AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಟ್‌ಕಾಯಿನ್ ಹಗರಣ: ಶ್ರೀಕಿ ಸೇರಿ ಇನ್ನಿಬ್ಬರಿಂದ 47 ಲಕ್ಷ ರೂ ಮೌಲ್ಯದ ಬಿಟ್‌ಕಾಯಿನ್ ಜಪ್ತಿ ಮಾಡಿದ ಇಡಿ

ಬಹುಕೋಟಿ ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಪ್ರಮುಖ ಆರೋಪಿಗಳಿಂದ ಲಕ್ಷಾಂತರ ರೂ ಮೌಲ್ಯದ 50 ಸಾವಿರ USDT ಬಿಟ್‌ಕಾಯಿನ್ ಜಪ್ತಿ ಮಾಡಿದೆ. ಆರೋಪಿಗಳು ಅಮೆರಿಕ ಮೂಲದ ಕಂಪನಿಯನ್ನು ಹ್ಯಾಕ್ ಮಾಡಿ ಬಿಟ್‌ಕಾಯಿನ್ ಖರೀದಿಸಿದ್ದರು. ಸದ್ಯ ಎಲ್ಲರೂ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಬಿಟ್‌ಕಾಯಿನ್ ಹಗರಣ: ಶ್ರೀಕಿ ಸೇರಿ ಇನ್ನಿಬ್ಬರಿಂದ 47 ಲಕ್ಷ ರೂ ಮೌಲ್ಯದ ಬಿಟ್‌ಕಾಯಿನ್ ಜಪ್ತಿ ಮಾಡಿದ ಇಡಿ
ಇ.ಡಿ, ಬಿಟ್​ಕಾಯಿನ್Image Credit source: kucoin
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: May 25, 2026 | 3:55 PM

Share

ಬೆಂಗಳೂರು, ಮೇ 25: ದೇಶಾದ್ಯಂತ ಭಾರೀ ಸಂಚಲನ ಮೂಡಿಸಿರುವ ಬಹುಕೋಟಿ ಬಿಟ್‌ಕಾಯಿನ್ ಹಗರಣ ಪ್ರಕರಣಕ್ಕೆ (Bitcoin Scam) ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮೂವರು ಪ್ರಮುಖ ಆರೋಪಿಗಳಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಬಿಟ್‌ಕಾಯಿನ್ ಹಾಗೂ ಡಿಜಿಟಲ್ ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಮುಖ್ಯಾಂಶಗಳು

  • ಬಿಟ್‌ಕಾಯಿನ್ ಹಗರಣದ ಮೂಲ ಮತ್ತು ಇಡಿ ತನಿಖೆ
  • ಮೂವರು ಆರೋಪಿಗಳಿಂದ ಲಕ್ಷಾಂತರ ಮೌಲ್ಯದ ಬಿಟ್‌ಕಾಯಿನ್ ವಶಕ್ಕೆ
  • ನ್ಯಾಯಾಂಗ ಬಂಧನದಲ್ಲಿರುವ ಮೂವರು ಆರೋಪಿಗಳು

50 ಸಾವಿರ ಯುಎಸ್​​ಡಿಟಿ ಮೌಲ್ಯದ ಬಿಟ್‌ಕಾಯಿನ್ ಜಪ್ತಿ

ಬಿಟ್‌ಕಾಯಿನ್​​ ಪ್ರಕರಣದ ಪ್ರಮುಖ ಆರೋಪಿಗಳಾದ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ, ರಾಬಿನ್ ಖಂಡೇವಾಲ ಮತ್ತು ಸುನೀಶ್ ಹೆಗ್ಡೆ ಎಂಬುವವರಿಂದ ಸುಮಾರು 50 ಸಾವಿರ ಯುಎಸ್​​ಡಿಟಿ ಮೌಲ್ಯದ ಬಿಟ್‌ಕಾಯಿನ್ ಅನ್ನು ಇ.ಡಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಇದನ್ನೂ ಓದಿ: ಬಿಟ್‌ಕಾಯಿನ್ ಹಗರಣ ಹಿನ್ನೆಲೆ ಶ್ರೀಕಿ ಅರೆಸ್ಟ್! ಮಹಮ್ಮದ್ ನಲಪಾಡ್​ಗೂ ಎದುರಾಗುತ್ತಾ ಸಂಕಷ್ಟ?

ಇದರ ಭಾರತೀಯ ಕರೆನ್ಸಿ ಮೌಲ್ಯ ಸುಮಾರು 47,66,275 ರೂಪಾಯಿಗಳಾಗಿದೆ ಎಂದು ಅಂದಾಜಿಸಲಾಗಿದೆ. ಬಿಟ್‌ಕಾಯಿನ್ ಮಾತ್ರವಲ್ಲದೆ, ಆರೋಪಿಗಳಿಂದ ಕೃತ್ಯಕ್ಕೆ ಬಳಸಲಾಗಿದ್ದ 3 ಲ್ಯಾಪ್‌ಟಾಪ್ ಹಾಗೂ 3 ಮೊಬೈಲ್ ಫೋನ್‌ಗಳನ್ನು ಸಹ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಅಮೆರಿಕ ಕಂಪನಿ ಹ್ಯಾಕ್ ಮಾಡಿದ್ದ ಖದೀಮರು

ತನಿಖೆಯ ವೇಳೆ ಆರೋಪಿಗಳು ಅಮೆರಿಕ ಮೂಲದ ಪ್ರತಿಷ್ಠಿತ ಕಂಪನಿಯೊಂದರ ನೆಟ್‌ವರ್ಕ್ ಅನ್ನು ಹ್ಯಾಕ್ ಮಾಡಿರುವುದು ಬೆಳಕಿಗೆ ಬಂದಿದೆ. ಹೀಗೆ ಕಾನೂನುಬಾಹಿರವಾಗಿ ಹ್ಯಾಕ್ ಮಾಡಿದ ಹಣದ ಮೂಲಕವೇ ಆರೋಪಿಗಳು 50 ಸಾವಿರ USDT ಮೌಲ್ಯದ ಬಿಟ್‌ಕಾಯಿನ್ ಖರೀದಿಸಿದ್ದರು ಎಂಬ ಆಘಾತಕಾರಿ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ಬಿಟ್ ಕಾಯಿನ್ ಹಗರಣಕ್ಕೂ ಶಾಸಕ ಹ್ಯಾರಿಸ್​ಗೂ ಏನು ಸಂಬಂಧ? ಕಾಂಗ್ರೆಸ್ ಶಾಸಕರ, ನಲಪಾಡ್ ಮನೆ ಮೇಲೆ ಇಡಿ ದಾಳಿ ಮಾಡಿದ್ದೇಕೆ?

ಸದ್ಯ ಜಾರಿ ನಿರ್ದೇಶನಾಲಯದ ಬಲೆಯಲ್ಲಿರುವ ಈ ಮೂವರೂ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಪ್ರಕರಣದ ಕುರಿತು ಇ.ಡಿ ಅಧಿಕಾರಿಗಳು ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ನೋಡೋಕೆ ಸಮಾಜ ಸೇವೆ: ಆ್ಯಂಬುಲೆನ್ಸ್​ನಲ್ಲಿ ನಡೀತಿದ್ದಿದ್ದು ಡ್ರಗ್ಸ್ ದಂಧೆ!
ನೋಡೋಕೆ ಸಮಾಜ ಸೇವೆ: ಆ್ಯಂಬುಲೆನ್ಸ್​ನಲ್ಲಿ ನಡೀತಿದ್ದಿದ್ದು ಡ್ರಗ್ಸ್ ದಂಧೆ!
ಮಳೆ ಕೊರತೆ: ಶಿವನಸಮುದ್ರದಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತ
ಮಳೆ ಕೊರತೆ: ಶಿವನಸಮುದ್ರದಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತ
ಕಾಂಗ್ರೆಸ್‌ನಲ್ಲಿ ಸಂಪುಟ ವಿಸ್ತರಣೆ ಕಸರತ್ತು: ನವದೆಹಲಿಯತ್ತ ನಾಯಕರ ಪಯಣ!
ಕಾಂಗ್ರೆಸ್‌ನಲ್ಲಿ ಸಂಪುಟ ವಿಸ್ತರಣೆ ಕಸರತ್ತು: ನವದೆಹಲಿಯತ್ತ ನಾಯಕರ ಪಯಣ!
ಜುಲೈ 27 ರಿಂದ ಆಗಸ್ಟ್ 02ರ ವರೆಗಿನ ದ್ವಾದಶ ರಾಶಿಗಳ ಫಲಾಫಲ
ಜುಲೈ 27 ರಿಂದ ಆಗಸ್ಟ್ 02ರ ವರೆಗಿನ ದ್ವಾದಶ ರಾಶಿಗಳ ಫಲಾಫಲ
ಇಂದು ಈ ರಾಶಿಯವರಿಗೆ ಉದ್ಯೋಗಾವಕಾಶ!
ಇಂದು ಈ ರಾಶಿಯವರಿಗೆ ಉದ್ಯೋಗಾವಕಾಶ!
ಕೇಂದ್ರ ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ಬಗ್ಗೆ ಪ್ರಲ್ಹಾದ್ ಜೋಶಿ ಏನಂದ್ರು?
ಕೇಂದ್ರ ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ಬಗ್ಗೆ ಪ್ರಲ್ಹಾದ್ ಜೋಶಿ ಏನಂದ್ರು?
ಚಿಕ್ಕಬಳ್ಳಾಪುರದಲ್ಲಿ ಕೈ ಕೈ ಮಿಲಾಹಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತರು
ಚಿಕ್ಕಬಳ್ಳಾಪುರದಲ್ಲಿ ಕೈ ಕೈ ಮಿಲಾಹಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತರು
ಪೊಲೀಸರಿಂದ ಪಾಕ್ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್
ಪೊಲೀಸರಿಂದ ಪಾಕ್ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್
ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ
ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ
ಅತ್ತ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ
ಅತ್ತ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ