ತಿರುತ್ತಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಇರುವುದಿಲ್ಲ ಎಂದು ಅನೇಕ ಆರೋಪಗಳು ಕೇಳಿ ಬಂದಿತ್ತು. ಸದ್ಯ ಈಗ ಇದಕ್ಕೆ ಕಡಿವಾಣ ಹಾಕಲು ವೈದ್ಯಕೀಯ ಶಿಕ್ಷಣ ಇಲಾಖೆ ಮುಂದಾಗಿದೆ. ವೈದ್ಯರು ಕರ್ತವ್ಯದ ಅವಧಿಯಲ್ಲಿ ಪೂರ್ತಿ ಕರ್ತವ್ಯ ನಿರ್ವಹಿಸಿದ್ದಾರೆ ಎಂಬುದನ್ನು ಖಚಿತಪಡಿಸಿಕೊಳ್ಳಲು ದಿನಕ್ಕೆ ಮೂರು ಬಾರಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ ಮಾಡಿ ವೈದ್ಯಕೀಯ ಶಿಕ್ಷಣ ಇಲಾಖೆ ಆದೇಶಿಸಿದೆ. ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಸಂಸ್ಥೆ, ಮಹಾ ವಿದ್ಯಾಲಯ, ಕಾಲೇಜುಗಳ ವೈದ್ಯರಿಗೆ ದಿನದಲ್ಲಿ 3 ಬಾರಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ ಮಾಡಿ ಸುತ್ತೋಲೆ ಹೊರಡಿಸಲಾಗಿದೆ.

ಕೆಲವು ಜಿಲ್ಲೆಗಳಲ್ಲಿ ವೈದ್ಯರು ಹಾಜರಾತಿ ಹಾಕಿ ನಂತರ ಖಾಸಗಿ ಆಸ್ಪತ್ರೆಗಳಿಗೆ ತೆರಳುತ್ತಿದ್ದಾರೆ, ಪೂರ್ತಿ ಕರ್ತವ್ಯ ನಿರ್ವಹಿಸದೇ ಇರುವ ಬಗ್ಗೆ ಇಲಾಖೆಗೆ ಅನೇಕ ದೂರುಗಳು ಬಂದಿದ್ದವು. ಹೀಗಾಗಿ ವೈದ್ಯರು ಕರ್ತವ್ಯದ ಅವಧಿಯಲ್ಲಿ ಪೂರ್ತಿ ಕರ್ತವ್ಯ ನಿರ್ವಹಿಸಿದ್ದಾರೆ ಎಂಬುದನ್ನು ಖಚಿತಪಡಿಸಿಕೊಳ್ಳಲು ದಿನಕ್ಕೆ ಮೂರು ಬಾರಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ ಮಾಡಿ ವೈದ್ಯಕೀಯ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಿಗೆ ಆಡಳಿತ ಪಕ್ಷದ ಶಾಸಕರು ನೇರಾ ನೇರ ದೂರು ಸಲ್ಲಿಸಿದ್ದರು. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೇರಿದಂತೆ ಕೆಲವು ಶಾಸಕರಿಂದ ವೈದ್ಯರ ಕಾರ್ಯ ನಿರ್ವಹಣೆ ಬಗ್ಗೆ ಆಕ್ಷೇಪ ವ್ಯಕ್ತವಾಗಿತ್ತು. ಹೀಗಾಗಿ ದಿನಕ್ಕೆ ಮೂರು ಬಾರಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯಗೊಳಿಸಲಾಗಿದೆ.

ಸರ್ಕಾರಿ ಡಾಕ್ಟರುಗಳು ಬೆಳಗ್ಗೆ ಆಸ್ಪತ್ರೆಗೆ ಬಂದು ಸಹಿ ಮಾಡಿ, 1ಗಂಟೆ ಇದ್ದು, ಆಮೇಲೆ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡ್ತಿದಾರೆ: ಲಕ್ಷ್ಮಣ ಸವದಿ ವಿಷಾದ ಸರ್ಕಾರಿ ಡಾಕ್ಟರ್ಗಳು ಬೆಳಗ್ಗೆ ಆಸ್ಪತ್ರೆ ಬಂದು ಸಹಿ ಮಾಡುತ್ತಾರೆ. ಕೇವಲ ಒಂದು ಗಂಟೆ ಇದ್ದು ಅವರ ಖಾಸಗಿ ಆಸ್ಪತ್ರೆ ಹೋಗಿ‌ ಕೆಲಸ ಮಾಡುತ್ತಾರೆ ಎಂಬ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಪ್ರಶ್ನೆ ಮಾಡಿದ್ದರು. ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಪರಿಷತ್ ಸದಸ್ಯ ಲಕ್ಷ್ಮಣ ಸವದಿ, ಸರ್ಕಾರಿ ವೈದ್ಯರ ಕೆಲಸದ ಬಗ್ಗೆ ವಿಷಾದ ವ್ಯಕ್ತಪಡಿಸಿದ್ರು. ಸರ್ಕಾರಿ ಡಾಕ್ಟರ್ಗಳು ಬೆಳಗ್ಗೆ ಆಸ್ಪತ್ರೆ ಬಂದು ಸಹಿ ಮಾಡುತ್ತಾರೆ. ಕೇವಲ ಒಂದು ಗಂಟೆ ಇದ್ದು ಅವರ ಖಾಸಗಿ ಆಸ್ಪತ್ರೆ ಹೋಗಿ‌ ಕೆಲಸ ಮಾಡುತ್ತಾರೆ. ಸಾಕಷ್ಟು ಸರ್ಕಾರಿ ವೈದ್ಯರು ತಮ್ಮ ತಮ್ಮ ಖಾಸಗಿ ಆಸ್ಪತ್ರೆಗೆ ಬರುವಂತೆ ರೋಗಿಗಳಿಗೆ ಕೇಳುತ್ತಾರೆ. ಇದರ ಬಗ್ಗೆ ಸರ್ಕಾರ ಕ್ರಮ‌ ಏನೂ ಎಂದು ಪ್ರಶ್ನಿಸಿದ್ರು.ಆಗ ಉತ್ತರಿಸಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮುಂದಿನ ದಿನಗಳಲ್ಲಿ ಅಂತಹ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದರು.

ಇದನ್ನೂ ಓದಿ: ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಬೆಡ್ ಸಿಗದೇ ರೋಗಿಗಳ ನರಳಾಟ; ಪೊಲೀಸರೇ ಬಂದರೂ ನಿಮ್ಹಾನ್ಸ್ ವೈದ್ಯರು ಜಸ್ಟ್​ ಡೋಂಟ್​ ಕೇರ್!

Published On - 3:09 pm, Wed, 2 February 22

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ