AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿಯೂಟ ಟೆಂಡರ್ ಕರೆಯದೇ, 2 ರೂ ಹೆಚ್ಚಿಗೇ ನೀಡಿ, ಇಸ್ಕಾನ್ ಅಕ್ಷಯಪಾತ್ರೆಗೆ ಬಿಬಿಎಂಪಿ ಗುತ್ತಿಗೆ – ಆರ್ಥಿಕ ಇಲಾಖೆ ಕೆಂಗಣ್ಣು

ಈ ಹಿಂದೆ ಅಕ್ಷಯಪಾತ್ರೆ ಫೌಂಡೇಷನ್ ಒದಗಿಸುತ್ತಿದ್ದ ಬಿಸಿಯೂಟವನ್ನು ತಿರಸ್ಕರಿಸಲಾಗಿತ್ತು. ಬೆಳ್ಳುಳ್ಳಿ, ಈರುಳ್ಳಿ ಬಳಕೆ ಮಾಡುವುದಿಲ್ಲ ಎಂದು ತಿರಸ್ಕರಿಸಲಾಗಿತ್ತು. ಇದೀಗ ಮತ್ತೆ ಇಸ್ಕಾನ್ ಅಕ್ಷಯಪಾತ್ರೆ ಫೌಂಡೇಷನ್‌ಗೇ ಗುತ್ತಿಗೆ ವಹಿಸಲಾಗಿದೆ. ಕುತೂಹಲದ ಸಂಗತಿಯೆಂದರೆ ಆರ್ಥಿಕ‌ ಇಲಾಖೆಯ ವಿರೋಧದ ಮಧ್ಯೆ ಅಕ್ಷಯಪಾತ್ರೆ ಫೌಂಡೇಷನ್‌ಗೆ BBMP ಈ ಗುತ್ತಿಗೆ ನೀಡಿದೆ.

ಬಿಸಿಯೂಟ ಟೆಂಡರ್ ಕರೆಯದೇ, 2 ರೂ ಹೆಚ್ಚಿಗೇ ನೀಡಿ, ಇಸ್ಕಾನ್ ಅಕ್ಷಯಪಾತ್ರೆಗೆ ಬಿಬಿಎಂಪಿ ಗುತ್ತಿಗೆ - ಆರ್ಥಿಕ ಇಲಾಖೆ ಕೆಂಗಣ್ಣು
ಪೌರಕಾರ್ಮಿಕರಿಗೆ ಬಿಸಿಯೂಟ: ಟೆಂಡರ್ ಕರೆಯದೇ, 2 ರೂ ಹೆಚ್ಚಿಗೇ ನೀಡಿ, ಅಕ್ಷಯಪಾತ್ರೆ ಫೌಂಡೇಷನ್‌ಗೆ ಗುತ್ತಿಗೆ, ಬಿಬಿಎಂಪಿ ವಿರುದ್ಧ ಆರ್ಥಿಕ ಇಲಾಖೆ ಕೆಂಗಣ್ಣು
TV9 Web
| Edited By: ಸಾಧು ಶ್ರೀನಾಥ್​|

Updated on:Nov 27, 2021 | 8:33 AM

Share

ಬೆಂಗಳೂರು: ತನ್ನ ವ್ಯಾಪ್ತಿಯ ಪೌರಕಾರ್ಮಿಕರಿಗೆ ಬಿಸಿಯೂಟ ವಿತರಣೆ ಯೋಜನೆಯನ್ನು ಇಸ್ಕಾನ್ ಅಕ್ಷಯಪಾತ್ರೆ ಫೌಂಡೇಷನ್‌ಗೆ (Iskcon Akshaya Patra Foundation) ಟೆಂಡರ್ ಕರೆಯದೆ ಏಕಪಕ್ಷೀಯವಾಗಿ ಬಿಬಿಎಂಪಿ ಗುತ್ತಿಗೆ ನೀಡಿದೆ. ಅದೂ ಒಂದು ಊಟಕ್ಕೆ ಹೆಚ್ಚುವರಿಯಾಗಿ 2 ರೂ. ನೀಡಿ ಗುತ್ತಿಗೆಯನ್ನು ದಿಢೀರನೆ ಬದಲಾಯಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಕೆಲವು ಕೆಲಸಗಳಿಗೆ ಟೆಂಡರ್ ಅಗತ್ಯವಿಲ್ಲ ಎಂದಿದ್ದಾರೆ. BBMPಯ 17,000 ಪೌರಕಾರ್ಮಿಕರಿಗೆ (Pourakarmikas) ಬಿಸಿಯೂಟ ವಿತರಿಸುವ ಗುತ್ತಿಗೆಯನ್ನು (Bisiyuta contract) ಮೊದಲು ಇಂದಿರಾ ಕ್ಯಾಂಟೀನ್‌ಗೆ ವಹಿಸಲಾಗಿತ್ತು. BBMP ಒಂದು ಊಟಕ್ಕೆ 20 ರೂಪಾಯಿ ಪಾವತಿ ಮಾಡುತ್ತಿತ್ತು. ಇದೀಗ ಇಂದಿರಾ ಕ್ಯಾಂಟೀನ್‌ಗೆ ನೀಡಿದ್ದ ಟೆಂಡರ್ ರದ್ದು ಪಡಿಸಿ, ಟೆಂಡರ್ ಕರೆಯದೆಯೇ, ಅಕ್ಷಯಪಾತ್ರೆ ಫೌಂಡೇಷನ್‌ಗೆ ಗುತ್ತಿಗೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಜೊತೆಗೆ ಒಂದು ಊಟಕ್ಕೆ ಹೆಚ್ಚುವರಿಯಾಗಿ 2 ರೂಪಾಯಿ ನೀಡಿಕೆಯಾಗಿದೆ ಎನ್ನಲಾಗಿದೆ. ಅಂದರೆ ಒಂದು ಊಟಕ್ಕೆ 22 ರೂಪಾಯಿ ನೀಡುತ್ತಿರುವ ಮಾಹಿತಿಯಿದೆ.

ಆರ್ಥಿಕ‌ ಇಲಾಖೆಯ ವಿರೋಧವೂ ಇದೆ: ಈ ಹಿಂದೆ ಅಕ್ಷಯಪಾತ್ರೆ ಫೌಂಡೇಷನ್ ಒದಗಿಸುತ್ತಿದ್ದ ಬಿಸಿಯೂಟವನ್ನು ತಿರಸ್ಕರಿಸಲಾಗಿತ್ತು. ಬೆಳ್ಳುಳ್ಳಿ, ಈರುಳ್ಳಿ ಬಳಕೆ ಮಾಡುವುದಿಲ್ಲ ಎಂದು ತಿರಸ್ಕರಿಸಲಾಗಿತ್ತು. ಇದೀಗ ಮತ್ತೆ ಇಸ್ಕಾನ್ ಅಕ್ಷಯಪಾತ್ರೆ ಫೌಂಡೇಷನ್‌ಗೇ ಗುತ್ತಿಗೆ ವಹಿಸಲಾಗಿದೆ. ಕುತೂಹಲದ ಸಂಗತಿಯೆಂದರೆ ಆರ್ಥಿಕ‌ ಇಲಾಖೆಯ ವಿರೋಧದ ಮಧ್ಯೆ ಅಕ್ಷಯಪಾತ್ರೆ ಫೌಂಡೇಷನ್‌ಗೆ BBMP ಈ ಗುತ್ತಿಗೆ ನೀಡಿದೆ.

ಆರ್ಥಿಕ ಇಲಾಖೆಯು (Finance Department) ಪೌರಕಾರ್ಮಿಕರಿಗೆ ಬಿಸಿಯೂಟ ವಿತರಿಸುವ ಗುತ್ತಿಗೆಯನ್ನು ಟೆಂಡರ್ ಕರೆದು ಗುತ್ತಿಗೆ ನೀಡಲು ಸೂಚಿಸಿತ್ತು. ಆದರೆ 4ಜಿ ವಿನಾಯಿತಿ ಕೊಟ್ಟು ನೇರವಾಗಿ ಗುತ್ತಿಗೆ ನೀಡಿಕೆಯಾಗಿದೆ. ಕೆಲವು ಕೆಲಸಗಳಿಗೆ ಟೆಂಡರ್ ಅಗತ್ಯವಿಲ್ಲವೆಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಪ್ರತಿಕ್ರಿಯಿಸಿದ್ದಾರೆ. – ಮುತ್ತಪ್ಪ ಲಮಾಣಿ

Also Read: ಇಸ್ಕಾನ್ ದೇವಾಲಯದಲ್ಲಿ ವೈಕುಂಠ ದ್ವಾರ ನಿರ್ಮಾಣ, ಹರಿದು ಬಂದ ಜನ ಸಾಗರ

Published On - 8:20 am, Sat, 27 November 21

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ