AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಭೂಮಿ ಡಿನೋಟಿಫಿಕೇಶನ್: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತರಿಗೆ ದೂರು

ಮೀಸಲು ಪ್ರದೇಶದಲ್ಲಿ ಯಾವುದೇ ನಿರ್ಮಾಣ ಕಾರ್ಯಗಳು ನಡೆಯುವುದು ಕಾನೂನು ಬಾಹಿರ ಚಟುವಟಿಕೆ ಎನಿಸಿಕೊಳ್ಳುತ್ತದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸರ್ಕಾರಿ ಭೂಮಿ ಡಿನೋಟಿಫಿಕೇಶನ್: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತರಿಗೆ ದೂರು
ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ
TV9 Web
| Edited By: |

Updated on:Oct 12, 2022 | 1:34 PM

Share

ಬೆಂಗಳೂರು: ಸರ್ಕಾರಿ ಭೂಮಿಯನ್ನು ಡಿನೋಟಿಫಿಕೇಷನ್ ಮಾಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramiah) ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಶ್ಯಾಮ್​​​ ಭಟ್​ ವಿರುದ್ಧ ಲೋಕಾಯುಕ್ತರಿಗೆ  (Lokayukta) ಬಿಜೆಪಿ ದಕ್ಷಿಣ ಬೆಂಗಳೂರು ಘಟಕದ ಮುಖಂಡ ಎನ್.ಆರ್.ರಮೆಶ್ ದೂರು ನೀಡಿದ್ದಾರೆ. ಖಾಸಗಿ ಬಿಲ್ಡರ್​​​ ಅಶೋಕ್​ ಧಾರಿವಾಲ್ ಎಂಬುವವರಿಗೆ ಕಾನೂನುಬಾಹಿರವಾಗಿ ಭೂಮಿಯನ್ನು ಡಿ-ನೊಟಿಫೈ ಮಾಡಿಕೊಡಲಾಗಿದೆ. ಬೆಂಗಳೂರು ದಕ್ಷಿಣ ತಾಲ್ಲೂಕು ಕಸಬಾ ಹೋಬಳಿಯ ಸಿದ್ದಾಪುರದ ಉದ್ಯಾನವನ ಮತ್ತು ಸಾರ್ವಜನಿಕ ಬಳಕೆಗೆ ಮೀಸಲಾಗಿದ್ದ ಭೂಮಿಯನ್ನು ಅವರು ಖರೀದಿಸಿದ್ದರು ಎಂದು ಹೇಳಲಾಗಿದೆ.

ಸರ್ವೆ ನಂಬರ್ 27/1, 28/4, 28/5 ಮತ್ತು 28/6 ರಲ್ಲಿರುವ ಸುಮಾರು 2.39 ಎಕರೆ ಭೂಮಿಯನ್ನು ಡಿ-ನೋಟಿಫೈ ಮಾಡಲಾಗಿದೆ. ಈ ಭೂಮಿಯ ಮೌಲ್ಯವು ₹ 200 ಕೋಟಿ ಎಂದು ಅಂದಾಜಿಸಲಾಗಿದೆ. ಪ್ರಭಾವಿ ಬಿಲ್ಡರ್ ಒಬ್ಬರ ಹಣದ ಪ್ರಭಾವಕ್ಕೆ ಒಳಗಾಗಿ ಕಾನೂನುಬಾಹಿರವಾಗಿ ಸರ್ಕಾರಿ ಸ್ವತ್ತನ್ನು ರಿ-ಡೂ (Re-Do) ಎಂಬ ಹೆಸರಿನಲ್ಲಿ De-Notification ಮಾಡಲಾಗಿದೆ ಎಂದು ಗಂಭೀರ ಆರೋಪ ಮಾಡಲಾಗಿದೆ. ಈ ಸ್ವತ್ತನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮಾಸ್ಟರ್ ಪ್ಲಾನ್​ ಪ್ರಕಾರ ಉದ್ಯಾನವನ ಮತ್ತು ಸಾರ್ವಜನಿಕ ಬಳಕೆಯ ಜಾಗ ಎಂದು ಮೀಸಲಿಟ್ಟಿತ್ತು. ನರ್ಸರಿಗಳಿದ್ದ ಸ್ವತ್ತುಗಳನ್ನು ಉದ್ಯಾನವನ ಮತ್ತು ಸಾರ್ವಜನಿಕರ ಬಳಕೆಗೆಂದು ಮೀಸಲಿಡಲಾಗಿತ್ತು. ಇದನ್ನು ಅಶೋಕ್ ಧಾರಿವಾಲ್ ಎಂಬ ಖಾಸಗಿ ಬಿಲ್ಡರ್ ಕಾನೂನುಬಾಹಿರವಾಗಿ ಕ್ರಯಕ್ಕೆ ಪಡೆದಿರುತ್ತಾರೆ ಎಂದು ದೂರಿನಲ್ಲಿ ಆರೋಪ ಮಾಡಲಾಗಿದೆ.

ನಿಯಮಗಳ ಪ್ರಕಾರ ಈ ಮೀಸಲು ಪ್ರದೇಶದಲ್ಲಿ ಯಾವುದೇ ನಿರ್ಮಾಣ ಕಾರ್ಯಗಳು ನಡೆಯುವುದು (No Development Area) ಕಾನೂನು ಬಾಹಿರ ಚಟುವಟಿಕೆ ಎನಿಸಿಕೊಳ್ಳುತ್ತದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಬಿಜೆಪಿ ವಿರುದ್ಧ ಪೇಸಿಎಂ ಪೋಸ್ಟರ್ ಅಭಿಯಾನ ಆರಂಭಿಸಿದ್ದ ಕಾಂಗ್ರೆಸ್ ಪಕ್ಷದ ಬಗ್ಗೆ ಬಿಜೆಪಿಯಲ್ಲಿ ಆಕ್ರೋಶ ಮೂಡಿತ್ತು. ಪಿಎಸ್​ಐ ನೇಮಕಾತಿ ಹಗರಣ, ಕೆಪಿಎಸ್​ಸಿ ಹಗರಣಗಳನ್ನು ಪದೇಪದೆ ಪ್ರಸ್ತಾಪಿಸುವ ಮೂಲಕ ಕಾಂಗ್ರೆಸ್ ಪಕ್ಷವು ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡುವ ಮೂಲಕ ಬಿಜೆಪಿ ತನ್ನ ಬತ್ತಳಿಕೆಯಲ್ಲಿದ್ದ ಹಳೆಯ ಅಸ್ತ್ರವನ್ನು ಮತ್ತೆ ಪ್ರಯೋಗಿಸಿದೆ.

Published On - 1:34 pm, Wed, 12 October 22

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ