AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಭೂಮಿ ಡಿನೋಟಿಫಿಕೇಶನ್: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತರಿಗೆ ದೂರು

ಮೀಸಲು ಪ್ರದೇಶದಲ್ಲಿ ಯಾವುದೇ ನಿರ್ಮಾಣ ಕಾರ್ಯಗಳು ನಡೆಯುವುದು ಕಾನೂನು ಬಾಹಿರ ಚಟುವಟಿಕೆ ಎನಿಸಿಕೊಳ್ಳುತ್ತದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸರ್ಕಾರಿ ಭೂಮಿ ಡಿನೋಟಿಫಿಕೇಶನ್: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತರಿಗೆ ದೂರು
ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ
TV9 Web
| Edited By: |

Updated on:Oct 12, 2022 | 1:34 PM

Share

ಬೆಂಗಳೂರು: ಸರ್ಕಾರಿ ಭೂಮಿಯನ್ನು ಡಿನೋಟಿಫಿಕೇಷನ್ ಮಾಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramiah) ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಶ್ಯಾಮ್​​​ ಭಟ್​ ವಿರುದ್ಧ ಲೋಕಾಯುಕ್ತರಿಗೆ  (Lokayukta) ಬಿಜೆಪಿ ದಕ್ಷಿಣ ಬೆಂಗಳೂರು ಘಟಕದ ಮುಖಂಡ ಎನ್.ಆರ್.ರಮೆಶ್ ದೂರು ನೀಡಿದ್ದಾರೆ. ಖಾಸಗಿ ಬಿಲ್ಡರ್​​​ ಅಶೋಕ್​ ಧಾರಿವಾಲ್ ಎಂಬುವವರಿಗೆ ಕಾನೂನುಬಾಹಿರವಾಗಿ ಭೂಮಿಯನ್ನು ಡಿ-ನೊಟಿಫೈ ಮಾಡಿಕೊಡಲಾಗಿದೆ. ಬೆಂಗಳೂರು ದಕ್ಷಿಣ ತಾಲ್ಲೂಕು ಕಸಬಾ ಹೋಬಳಿಯ ಸಿದ್ದಾಪುರದ ಉದ್ಯಾನವನ ಮತ್ತು ಸಾರ್ವಜನಿಕ ಬಳಕೆಗೆ ಮೀಸಲಾಗಿದ್ದ ಭೂಮಿಯನ್ನು ಅವರು ಖರೀದಿಸಿದ್ದರು ಎಂದು ಹೇಳಲಾಗಿದೆ.

ಸರ್ವೆ ನಂಬರ್ 27/1, 28/4, 28/5 ಮತ್ತು 28/6 ರಲ್ಲಿರುವ ಸುಮಾರು 2.39 ಎಕರೆ ಭೂಮಿಯನ್ನು ಡಿ-ನೋಟಿಫೈ ಮಾಡಲಾಗಿದೆ. ಈ ಭೂಮಿಯ ಮೌಲ್ಯವು ₹ 200 ಕೋಟಿ ಎಂದು ಅಂದಾಜಿಸಲಾಗಿದೆ. ಪ್ರಭಾವಿ ಬಿಲ್ಡರ್ ಒಬ್ಬರ ಹಣದ ಪ್ರಭಾವಕ್ಕೆ ಒಳಗಾಗಿ ಕಾನೂನುಬಾಹಿರವಾಗಿ ಸರ್ಕಾರಿ ಸ್ವತ್ತನ್ನು ರಿ-ಡೂ (Re-Do) ಎಂಬ ಹೆಸರಿನಲ್ಲಿ De-Notification ಮಾಡಲಾಗಿದೆ ಎಂದು ಗಂಭೀರ ಆರೋಪ ಮಾಡಲಾಗಿದೆ. ಈ ಸ್ವತ್ತನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮಾಸ್ಟರ್ ಪ್ಲಾನ್​ ಪ್ರಕಾರ ಉದ್ಯಾನವನ ಮತ್ತು ಸಾರ್ವಜನಿಕ ಬಳಕೆಯ ಜಾಗ ಎಂದು ಮೀಸಲಿಟ್ಟಿತ್ತು. ನರ್ಸರಿಗಳಿದ್ದ ಸ್ವತ್ತುಗಳನ್ನು ಉದ್ಯಾನವನ ಮತ್ತು ಸಾರ್ವಜನಿಕರ ಬಳಕೆಗೆಂದು ಮೀಸಲಿಡಲಾಗಿತ್ತು. ಇದನ್ನು ಅಶೋಕ್ ಧಾರಿವಾಲ್ ಎಂಬ ಖಾಸಗಿ ಬಿಲ್ಡರ್ ಕಾನೂನುಬಾಹಿರವಾಗಿ ಕ್ರಯಕ್ಕೆ ಪಡೆದಿರುತ್ತಾರೆ ಎಂದು ದೂರಿನಲ್ಲಿ ಆರೋಪ ಮಾಡಲಾಗಿದೆ.

ನಿಯಮಗಳ ಪ್ರಕಾರ ಈ ಮೀಸಲು ಪ್ರದೇಶದಲ್ಲಿ ಯಾವುದೇ ನಿರ್ಮಾಣ ಕಾರ್ಯಗಳು ನಡೆಯುವುದು (No Development Area) ಕಾನೂನು ಬಾಹಿರ ಚಟುವಟಿಕೆ ಎನಿಸಿಕೊಳ್ಳುತ್ತದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಬಿಜೆಪಿ ವಿರುದ್ಧ ಪೇಸಿಎಂ ಪೋಸ್ಟರ್ ಅಭಿಯಾನ ಆರಂಭಿಸಿದ್ದ ಕಾಂಗ್ರೆಸ್ ಪಕ್ಷದ ಬಗ್ಗೆ ಬಿಜೆಪಿಯಲ್ಲಿ ಆಕ್ರೋಶ ಮೂಡಿತ್ತು. ಪಿಎಸ್​ಐ ನೇಮಕಾತಿ ಹಗರಣ, ಕೆಪಿಎಸ್​ಸಿ ಹಗರಣಗಳನ್ನು ಪದೇಪದೆ ಪ್ರಸ್ತಾಪಿಸುವ ಮೂಲಕ ಕಾಂಗ್ರೆಸ್ ಪಕ್ಷವು ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡುವ ಮೂಲಕ ಬಿಜೆಪಿ ತನ್ನ ಬತ್ತಳಿಕೆಯಲ್ಲಿದ್ದ ಹಳೆಯ ಅಸ್ತ್ರವನ್ನು ಮತ್ತೆ ಪ್ರಯೋಗಿಸಿದೆ.

Published On - 1:34 pm, Wed, 12 October 22

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​