AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಟ್ ಕಾಯಿನ್ ಹಗರಣ ಪ್ರಕರಣ: ‘ಎಸ್​ಐಟಿ’ ಯಿಂದ ಮೊದಲ ಚಾರ್ಜ್ ಶೀಟ್ ಸಲ್ಲಿಕೆ

ಇದೇ 2015ರಲ್ಲಿ ಕೆಂಪೇಗೌಡನಗರ ಠಾಣೆಯಲ್ಲಿ ದಾಖಲಾಗಿದ್ದ ಡ್ರಗ್ಸ್ ಕೇಸ್‌ನಲ್ಲಿ ಶ್ರೀಕಿಯನ್ನು ಬಂಧಿಸಲಾಗಿತ್ತು. ಈ ಪ್ರಕರಣವನ್ನು ತನಿಖೆ ಮಾಡುತ್ತಿದ್ದ ವೇಳೆ ಬಿಟ್‌ಕಾಯಿನ್ ಪ್ರಕರಣ ಬೆಳಕಿಗೆ ಬಂದಿತ್ತು. ಈ ಹಿನ್ನಲೆ ಎಸ್​ಐಟಿ ಯಿಂದ ಮೊದಲ ಚಾರ್ಜ್ ಶೀಟ್(charge sheet) ಸಲ್ಲಿಕೆಯಾಗಿದೆ. ಕೆಜಿ ನಗರದ ಡ್ರಗ್ಸ್ ಕೇಸ್​ನಲ್ಲಿ ಶ್ರೀಖಿ, ರಾಬಿನ್ ಖಂಡೇವಾಲ ಹಾಗೂ ಸುನೀಶ್ ಹೆಗ್ಡೆ ಸೇರಿ ಒಟ್ಟು 6 ಜನರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದೆ.

ಬಿಟ್ ಕಾಯಿನ್ ಹಗರಣ ಪ್ರಕರಣ: ‘ಎಸ್​ಐಟಿ’ ಯಿಂದ ಮೊದಲ ಚಾರ್ಜ್ ಶೀಟ್ ಸಲ್ಲಿಕೆ
ಬಿಟ್ ಕಾಯಿನ್ ಹಗರಣ ಪ್ರಕರಣ: ‘ಎಸ್​ಐಟಿ’ ಯಿಂದ ಮೊದಲ ಚಾರ್ಜ್ ಶೀಟ್ ಸಲ್ಲಿಕೆ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jun 06, 2024 | 2:44 PM

Share

ಬೆಂಗಳೂರು, ಜೂ.06: ಬಿಟ್ ಕಾಯಿನ್ ಹಗರಣ ಪ್ರಕರಣ(Bitcoin Scam Case)ದ ತನಿಖೆ ಚುರುಕುಗೊಂಡಿದ್ದು, ಎಸ್​ಐಟಿ ಯಿಂದ ಮೊದಲ ಚಾರ್ಜ್ ಶೀಟ್(charge sheet) ಸಲ್ಲಿಕೆಯಾಗಿದೆ. ಕೆಜಿ ನಗರ ಡ್ರಗ್ಸ್ ಕೇಸ್​ನಲ್ಲಿ ಶ್ರೀಖಿ, ರಾಬಿನ್ ಖಂಡೇವಾಲ ಹಾಗೂ ಸುನೀಶ್ ಹೆಗ್ಡೆ ಸೇರಿ ಒಟ್ಟು 6 ಜನರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದೆ. ಮೂರು ಎಫ್​ಐಆರ್​ಗಳನ್ನು ಎಸ್​ಐಟಿ ತನಿಖೆ ಮಾಡುತ್ತಾ ಇತ್ತು. ಬಿಟ್ ಕಾಯಿನ್ ಹಗರಣದ ಮುನ್ನ ಡ್ರಗ್ಸ್ ಕೇಸ್ ಬಂದಿತ್ತು. ಆ ಕುರಿತು ತನಿಖೆ ನಡೆಸಿದಾಗ ಬಿಟ್ ಕಾಯಿನ್ ಹಗರಣ ಬೆಳಕಿಗೆ ಬಂದಿತ್ತು. ಈ ಹಿನ್ನಲೆ ಇಂದು(ಜೂ.06) ಎಸ್ ಐ ಟಿ ಮೊದಲನೇ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ.

ಇದೇ 2015ರಲ್ಲಿ ಕೆಂಪೇಗೌಡನಗರ ಠಾಣೆಯಲ್ಲಿ ದಾಖಲಾಗಿದ್ದ ಡ್ರಗ್ಸ್ ಕೇಸ್‌ನಲ್ಲಿ ಶ್ರೀಕಿಯನ್ನು ಬಂಧಿಸಲಾಗಿತ್ತು. ಈ ಪ್ರಕರಣವನ್ನು ತನಿಖೆ ಮಾಡುತ್ತಿದ್ದ ವೇಳೆ ಬಿಟ್‌ಕಾಯಿನ್ ಪ್ರಕರಣ ಬೆಳಕಿಗೆ ಬಂದಿತ್ತು. ಅದರಂತೆ 2020ರಲ್ಲಿ ಸುಮಾರು ಸಾವಿರ ಕೋಟಿ ಹಗರಣದ ಬಿಟ್‌ಕಾಯಿನ್ ಕೇಸ್‌ನಲ್ಲಿ ಶ್ರೀಕಿ ಬಂಧನವಾಗಿತ್ತು. ಇದಾದ ನಂತರ ಶ್ರೀಕಿ ಕಳೆದ ಐದಾರು ವರ್ಷಗಳಿಂದ ವಿವಿಧ ಕ್ರಿಪ್ಟೋ ಕರೆನ್ಸಿ ಮಾರಾಟ ಪ್ಲಾಟ್‌ಫಾರ್ಮ್‌ಗಳನ್ನು ಹ್ಯಾಕ್ ಮಾಡಿ ಅವುಗಳಿಂದ ಸಾವಿರಾರು ಬಿಟ್‌ಕಾಯಿನ್‌ಗಳನ್ನು ಎಗರಿಸಿದ್ದನು. ಅಲ್ಲದೇ ರಾಜ್ಯ ಸರ್ಕಾರದ ಇ-ಸಂಗ್ರಹಣಾ ಪೋರ್ಟಲ್​ ಜಾಲತಾಣ ಹ್ಯಾಕ್​ ಮಾಡಿದ್ದನು. ಈ ಪ್ರಕರಣವನ್ನು ಸಿಸಿಬಿ ಪೊಲೀಸರು ತನಿಖೆ ನಡೆಸಿ, ಆರೋಪಿಯನ್ನು ಬಂಧಿಸಿದ್ದರು.

ಇದನ್ನೂ ಓದಿ:ಬಿಟ್ ಕಾಯಿನ್ ಪ್ರಕರಣದ ಆರೋಪಿಗಳ ವಿರುದ್ದ ಕೋಕಾ ಅಸ್ತ್ರ ಬಳಕೆ; ಏನಿದು ಕಾಯ್ದೆ?

ಇನ್ನು 2017ರಲ್ಲಿ ತುಮಕೂರು ಸೆನ್ ಠಾಣೆಯಲ್ಲಿ ದಾಖಲಾಗಿದ್ದ ಬಿಟ್ ಕಾಯಿನ್ ಪ್ರಕರಣದ ಹಿನ್ನಲೆ ಇತ್ತೀಚೆಗಷ್ಟೇ ಶ್ರೀಕಿ ಅಂಡ್ ಟೀಮ್ ಮೇಲೆ ಕೋಕಾ ಕಾಯಿದೆ ಜಾರಿ ಮಾಡಲಾಗಿತ್ತು. ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆಯಡಿ ಕೇಸ್ ದಾಖಲಾಗಲಿದೆ. ಈ ಕಾಯ್ದೆಯಲ್ಲಿ ಕನಿಷ್ಠ ಒಂದು ವರ್ಷ ಅಪರಾಧಿಗಳಿಗೆ ಜಾಮೀನು ಸಿಗುವುದಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ