AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಷತ್ ಚುನಾವಣೆ ಅಡ್ಡಮತದಾನದ ಎಫೆಕ್ಟ್: ಬಿಜೆಪಿ ವರದಿ ಬೆನ್ನಲ್ಲೇ ಮೈತ್ರಿಕೂಟದಲ್ಲಿ ಮುನಿಸು!

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡಮತ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಬಿಜೆಪಿಯಲ್ಲಿ ಆಂತರಿಕ ಬಿಕ್ಕಟ್ಟಿಗೆ ಕಾರಣವಾಗಿತ್ತು. ಆದರೀಗ ಬಿಜೆಪಿಯ ಸತ್ಯಶೋಧನಾ ವರದಿಯಲ್ಲಿ ಜೆಡಿಎಸ್ ಹೆಸರು ಉಲ್ಲೇಖವಾದ ಬಳಿಕ ಪಕ್ಷದ ಶಾಸಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದು, ಮೈತ್ರಿಯಲ್ಲಿ ಮುನಿಸಿಗೆ ಕಾರಣವಾಗಿದೆ. ವರದಿಯಲ್ಲಿ ಬಿಜೆಪಿಯಿಂದ 4 ಮತ್ತು ಜೆಡಿಎಸ್​ನಿಂದ 8 ಅಡ್ಡಮತದಾನಗಳಾಗಿವೆ ಎಂದು ಉಲ್ಲೇಖಿಸಲಾಗಿದ್ದು, ದಾಖಲೆಗಳಿಲ್ಲದೆ ಪಕ್ಷದ ಹೆಸರು ಪ್ರಸ್ತಾಪಿಸಿದ್ದಕ್ಕೆ ಜೆಡಿಎಸ್ ಪಾಳಯ ಬೇಸರ ವ್ಯಕ್ತಪಡಿಸಿದೆ.

ಪರಿಷತ್ ಚುನಾವಣೆ ಅಡ್ಡಮತದಾನದ ಎಫೆಕ್ಟ್: ಬಿಜೆಪಿ ವರದಿ ಬೆನ್ನಲ್ಲೇ ಮೈತ್ರಿಕೂಟದಲ್ಲಿ ಮುನಿಸು!
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ, ಮೈತ್ರಿಯಲ್ಲಿ ಮುನಿಸು
Sunil MH
| Edited By: |

Updated on: Jul 01, 2026 | 10:10 AM

Share

ಮುಖ್ಯಾಂಶಗಳು

  • ಬಿಜೆಪಿಯ ಸತ್ಯಶೋಧನಾ ವರದಿಯಿಂದಾಗಿ ರಾಜ್ಯ ರಾಜಕೀಯದ ಮೈತ್ರಿಕೂಟದಲ್ಲಿ ತೀವ್ರ ಮುನಿಸು ಉಂಟಾಗಿದೆ.
  • ದಾಖಲೆಗಳಿಲ್ಲದೆ ಅಡ್ಡಮತದಾನದ ಆರೋಪ ಹೊರಿಸಿದ್ದಕ್ಕೆ ಜೆಡಿಎಸ್ ಶಾಸಕರು ತೀವ್ರ ಆಕ್ರೋಶಗೊಂಡಿದ್ದಾರೆ.
  • ವಿವಾದಾತ್ಮಕ ಹೇಳಿಕೆಗಳಿಗೆ ತಕ್ಷಣ ಬ್ರೇಕ್ ಹಾಕುವಂತೆ ಜೆಡಿಎಸ್ ವರಿಷ್ಠರಿಗೆ ಮನವಿ ಮಾಡಲಾಗಿದೆ.

ಬೆಂಗಳೂರು, ಜುಲೈ 01: ವಿಧಾನ ಪರಿಷತ್ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗೆ ನಿರೀಕ್ಷಿತ ಮತಗಳು ಸಿಗದ ಹಿನ್ನೆಲೆಯಲ್ಲಿ ಅಡ್ಡ ಮತದಾನದ (Cross voting) ಆರೋಪ ಕೇಳಿಬಂದಿತ್ತು. ಈ ಕಾರಣಕ್ಕೆ ಎಮ್​ಎಲ್​ಸಿ ಸಿಟಿ ರವಿ ನೇತೃತ್ವದ ಸಮಿತಿ ಜೂನ್ 27ರಂದು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಆಂತರಿಕ ವರದಿ ನೀಡಿದ್ದು, ಎನ್‌ಡಿಎ ಮೈತ್ರಿಗೆ ಸೇರಿದ್ದ (ಬಿಜೆಪಿ, ಜೆಡಿಸ್) 12 ಮತಗಳಲ್ಲಿ ಒಂದು ಅಸಿಂಧುವಾಗಿದೆ ಎಂದು ಉಲ್ಲೇಖಿಸಲಾಗಿತ್ತು. ಈ ವರದಿಗೂ ಮುನ್ನ ಬಿಜೆಪಿಯಲ್ಲಿದ್ದ ಆಂತರಿಕ ಅಸಮಾಧಾನ ಈಗ ಜೆಡಿಎಸ್ ಹೆಸರಿನ ಉಲ್ಲೇಖದೊಂದಿಗೆ ಮೈತ್ರಿಕೂಟದಲ್ಲಿ ದೊಡ್ಡ ಮಟ್ಟದ ಮುನಿಸಿಗೆ ಕಿಡಿ ಹೊತ್ತಿಸಿದೆ.

ಬಿಜೆಪಿ ಸಲ್ಲಿಸಿರುವ ಸತ್ಯಶೋಧನಾ ವರದಿಯಲ್ಲೇನಿದೆ?

ವಿಧಾನ ಪರಿಷತ್ ಚುನಾವಣೆಯ ಸೋಲಿನ ಪರಾಮರ್ಶೆ ನಡೆಸಲು ಬಿಜೆಪಿ ಹೈಕಮಾಂಡ್ ರಚಿಸಿದ್ದ ಸತ್ಯಶೋಧನಾ ಸಮಿತಿಯ ವರದಿ ಈಗ ಮೈತ್ರಿ ಪಾಳಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ವರದಿಯಲ್ಲಿ ಬಿಜೆಪಿಯಿಂದ 3 ಅಡ್ಡಮತ ಹಾಗೂ 1 ಅಸಿಂಧು ಮತ ಚಲಾವಣೆಯಾಗಿದೆ. ಜೊತೆಗೆ ಮೈತ್ರಿ ಪಕ್ಷವಾದ ಜೆಡಿಎಸ್‌ನಿಂದ ಬರೋಬ್ಬರಿ 8 ಶಾಸಕರು ಅಡ್ಡ ಮತದಾನ ಮಾಡಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.  ಬಿಜೆಪಿ ನಾಯಕರ ಈ ಹೇಳಿಕೆಗಳು ಜೆಡಿಎಸ್ ಪಾಳಯವನ್ನು ಕೆರಳಿಸಿದೆ. ಯಾವುದೇ ಬಲವಾದ ದಾಖಲೆಗಳಿಲ್ಲದೆ ಜೆಡಿಎಸ್ ಶಾಸಕರ ಹೆಸರನ್ನು ಈ ವಿವಾದಕ್ಕೆ ಎಳೆದು ತಂದಿರುವುದಕ್ಕೆ ಪಕ್ಷದ ಶಾಸಕರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಹೇಳಿಕೆಗೆ ಬ್ರೇಕ್ ಹಾಕಲು ಮನವಿ

ಬಿಜೆಪಿ ನಾಯಕರ ನಿರಂತರ ಆರೋಪಗಳಿಂದಾಗಿ ಜೆಡಿಎಸ್ ಶಾಸಕರ ಮೇಲೆ ಅನಗತ್ಯವಾಗಿ ಅನುಮಾನದ ನೆರಳು ಬೀಳುವಂತಾಗಿದೆ ಎಂದು ಶಾಸಕರು ಅಸಮಾಧಾನಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಜೆಡಿಎಸ್‌ನ ಪ್ರಮುಖ ಶಾಸಕರು ತಮ್ಮ ಪಕ್ಷದ ವರಿಷ್ಠರಾದ ಎಚ್.ಡಿ. ದೇವೇಗೌಡ ಹಾಗೂ ಎಚ್.ಡಿ. ಕುಮಾರಸ್ವಾಮಿ ಅವರ ಬಳಿ ದೂರು ನೀಡಿದ್ದಾರೆ. ಮೈತ್ರಿ ಧರ್ಮಕ್ಕೆ ಧಕ್ಕೆ ತರುತ್ತಿರುವ ಬಿಜೆಪಿ ನಾಯಕರ ಹೇಳಿಕೆಗಳಿಗೆ ತಕ್ಷಣವೇ ಬ್ರೇಕ್ ಹಾಕುವಂತೆ ವರಿಷ್ಠರ ಮೇಲೆ ಒತ್ತಡ ಹೇರಲಾಗಿದೆ.

ಇದನ್ನೂ ಓದಿ 12 ಶಾಸಕರು ಅಡ್ಡಮತದಾನ, ಕೋಡ್ ವರ್ಡ್ ಪಾಲಿಸದೇ ಎಡವಟ್ಟು: ಸತ್ಯಶೋಧನಾ ಸಮಿತಿ ವರದಿಯ ಸ್ಫೋಟಕ ಅಂಶ ಬಹಿರಂಗ

ಸಾರ್ವಜನಿಕವಾಗಿ ಮತ್ತು ಮಾಧ್ಯಮಗಳಲ್ಲಿ ಅಡ್ಡ ಮತದಾನದ ಕುರಿತು ಅನಗತ್ಯ ಚರ್ಚೆಗಳನ್ನು ನಿಲ್ಲಿಸಲು ಉಭಯ ಪಕ್ಷಗಳ ಹಿರಿಯ ನಾಯಕರು ಸೂಚನೆ ನೀಡಬೇಕು ಎಂದು ಜೆಡಿಎಸ್ ಮನವಿ ಮಾಡಿದೆ. ಮೇಲ್ನೋಟಕ್ಕೆ ಮೈತ್ರಿಕೂಟದಲ್ಲಿ ಎಲ್ಲವೂ ಸರಿಯಾಗಿಯೇ ಇದೆಯೆಂಬಂತೆ ಕಂಡರೂ, ಬಿಜೆಪಿ ವರದಿಯ ಬಳಿಕ ಕಿಚ್ಚು ಹೆಚ್ಚಾಗಿರುವುದಂತೂ ಸುಳ್ಳಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರಿಗೆ ಸ್ವಲ್ಪ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಸ್ವಲ್ಪ ಖರ್ಚು ಹೆಚ್ಚಾಗುವ ಸಾಧ್ಯತೆ
ಮುಂಬೈನಲ್ಲಿ ವರುಣನ ಆರ್ಭಟಕ್ಕೆ ಕೆರೆಯಂತಾದ ರಸ್ತೆಗಳು
ಮುಂಬೈನಲ್ಲಿ ವರುಣನ ಆರ್ಭಟಕ್ಕೆ ಕೆರೆಯಂತಾದ ರಸ್ತೆಗಳು
ಮೆಟ್ರೋ ನಿಲ್ದಾಣಗಳಲ್ಲಿ ಪ್ರಥಮ ಚಿಕಿತ್ಸಾ ಕೇಂದ್ರ ತೆರೆಯಲು ಆದೇಶ
ಮೆಟ್ರೋ ನಿಲ್ದಾಣಗಳಲ್ಲಿ ಪ್ರಥಮ ಚಿಕಿತ್ಸಾ ಕೇಂದ್ರ ತೆರೆಯಲು ಆದೇಶ
ಗಾಯಕಿಯಾದ ಪತ್ನಿ ಶಿಲ್ಪಾ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಗಣೇಶ್ ಕಾಮಿಡಿ ಮಾತು
ಗಾಯಕಿಯಾದ ಪತ್ನಿ ಶಿಲ್ಪಾ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಗಣೇಶ್ ಕಾಮಿಡಿ ಮಾತು
ಭೂ ಪರಿಹಾರ ನೀಡದಿದ್ದಕ್ಕೆ ಡಿಸಿ ಆವರಣದಲ್ಲಿರುವ ಸರ್ಕಾರಿ ಕಚೇರಿಯೇ ಜಪ್ತಿ
ಭೂ ಪರಿಹಾರ ನೀಡದಿದ್ದಕ್ಕೆ ಡಿಸಿ ಆವರಣದಲ್ಲಿರುವ ಸರ್ಕಾರಿ ಕಚೇರಿಯೇ ಜಪ್ತಿ
ಬಿಜೆಪಿಯಲ್ಲಿ ಬಿರುಗಾಳಿ ಎಬ್ಬಿಸಿದ ಶಾಸಕರ ಅಡ್ಡಮತದಾನ
ಬಿಜೆಪಿಯಲ್ಲಿ ಬಿರುಗಾಳಿ ಎಬ್ಬಿಸಿದ ಶಾಸಕರ ಅಡ್ಡಮತದಾನ
ಕನ್ನಡದವರು ಬೆಳೆಸಲ್ಲ ಎಂದಿದ್ದ ಸೋನು, ಈಗ ಮತ್ತೆ ಕನ್ನಡ ಚಿತ್ರರಂಗಕ್ಕೆ
ಕನ್ನಡದವರು ಬೆಳೆಸಲ್ಲ ಎಂದಿದ್ದ ಸೋನು, ಈಗ ಮತ್ತೆ ಕನ್ನಡ ಚಿತ್ರರಂಗಕ್ಕೆ
ಸಿದ್ದರಾಮಯ್ಯರನ್ನು ಕಡೆಗಣಿಸಿದ್ರೆ ದೊಡ್ಡ ಬ್ಲಂಡರ್: ರಾಜಣ್ಣ ಎಚ್ಚರಿಕೆ
ಸಿದ್ದರಾಮಯ್ಯರನ್ನು ಕಡೆಗಣಿಸಿದ್ರೆ ದೊಡ್ಡ ಬ್ಲಂಡರ್: ರಾಜಣ್ಣ ಎಚ್ಚರಿಕೆ
ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಶಾಕ್?
ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಶಾಕ್?
ವಿದ್ಯುತ್ ಖಾಸಗೀಕರಣಗೊಳಿಸುವ ಬಗ್ಗೆ ಇಂಧನ ಸಚಿವ ಕೊಟ್ಟ ಸ್ಙಷ್ಟನೆ ಹೀಗಿದೆ
ವಿದ್ಯುತ್ ಖಾಸಗೀಕರಣಗೊಳಿಸುವ ಬಗ್ಗೆ ಇಂಧನ ಸಚಿವ ಕೊಟ್ಟ ಸ್ಙಷ್ಟನೆ ಹೀಗಿದೆ