AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಚುನಾವಣಾಧಿಕಾರಿಗೆ ಬಿಜೆಪಿ ದೂರು

ಲೋಕಸಭೆ ಚುನಾವಣೆ ಹತ್ತಿರವಾಗುತ್ತಲೇ ಉಭಯ ಪಕ್ಷಗಳಿಂದ ಆರೋಪ, ಪ್ರತ್ಯಾರೋಪಗಳು ನಡೆಯುತ್ತಿದೆ. ಅದರಂತೆ ಸುಳ್ಳು ಹೇಳಿಕೆ ನೀಡಿ ಬಿಜೆಪಿ ಕಾರ್ಯಕರ್ತರನ್ನು ಎನ್‌ಐಎ(NIA) ಬಂಧಿಸಿದೆ ಎಂಬ ವದಂತಿಗಳನ್ನು ಹರಡಿದ್ದಕ್ಕಾಗಿ ಸಾಗರದ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ(Belur Gopalakrishna) ವಿರುದ್ಧ ಚುನಾವಣಾಧಿಕಾರಿಗೆ ಬಿಜೆಪಿ ದೂರು ನೀಡಿದೆ.

ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಚುನಾವಣಾಧಿಕಾರಿಗೆ ಬಿಜೆಪಿ ದೂರು
ಬೇಳೂರು ಗೋಪಾಲಕೃಷ್ಣ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Apr 06, 2024 | 9:21 PM

Share

ಬೆಂಗಳೂರು, ಏ.06: ಲೋಕಸಭೆ ಚುನಾವಣೆ ಹತ್ತಿರವಾಗುತ್ತಲೇ ಉಭಯ ಪಕ್ಷಗಳಿಂದ ಆರೋಪ, ಪ್ರತ್ಯಾರೋಪಗಳು ನಡೆಯುತ್ತಿದೆ. ಅದರಂತೆ ಸುಳ್ಳು ಹೇಳಿಕೆ ನೀಡಿ ಬಿಜೆಪಿ ಕಾರ್ಯಕರ್ತರನ್ನು ಎನ್‌ಐಎ(NIA) ಬಂಧಿಸಿದೆ ಎಂಬ ವದಂತಿಗಳನ್ನು ಹರಡಿದ್ದಕ್ಕಾಗಿ ಸಾಗರದ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ(Belur Gopalakrishna) ವಿರುದ್ಧ ಬಿಜೆಪಿ ವಕ್ತಾರ ಪ್ರಕಾಶ್​.ಎಸ್ ಚುನಾವಣಾಧಿಕಾರಿಗಳಿಗೆ​ ದೂರು ನೀಡಿದ್ದಾರೆ.

ದೂರಿನಲ್ಲೇನಿದೆ

ಶಾಸಕ ಬೇಳೂರು ಗೋಪಾಲಕೃಷ್ಣ ಅವರೇ ‘ಶಿವಮೊಗ್ಗ ಮತ್ತು ತೀರ್ಥಹಳ್ಳಿಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ದಾಳಿ ನಡೆಸಿದ್ದು, ಆ ದಾಳಿಗಳಲ್ಲಿ  ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಇತ್ತೀಚೆಗೆ ಸಂಭವಿಸಿದ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷದ ಸದಸ್ಯರನ್ನು ಬಂಧಿಸಲಾಗಿದೆ ಎಂಬ ನಿಮ್ಮ ಹೇಳಿಕೆಯನ್ನು ಖಾಸಗಿ ಸುದ್ದಿ ವಾಹಿನಿಯಲ್ಲಿ ಏ.5 ರಂದು ಮಧ್ಯಾಹ್ನ 1.17 ಗಂಟೆಗೆ ಪ್ರಸಾರ ಮಾಡಲಾಗಿದೆ. ಈ ಕುರಿತು ನೀಡಿರುವ ಹೇಳಿಕೆಯನ್ನು ದೂರಿನಲ್ಲಿ ಲಗತ್ತಿಸಲಾಗಿದೆ.

ಇದನ್ನೂ ಓದಿ:ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಕೆ ರದ್ದು ಮಾಡುವಂತೆ ಚುನಾವಣಾಧಿಕಾರಿಗೆ ದೂರು, ಕಾರಣವೇನು?

ಜೊತೆಗೆ ಈ ನಿಟ್ಟಿನಲ್ಲಿ, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ನಿವಾಸಿಗಳಾದ ಮುಸ್ಸಾವಿರ್ ಹುಸೇನ್ ಶ್ಜಿಬ್ ಮತ್ತು ಅಬ್ದುಲ್ ಮಥೀನ್ ತಾಹಾ ಎಂಬ ನಿಜವಾದ ಆರೋಪಿ ಮತ್ತು ಸಹ ಸಂಚುಕೋರರನ್ನು ಬಂಧಿಸಿದ್ದೇವೆ ಎಂದು NIA ಏ. 5 ರ ಪತ್ರಿಕಾ ಪ್ರಕಟಣೆಯ ಮೂಲಕ ಸ್ಪಷ್ಟವಾಗಿ ಹೇಳಿದೆ. ಮೇಲಿನವರನ್ನು ಹೊರತುಪಡಿಸಿ, ಯಾವುದೇ ಇತರ ವ್ಯಕ್ತಿಯನ್ನು ಬಂಧಿಸಿರುವ ಬಗ್ಗೆ ಉಲ್ಲೇಖಿಸಲಾಗಿಲ್ಲ. ಆದರೆ, ಕಾಂಗ್ರೆಸ್ ಶಾಸಕರಾದ ಶ್ರೀ ಬೇಳೂರು ಗೋಪಾಲಕೃಷ್ಣ ಅವರು ದುರುದ್ದೇಶಪೂರಿತ ಮತ್ತು ಆಧಾರರಹಿತ ಆರೋಪಗಳನ್ನು ಮತ್ತು ಸುಳ್ಳು ಹೇಳಿಕೆಗಳನ್ನು ಮಾಡಿದ್ದಾರೆ ಎಂದು ನಾನು ಹೇಳುತ್ತೇನೆ.

ಇಂತಹ ಸುಳ್ಳು ಹೇಳಿಕೆಗಳನ್ನು ನೀಡುವ ಮೂಲಕ ಜನರ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿ, ಪ್ರಚೋದನೆಯನ್ನು ನೀಡುತ್ತಿದ್ದಾರೆ. ಲೋಕಸಭೆ ಚುನಾವಣೆಗಳು ಸಮೀಪಿಸುತ್ತಿರುವ ಕಾರಣ, ಭಾರತೀಯ ಜನತಾ ಪಕ್ಷದ ಕಾರ್ಯಕರ್ತರ ವಿರುದ್ಧ ಸುಳ್ಳು, ನಕಲಿ ಸುದ್ದಿಗಳನ್ನು ಹರಡಲಾಗಿದೆ. ಇದಲ್ಲದೆ, ಘಟನೆಯನ್ನು ವಿವಿಧ ಧರ್ಮಗಳಿಗೆ ಜೋಡಿಸಲು, ಧರ್ಮಗಳು ಮತ್ತು ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಹುನ್ನಾರ ಇದಾಗಿದೆ. ಈ ಮೂಲಕ ಹಾಲಿ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಭಾರತೀಯ ದಂಡ ಸಂಹಿತೆ, 1860 ರ ಸೆಕ್ಷನ್ 153 ಎ, ಮತ್ತು 505 ರ ಅಡಿಯಲ್ಲಿ ಸ್ಪಷ್ಟವಾಗಿ ಉಲ್ಲಂಘನೆ ಮಾಡಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಈ ಹಿನ್ನಲೆ ಅವರ ವಿರುದ್ದ ದೂರನ್ನು ದಾಖಲಿಸಲು ಮನವಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ