AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಭೂಮಿ ಡಿನೋಟಿಫಿಕೇಶನ್: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತರಿಗೆ ದೂರು

ಮೀಸಲು ಪ್ರದೇಶದಲ್ಲಿ ಯಾವುದೇ ನಿರ್ಮಾಣ ಕಾರ್ಯಗಳು ನಡೆಯುವುದು ಕಾನೂನು ಬಾಹಿರ ಚಟುವಟಿಕೆ ಎನಿಸಿಕೊಳ್ಳುತ್ತದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸರ್ಕಾರಿ ಭೂಮಿ ಡಿನೋಟಿಫಿಕೇಶನ್: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತರಿಗೆ ದೂರು
ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ
TV9 Web
| Edited By: |

Updated on:Oct 12, 2022 | 1:34 PM

Share

ಬೆಂಗಳೂರು: ಸರ್ಕಾರಿ ಭೂಮಿಯನ್ನು ಡಿನೋಟಿಫಿಕೇಷನ್ ಮಾಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramiah) ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಶ್ಯಾಮ್​​​ ಭಟ್​ ವಿರುದ್ಧ ಲೋಕಾಯುಕ್ತರಿಗೆ  (Lokayukta) ಬಿಜೆಪಿ ದಕ್ಷಿಣ ಬೆಂಗಳೂರು ಘಟಕದ ಮುಖಂಡ ಎನ್.ಆರ್.ರಮೆಶ್ ದೂರು ನೀಡಿದ್ದಾರೆ. ಖಾಸಗಿ ಬಿಲ್ಡರ್​​​ ಅಶೋಕ್​ ಧಾರಿವಾಲ್ ಎಂಬುವವರಿಗೆ ಕಾನೂನುಬಾಹಿರವಾಗಿ ಭೂಮಿಯನ್ನು ಡಿ-ನೊಟಿಫೈ ಮಾಡಿಕೊಡಲಾಗಿದೆ. ಬೆಂಗಳೂರು ದಕ್ಷಿಣ ತಾಲ್ಲೂಕು ಕಸಬಾ ಹೋಬಳಿಯ ಸಿದ್ದಾಪುರದ ಉದ್ಯಾನವನ ಮತ್ತು ಸಾರ್ವಜನಿಕ ಬಳಕೆಗೆ ಮೀಸಲಾಗಿದ್ದ ಭೂಮಿಯನ್ನು ಅವರು ಖರೀದಿಸಿದ್ದರು ಎಂದು ಹೇಳಲಾಗಿದೆ.

ಸರ್ವೆ ನಂಬರ್ 27/1, 28/4, 28/5 ಮತ್ತು 28/6 ರಲ್ಲಿರುವ ಸುಮಾರು 2.39 ಎಕರೆ ಭೂಮಿಯನ್ನು ಡಿ-ನೋಟಿಫೈ ಮಾಡಲಾಗಿದೆ. ಈ ಭೂಮಿಯ ಮೌಲ್ಯವು ₹ 200 ಕೋಟಿ ಎಂದು ಅಂದಾಜಿಸಲಾಗಿದೆ. ಪ್ರಭಾವಿ ಬಿಲ್ಡರ್ ಒಬ್ಬರ ಹಣದ ಪ್ರಭಾವಕ್ಕೆ ಒಳಗಾಗಿ ಕಾನೂನುಬಾಹಿರವಾಗಿ ಸರ್ಕಾರಿ ಸ್ವತ್ತನ್ನು ರಿ-ಡೂ (Re-Do) ಎಂಬ ಹೆಸರಿನಲ್ಲಿ De-Notification ಮಾಡಲಾಗಿದೆ ಎಂದು ಗಂಭೀರ ಆರೋಪ ಮಾಡಲಾಗಿದೆ. ಈ ಸ್ವತ್ತನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮಾಸ್ಟರ್ ಪ್ಲಾನ್​ ಪ್ರಕಾರ ಉದ್ಯಾನವನ ಮತ್ತು ಸಾರ್ವಜನಿಕ ಬಳಕೆಯ ಜಾಗ ಎಂದು ಮೀಸಲಿಟ್ಟಿತ್ತು. ನರ್ಸರಿಗಳಿದ್ದ ಸ್ವತ್ತುಗಳನ್ನು ಉದ್ಯಾನವನ ಮತ್ತು ಸಾರ್ವಜನಿಕರ ಬಳಕೆಗೆಂದು ಮೀಸಲಿಡಲಾಗಿತ್ತು. ಇದನ್ನು ಅಶೋಕ್ ಧಾರಿವಾಲ್ ಎಂಬ ಖಾಸಗಿ ಬಿಲ್ಡರ್ ಕಾನೂನುಬಾಹಿರವಾಗಿ ಕ್ರಯಕ್ಕೆ ಪಡೆದಿರುತ್ತಾರೆ ಎಂದು ದೂರಿನಲ್ಲಿ ಆರೋಪ ಮಾಡಲಾಗಿದೆ.

ನಿಯಮಗಳ ಪ್ರಕಾರ ಈ ಮೀಸಲು ಪ್ರದೇಶದಲ್ಲಿ ಯಾವುದೇ ನಿರ್ಮಾಣ ಕಾರ್ಯಗಳು ನಡೆಯುವುದು (No Development Area) ಕಾನೂನು ಬಾಹಿರ ಚಟುವಟಿಕೆ ಎನಿಸಿಕೊಳ್ಳುತ್ತದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಬಿಜೆಪಿ ವಿರುದ್ಧ ಪೇಸಿಎಂ ಪೋಸ್ಟರ್ ಅಭಿಯಾನ ಆರಂಭಿಸಿದ್ದ ಕಾಂಗ್ರೆಸ್ ಪಕ್ಷದ ಬಗ್ಗೆ ಬಿಜೆಪಿಯಲ್ಲಿ ಆಕ್ರೋಶ ಮೂಡಿತ್ತು. ಪಿಎಸ್​ಐ ನೇಮಕಾತಿ ಹಗರಣ, ಕೆಪಿಎಸ್​ಸಿ ಹಗರಣಗಳನ್ನು ಪದೇಪದೆ ಪ್ರಸ್ತಾಪಿಸುವ ಮೂಲಕ ಕಾಂಗ್ರೆಸ್ ಪಕ್ಷವು ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡುವ ಮೂಲಕ ಬಿಜೆಪಿ ತನ್ನ ಬತ್ತಳಿಕೆಯಲ್ಲಿದ್ದ ಹಳೆಯ ಅಸ್ತ್ರವನ್ನು ಮತ್ತೆ ಪ್ರಯೋಗಿಸಿದೆ.

Published On - 1:34 pm, Wed, 12 October 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ