AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಟ್‌ಕಾಯಿನ್ ಹಗರಣ ಹಿನ್ನೆಲೆ ಶ್ರೀಕಿ ಅರೆಸ್ಟ್! ಮಹಮ್ಮದ್ ನಲಪಾಡ್​ಗೂ ಎದುರಾಗುತ್ತಾ ಸಂಕಷ್ಟ?

ಬಿಟ್‌ಕಾಯಿನ್ ಹಗರಣದ ಕಿಂಗ್‌ಪಿನ್ ಶ್ರೀಕಿಯನ್ನು ಇಡಿ ಅಧಿಕಾರಿಗಳು ಬಂಧಿಸಿದ್ದು, ಇದರೊಂದಿಗೆ ಮೊಹಮ್ಮದ್ ನಲಪಾಡ್‌ಗೆ ಮತ್ತೆ ಸಂಕಷ್ಟ ಎದುರಾಗಿದೆ. ಸರ್ಕಾರದ ಇ-ಪ್ರೊಕ್ಯೂರಮೆಂಟ್ ವೆಬ್‌ಸೈಟ್ ಹ್ಯಾಕ್ ಮತ್ತು 4.5 ಕೋಟಿ ರೂ. ಅಕ್ರಮ ವಹಿವಾಟಿನ ಹಳೆಯ ನಂಟಿನ ಬಗ್ಗೆ ಇಡಿ ತನಿಖೆ ಚುರುಕುಗೊಳಿಸಿದೆ. ಈ ಹಿಂದೆ ಎಸ್‌ಐಟಿ ವಿಚಾರಣೆ ಎದುರಿಸಿದ್ದ ನಲಪಾಡ್ ವಿರುದ್ಧ ಈಗ ಹೆಚ್ಚಿನ ದಾಖಲೆಗಳನ್ನು ಇಡಿ ಕಲೆಹಾಕುತ್ತಿದೆ.

ಬಿಟ್‌ಕಾಯಿನ್ ಹಗರಣ ಹಿನ್ನೆಲೆ ಶ್ರೀಕಿ ಅರೆಸ್ಟ್! ಮಹಮ್ಮದ್ ನಲಪಾಡ್​ಗೂ ಎದುರಾಗುತ್ತಾ ಸಂಕಷ್ಟ?
ಬಿಟ್‌ಕಾಯಿನ್ ಹಗರಣ ಹಿನ್ನೆಲೆ ಶ್ರೀಕಿ ಅರೆಸ್ಟ್! ಮಹಮ್ಮದ್ ನಲಪಾಡ್​ಗೂ ಎದುರಾಗುತ್ತಾ ಸಂಕಷ್ಟ?
Shivaprasad B
| Edited By: |

Updated on: May 09, 2026 | 11:17 AM

Share

ಬೆಂಗಳೂರು, ಮೇ 09: ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಬಿಟ್‌ಕಾಯಿನ್ ಹಗರಣದ ತನಿಖೆ ಈಗ ನಿರ್ಣಾಯಕ ಹಂತಕ್ಕೆ ತಲುಪಿದೆ. ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಹಗರಣದ ಕಿಂಗ್‌ಪಿನ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ (Shreeki) ಸೇರಿದಂತೆ ಮೂವರನ್ನು ಬಂಧಿಸಿದ್ದು, ಇದರ ಬೆನ್ನಲ್ಲೇ ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್‌ಗೆ ಸಂಕಷ್ಟ ಎದುರಾಗುತ್ತಾ ಎಂಬ ಪ್ರಶ್ನೆಯೆದ್ದಿದೆ.

ಮುಖ್ಯಾಂಶಗಳು

  • ಬಿಟ್‌ಕಾಯಿನ್ ಹಗರಣದ ಕಿಂಗ್‌ಪಿನ್ ಶ್ರೀಕಿ ಸೇರಿ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು
  • ಶ್ರೀಕಿ ಬಂಧನದಿಂದ ಮೊಹಮ್ಮದ್ ನಲಪಾಡ್‌ಗೆ ಮತ್ತೆ ಶುರುವಾದ ಬಿಟ್‌ಕಾಯಿನ್ ಸಂಕಷ್ಟದ ಭೀತಿ
  • ಹಳೆ ನಂಟಿನ ಕುರಿತು ದಾಖಲೆ ಕಲೆಹಾಕಿ ನಲಪಾಡ್ ವಿಚಾರಣೆಗೆ ಇಡಿ ಸಿದ್ಧತೆ

ಶ್ರೀಕಿ ಬಂಧನ ಮತ್ತು ನಲಪಾಡ್ ಲಿಂಕ್

ಬಂಧಿತ ಶ್ರೀಕಿ ಜೊತೆ ಮೊಹಮ್ಮದ್ ನಲಪಾಡ್ ನಿಕಟ ಸಂಪರ್ಕ ಹೊಂದಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಹಿಂದೆ ರಾಜ್ಯ ಸರ್ಕಾರದ ಇ-ಪ್ರೊಕ್ಯೂರಮೆಂಟ್ ವೆಬ್‌ಸೈಟ್ ಹ್ಯಾಕ್ ಮಾಡಿ, ಸರ್ಕಾರದ ಹಣವನ್ನು ವಿವಿಧ ಅಕ್ರಮ ಖಾತೆಗಳಿಗೆ ವರ್ಗಾಯಿಸಿದ ಆರೋಪ ಶ್ರೀಕಿ ತಂಡದ ಮೇಲಿದೆ. ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ಎಸ್‌ಐಟಿ (SIT) ತನಿಖೆಗೆ ವಹಿಸಿತ್ತು. ಎಸ್‌ಐಟಿ ತನಿಖೆಯ ವೇಳೆ ಹಲವು ಡಿಜಿಟಲ್ ವ್ಯಾಲೆಟ್‌ಗಳ ಕಳ್ಳತನ ಬೆಳಕಿಗೆ ಬಂದಿದ್ದಲ್ಲದೆ, ನಲಪಾಡ್ಗೂ ಈ ಜಾಲದ ಜೊತೆ ಲಿಂಕ್ ಇರುವುದು ಕಂಡುಬಂದಿತ್ತು. ಇದೇ ಕಾರಣಕ್ಕೆ ನಲಪಾಡ್ ಈಗಾಗಲೇ ಎರಡು ಬಾರಿ ಎಸ್‌ಐಟಿ ವಿಚಾರಣೆಗೂ ಹಾಜರಾಗಿದ್ದರು. ಈಗ ಇಡಿ ಅಧಿಕಾರಿಗಳು ಶ್ರೀಕಿಯನ್ನು ಬಂಧಿಸಿರುವುದರಿಂದ, ಅಕ್ರಮ ಹಣ ವರ್ಗಾವಣೆಯಲ್ಲಿ ನಲಪಾಡ್ ಪಾತ್ರದ ಕುರಿತು ದಾಖಲೆಗಳನ್ನು ಸಂಗ್ರಹಿಸುತ್ತಿದ್ದಾರೆ.

ಹಳೆಯ ಹಗರಣವೇನು?

ಈ ಹಿಂದೆ ಏಪ್ರಿಲ್ 2024ರಲ್ಲಿ ಶಾಸಕ ಹ್ಯಾರಿಸ್ ಮತ್ತು ನಲಪಾಡ್ ನಿವಾಸಗಳ ಮೇಲೆ ಇಡಿ 15 ಗಂಟೆಗಳ ಕಾಲ ಸುದೀರ್ಘ ದಾಳಿ ನಡೆಸಿತ್ತು. ಶ್ರೀಕಿ ಹ್ಯಾಕ್ ಮಾಡಿದ ಬಿಟ್‌ಕಾಯಿನ್‌ಗಳನ್ನು ಕ್ರಿಪ್ಟೋ ಮೂಲಕ ಹಣವಾಗಿ ಪರಿವರ್ತಿಸಿ, ಲೇಯರಿಂಗ್ (Layering) ಪದ್ಧತಿಯಲ್ಲಿ ವರ್ಗಾಯಿಸಿರುವುದು ಅಂದು ಪತ್ತೆಯಾಗಿತ್ತು. ಶ್ರೀಕಿ, ನಲಪಾಡ್ ಸಹೋದರ ಉಮರ್ ನಲಪಾಡ್‌ನ ಸಹಪಾಠಿಯಾಗಿದ್ದರಿಂದ ಈ ಸ್ನೇಹ ಆರಂಭವಾಗಿತ್ತು. ಶ್ರೀಕಿ ಮುಂಬೈ ಮೂಲದ ವ್ಯಕ್ತಿಯೊಬ್ಬನ ಮೂಲಕ ನಲಪಾಡ್ ಖಾತೆಗೆ 10 ಲಕ್ಷ ರೂ. ವರ್ಗಾಯಿಸಿದ ಆರೋಪ ಅಂದೇ ಕೇಳಿಬಂದಿತ್ತು. ಒಟ್ಟಾರೆ 4.5 ಕೋಟಿ ರೂ. ಅಕ್ರಮ ವಹಿವಾಟಿನ ಶಂಕೆ ವ್ಯಕ್ತವಾಗಿತ್ತು.

ಇದನ್ನೂ ಓದಿ ಹ್ಯಾಕರ್ ಶ್ರೀಕಿಯ ಐಷಾರಾಮಿ ಜೀವನ ನಲಪಾಡ್​ಗೆ ಕುತ್ತು ತಂದಿದ್ದು ಹೇಗೆ ಗೊತ್ತಾ? ಇಲ್ಲಿದೆ ನೋಡಿ

ಹಿಂದಿನ ದಾಳಿ ಮತ್ತು ಎಸ್‌ಐಟಿ ನೀಡಿದ್ದ ಮಾಹಿತಿಗಳ ಆಧಾರದ ಮೇಲೆ ಇಡಿ ಈಗ ಶ್ರೀಕಿಯನ್ನು ವಶಕ್ಕೆ ಪಡೆದಿದೆ. ಶ್ರೀಕಿ ನೀಡುವ ಹೇಳಿಕೆಗಳು ನಲಪಾಡ್ ಪಾಲಿಗೆ ಕಂಟಕವಾಗುವ ಸಾಧ್ಯತೆಯಿದೆ. ರಾಜ್ಯ ಸರ್ಕಾರದ ಹಣ ಮತ್ತು ಡಿಜಿಟಲ್ ಆಸ್ತಿಗಳ ಲೂಟಿಯಲ್ಲಿ ಯಾರಿಗೆಲ್ಲಾ ಪಾಲು ಸಂದಿದೆ ಎಂಬುದು ಈಗ ಇಡಿ ತನಿಖೆಯಿಂದ ಹೊರಬರಬೇಕಿದೆ. ಸದ್ಯ ಶ್ರೀಕಿ ಬಂಧನದಿಂದ ರಾಜಕೀಯ ವಲಯದಲ್ಲೂ ನಡುಕ ಶುರುವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್