AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಹಾನ್ಸ್​​​​ ಬಯಾಪ್ಸಿ ಸ್ಯಾಂಪಲ್ಸ್​​ ಕಳವು ಕೇಸ್; ಕೇರಳದ ಖಾಸಗಿ ಮೆಡಿಕಲ್​​​ ಕಾಲೇಜು, ಸಂಸ್ಥೆಗಳಿಗೆ ಮಾರಾಟ

ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ರೋಗಿಗಳ ರೋಗ ಲಕ್ಷಣ ತಿಳಿಯಲು ಸಂಗ್ರಹಿಸಿದ್ದ ಬಯಾಪ್ಸಿ ಸ್ಯಾಂಪಲ್ಸ್ ಕಳ್ಳತನವಾಗಿದೆ ಎಂದು ಹೇಳಲಾಗುತ್ತಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಕೇರಳದ ಖಾಸಗಿ ಮೆಡಿಕಲ್​​​ ಕಾಲೇಜು, ಸಂಸ್ಥೆಗಳಿಗೆ ಸಂಪರ್ಕ ಮಾಡಿ ಮಾರಾಟ ಮಾಡಲಾಗಿದೆ ಎಂಬ ಅಂಶ ಬಯಲಾಗಿದೆ.

ನಿಮ್ಹಾನ್ಸ್​​​​ ಬಯಾಪ್ಸಿ ಸ್ಯಾಂಪಲ್ಸ್​​ ಕಳವು ಕೇಸ್; ಕೇರಳದ ಖಾಸಗಿ ಮೆಡಿಕಲ್​​​ ಕಾಲೇಜು, ಸಂಸ್ಥೆಗಳಿಗೆ ಮಾರಾಟ
ನಿಮ್ಹಾನ್ಸ್​​​​
Shivaprasad B
| Edited By: ಆಯೇಷಾ ಬಾನು|

Updated on: Jan 23, 2024 | 8:08 AM

Share

ಬೆಂಗಳೂರು, ಜ.23: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ (ನಿಮ್ಹಾನ್ಸ್) ರೋಗಿಗಳ ರೋಗ ಲಕ್ಷಣ ತಿಳಿಯಲು ಸಂಗ್ರಹಿಸಿದ್ದ ‘ಬಯಾಪ್ಸಿ ಸ್ಯಾಂಪಲ್ಸ್’ (Biopsy samples) ಕಳ್ಳತನವಾಗಿದೆ ಎಂದು ಹೇಳಲಾಗುತ್ತಿದ್ದ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಬಯಾಪ್ಸಿ ಸ್ಯಾಂಪಲ್ಸ್ ಕಳ್ಳತನ ಮಾಡಿ ಕೇರಳದ ಖಾಸಗಿ ಮೆಡಿಕಲ್​​​ ಕಾಲೇಜು, ಸಂಸ್ಥೆಗಳಿಗೆ ಮಾರಾಟ ಮಾಡಲಾಗಿದೆ ಎಂಬ ಶಾಕಿಂಗ್ ಸಂಗತಿ ಬಯಲಾಗಿದೆ.

ನಿಮ್ಹಾನ್ಸ್ ಆಸ್ಪತ್ರೆಯ ಬಯಾಪ್ಸಿ ಸ್ಯಾಂಪಲ್ಸ್ ಕಳ್ಳತನದ ಬಗ್ಗೆ ನಿಮ್ಹಾನ್ಸ್ ಆಸ್ಪತ್ರೆಯ ರಿಜಿಸ್ಟ್ರಾರ್ ಡಾ. ಶಂಕರ ನಾರಾಯಣ ರಾವ್ ಅವರು ಸಿದ್ದಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಮೇರೆಗೆ ಆಸ್ಪತ್ರೆಯ ನ್ಯೂರೋಪೆಥಾಲಜಿ ವಿಭಾಗದ ನ್ಯೂರೋ ಆಂಕಾಲಜಿ ಲ್ಯಾಬ್‌ನ ಟೆಕ್ನಿಷಿಯನ್ ಎಂ.ಆರ್. ಚಂದ್ರಶೇಖರ್ ಮತ್ತು ಶವಾಗಾರ ಸಹಾಯಕ ಎಸ್. ಅಣ್ಣಾ ದೊರೈ ಮತ್ತು ಕೇರಳದ ರಘುರಾಮ್ ಸೇರಿದಂತೆ ಇತರರ ವಿರುದ್ಧ ಎಫ್​ಐಆರ್ ಕೂಡ ದಾಖಲಾಗಿತ್ತು. ಸದ್ಯ ಪೊಲೀಸರ ತನಿಖೆ ವೇಳೆ ಕೇರಳದ ಖಾಸಗಿ ಮೆಡಿಕಲ್​​​ ಕಾಲೇಜು, ಸಂಸ್ಥೆಗಳಿಗೆ ಸ್ಯಾಂಪಲ್ಸ್ ಮಾರಾಟ ಮಾಡಲಾಗಿರುವ ಸಂಗತಿ ಬಯಲಾಗಿದೆ.

ಕೇರಳದ ಖಾಸಗಿ ಮೆಡಿಕಲ್​​​ ಕಾಲೇಜು, ಸಂಸ್ಥೆಗಳಿಗೆ ಸಂಪರ್ಕ ಮಾಡಿ ಮಾರಾಟ ಮಾಡಲಾಗಿದೆ ಎಂಬ ಅಂಶ ಬಯಲಾಗಿದೆ. ಎರಡ್ಮೂರು ವರ್ಷಗಳಿಂದ ಇದೇ ರೀತಿ ಸ್ಯಾಂಪಲ್ಸ್ ಮಾರಾಟ ಮಾಡಿರೋದು ತನಿಖೆ ವೇಳೆ ಪತ್ತೆಯಾಗಿದೆ. ಸಿದ್ದಾಪುರ ಪೊಲೀಸರು ನಿಮಾನ್ಸ್ ಆಸ್ಪತ್ರೆಗೆ ಆಡಿಟಿಂಗ್ ರಿಪೋರ್ಟ್ ಕೇಳಿಸಿದ್ದಾರೆ. ಆದರೆ ಪೊಲೀಸರಿಗೆ ಆಡಿಟಿಂಗ್ ರಿಪೋರ್ಟ್ ಕೊಡಲು ನಿಮ್ಹಾನ್ಸ್ ಸಿಬ್ಬಂದಿ ಮೀನಾಮೇಷ ಎಣಿಸುತ್ತಿದ್ದಾರೆ.

ಇದನ್ನೂ ಓದಿ:  ಸರ್ಕಾರದಲ್ಲಿ ಮತ್ತೆ ಪ್ರತಿಧ್ವನಿಸಿದ ವರ್ಗಾವಣೆ ದಂಧೆ ಆರೋಪ; ಸಚಿವ ಆರ್.ಬಿ.ತಿಮ್ಮಾಪುರ ವಿರುದ್ಧ ಇಡಿಗೆ ದೂರು

ನಿಮಾನ್ಸ್ ನಲ್ಲಿ ಕೆಲಸ ಮಾಡುವ ಇನ್ನೂ ಕೆಲವರು ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಕೆಲಸ ಮಾಡ್ತಿದ್ದವರಿದಲೇ ನಿಮಾನ್ಸ್ ಆಸ್ಪತ್ರೆಯಲ್ಲಿ ಬಯಾಪ್ಸಿ ಸ್ಯಾಂಪಲ್ಸ್ ಕಳ್ಳತನವಾಗಿದೆ. ಸಿದ್ದಾಪುರ ಪೊಲೀಸರು ಇಬ್ಬರು ಆರೋಪಿಗಳಿಗೆ ನೋಟಿಸ್ ನೀಡಿ ವಿಚಾರಣೆಗೆ ಕರೆದಿದ್ದಾರೆ. ಅಣ್ಣಾ ದೊರೈ ಮತ್ತು ಚಂದ್ರಶೇಖರ್ ಅವರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಕರೆದಿದ್ದಾರೆ. ಶವಾಗಾರದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡ್ತಿದ್ದ ಅಣ್ಣಾದೊರೈ ಹಾಗೂ ಚಂದ್ರಶೇಖರ್ ಬಯಾಪ್ಸಿ ಸ್ಯಾಂಪಲ್ಸ್ ಕದ್ದು ಕೇರಳದ ರಘುರಾಮ್ ಎಂಬಾತನಿಗೆ ಮಾರಾಟ ಮಾಡಿದ್ದರು. ನಿಮಾನ್ಸ್ ನಲ್ಲಿ ಕೆಲ ವಿಭಿನ್ನ ಬಯಾಪ್ಸಿ ಸ್ಯಾಂಪಲ್ಸ್​ಗಳಿಗೆ ಕೇರಳದಿಂದ ಬೇಡಿಕೆ ಇದೆ. ನಿಮಾನ್ಸ್ ಎಚ್ ಒಡಿ ಡಾ.ಅನಿತಾ ಮಹದೇವಯ್ಯ ಅವರು ಶವಾಗಾರಕ್ಕೆ ಭೇಟಿ ಕೊಟ್ಟಾಗ ಕಳ್ಳತನ ಬೆಳಕಿಗೆ ಬಂದಿತ್ತು.

ಏನಿದು ಬಯಾಪ್ಸಿ ಸ್ಯಾಂಪಲ್ಸ್?

ಮಾನಸಿಕ ಮತ್ತು ನರರೋಗ ಚಿಕಿತ್ಸೆ ಪಡೆಯಲು ನಿಮ್ಹಾನ್ಸ್ ಆಸ್ಪತ್ರೆಗೆ ದೇಶದ ವಿವಿಧ ಭಾಗಗಳಿಂದ ರೋಗಿಗಳು ಬರುತ್ತಾರೆ. ಈ ರೋಗಿಗಳಿಗೆ ಚಿಕಿತ್ಸೆ ನೀಡುವ ವೈದ್ಯರ ತಂಡ, ರೋಗ ಲಕ್ಷಣ ಮತ್ತು ಕಾರಣ ತಿಳಿಯಲು ರೋಗಿಗಳ ಬಯಾಪ್ಸಿ ಮಾದರಿ ಸಂಗ್ರಹಿಸಿ ಸಂಶೋಧನೆ ನಡೆಸುತ್ತದೆ. ಬಯಾಪ್ಸಿ ಮಾದರಿಯಲ್ಲಿ ರೋಗಕ್ಕೆ ಸಂಬಂಧಿಸಿದ ಮಾಹಿತಿ ಇರುತ್ತದೆ. ಪ್ರತಿವರ್ಷ ಅಂದಾಜು 1 ಸಾವಿರ ಬಯಾಪ್ಸಿ ಮಾದರಿ ಪಡೆದು ಶವಾಗಾರದಲ್ಲಿ ಸಂಗ್ರಹಿಸಲಾಗುತ್ತದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Shivaprasad B
Shivaprasad B
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ