AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯರ ಕಳ್ಳಾಟ ಪತ್ತೆ ಹಚ್ಚಲು ದಿನದಲ್ಲಿ 3 ಬಾರಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ ಮಾಡಿದ ವೈದ್ಯಕೀಯ ಶಿಕ್ಷಣ ಇಲಾಖೆ

ವೈದ್ಯರು ಕರ್ತವ್ಯದ ಅವಧಿಯಲ್ಲಿ ಪೂರ್ತಿ ಕರ್ತವ್ಯ ನಿರ್ವಹಿಸಿದ್ದಾರೆ ಎಂಬುದನ್ನು ಖಚಿತಪಡಿಸಿಕೊಳ್ಳಲು ದಿನಕ್ಕೆ ಮೂರು ಬಾರಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ ಮಾಡಿ ವೈದ್ಯಕೀಯ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ವೈದ್ಯರ ಕಳ್ಳಾಟ ಪತ್ತೆ ಹಚ್ಚಲು ದಿನದಲ್ಲಿ 3 ಬಾರಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ ಮಾಡಿದ  ವೈದ್ಯಕೀಯ ಶಿಕ್ಷಣ ಇಲಾಖೆ
ಸಾಂದರ್ಭಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on:Feb 02, 2022 | 3:10 PM

Share

ಬೆಂಗಳೂರು: ಸರ್ಕಾರಿ ವೈದ್ಯರು ತಮ್ಮ ಕೆಲಸದ ಅವಧಿಯಲ್ಲಿ ಬೇರೆ ಕಡೆಗಳಿಗೆ ಹೋಗಿ ಕೆಲಸ ಮಾಡುತ್ತಿರುತ್ತಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಇರುವುದಿಲ್ಲ ಎಂದು ಅನೇಕ ಆರೋಪಗಳು ಕೇಳಿ ಬಂದಿತ್ತು. ಸದ್ಯ ಈಗ ಇದಕ್ಕೆ ಕಡಿವಾಣ ಹಾಕಲು ವೈದ್ಯಕೀಯ ಶಿಕ್ಷಣ ಇಲಾಖೆ ಮುಂದಾಗಿದೆ. ವೈದ್ಯರು ಕರ್ತವ್ಯದ ಅವಧಿಯಲ್ಲಿ ಪೂರ್ತಿ ಕರ್ತವ್ಯ ನಿರ್ವಹಿಸಿದ್ದಾರೆ ಎಂಬುದನ್ನು ಖಚಿತಪಡಿಸಿಕೊಳ್ಳಲು ದಿನಕ್ಕೆ ಮೂರು ಬಾರಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ ಮಾಡಿ ವೈದ್ಯಕೀಯ ಶಿಕ್ಷಣ ಇಲಾಖೆ ಆದೇಶಿಸಿದೆ. ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಸಂಸ್ಥೆ, ಮಹಾ ವಿದ್ಯಾಲಯ, ಕಾಲೇಜುಗಳ ವೈದ್ಯರಿಗೆ ದಿನದಲ್ಲಿ 3 ಬಾರಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ ಮಾಡಿ ಸುತ್ತೋಲೆ ಹೊರಡಿಸಲಾಗಿದೆ.

ಕೆಲವು ಜಿಲ್ಲೆಗಳಲ್ಲಿ ವೈದ್ಯರು ಹಾಜರಾತಿ ಹಾಕಿ ನಂತರ ಖಾಸಗಿ ಆಸ್ಪತ್ರೆಗಳಿಗೆ ತೆರಳುತ್ತಿದ್ದಾರೆ, ಪೂರ್ತಿ ಕರ್ತವ್ಯ ನಿರ್ವಹಿಸದೇ ಇರುವ ಬಗ್ಗೆ ಇಲಾಖೆಗೆ ಅನೇಕ ದೂರುಗಳು ಬಂದಿದ್ದವು. ಹೀಗಾಗಿ ವೈದ್ಯರು ಕರ್ತವ್ಯದ ಅವಧಿಯಲ್ಲಿ ಪೂರ್ತಿ ಕರ್ತವ್ಯ ನಿರ್ವಹಿಸಿದ್ದಾರೆ ಎಂಬುದನ್ನು ಖಚಿತಪಡಿಸಿಕೊಳ್ಳಲು ದಿನಕ್ಕೆ ಮೂರು ಬಾರಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ ಮಾಡಿ ವೈದ್ಯಕೀಯ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಿಗೆ ಆಡಳಿತ ಪಕ್ಷದ ಶಾಸಕರು ನೇರಾ ನೇರ ದೂರು ಸಲ್ಲಿಸಿದ್ದರು. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೇರಿದಂತೆ ಕೆಲವು ಶಾಸಕರಿಂದ ವೈದ್ಯರ ಕಾರ್ಯ ನಿರ್ವಹಣೆ ಬಗ್ಗೆ ಆಕ್ಷೇಪ ವ್ಯಕ್ತವಾಗಿತ್ತು. ಹೀಗಾಗಿ ದಿನಕ್ಕೆ ಮೂರು ಬಾರಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯಗೊಳಿಸಲಾಗಿದೆ.

ಸರ್ಕಾರಿ ಡಾಕ್ಟರುಗಳು ಬೆಳಗ್ಗೆ ಆಸ್ಪತ್ರೆಗೆ ಬಂದು ಸಹಿ ಮಾಡಿ, 1ಗಂಟೆ ಇದ್ದು, ಆಮೇಲೆ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡ್ತಿದಾರೆ: ಲಕ್ಷ್ಮಣ ಸವದಿ ವಿಷಾದ ಸರ್ಕಾರಿ ಡಾಕ್ಟರ್ಗಳು ಬೆಳಗ್ಗೆ ಆಸ್ಪತ್ರೆ ಬಂದು ಸಹಿ ಮಾಡುತ್ತಾರೆ. ಕೇವಲ ಒಂದು ಗಂಟೆ ಇದ್ದು ಅವರ ಖಾಸಗಿ ಆಸ್ಪತ್ರೆ ಹೋಗಿ‌ ಕೆಲಸ ಮಾಡುತ್ತಾರೆ ಎಂಬ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಪ್ರಶ್ನೆ ಮಾಡಿದ್ದರು. ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಪರಿಷತ್ ಸದಸ್ಯ ಲಕ್ಷ್ಮಣ ಸವದಿ, ಸರ್ಕಾರಿ ವೈದ್ಯರ ಕೆಲಸದ ಬಗ್ಗೆ ವಿಷಾದ ವ್ಯಕ್ತಪಡಿಸಿದ್ರು. ಸರ್ಕಾರಿ ಡಾಕ್ಟರ್ಗಳು ಬೆಳಗ್ಗೆ ಆಸ್ಪತ್ರೆ ಬಂದು ಸಹಿ ಮಾಡುತ್ತಾರೆ. ಕೇವಲ ಒಂದು ಗಂಟೆ ಇದ್ದು ಅವರ ಖಾಸಗಿ ಆಸ್ಪತ್ರೆ ಹೋಗಿ‌ ಕೆಲಸ ಮಾಡುತ್ತಾರೆ. ಸಾಕಷ್ಟು ಸರ್ಕಾರಿ ವೈದ್ಯರು ತಮ್ಮ ತಮ್ಮ ಖಾಸಗಿ ಆಸ್ಪತ್ರೆಗೆ ಬರುವಂತೆ ರೋಗಿಗಳಿಗೆ ಕೇಳುತ್ತಾರೆ. ಇದರ ಬಗ್ಗೆ ಸರ್ಕಾರ ಕ್ರಮ‌ ಏನೂ ಎಂದು ಪ್ರಶ್ನಿಸಿದ್ರು.ಆಗ ಉತ್ತರಿಸಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮುಂದಿನ ದಿನಗಳಲ್ಲಿ ಅಂತಹ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದರು.

ಇದನ್ನೂ ಓದಿ: ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಬೆಡ್ ಸಿಗದೇ ರೋಗಿಗಳ ನರಳಾಟ; ಪೊಲೀಸರೇ ಬಂದರೂ ನಿಮ್ಹಾನ್ಸ್ ವೈದ್ಯರು ಜಸ್ಟ್​ ಡೋಂಟ್​ ಕೇರ್!

Published On - 3:09 pm, Wed, 2 February 22

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ