AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರಗೀತೆಗೆ ಅಪಮಾನಿಸಿದ ಆರೋಪ: ಸಾಹಿತಿ ಬರಗೂರು ರಾಮಚಂದ್ರಪ್ಪ ವಿರುದ್ಧ ಬೆಂಗಳೂರು ಕಮಿಷನರ್​ಗೆ ದೂರು ನೀಡಿದ ಬಿಜೆಪಿ

ರಾಷ್ಟ್ರಗೀತೆಗೆ ಅಪಮಾನ ಮಾಡಿದ್ದಾರೆಂದು ಆರೋಪಿಸಿ ಸಾಹಿತಿ ಬರಗೂರು ರಾಮಚಂದ್ರಪ್ಪ ವಿರುದ್ಧ ಬೆಂಗಳೂರು ನಗರ ಕಮಿಷನರ್​ ಪ್ರತಾಪ್ ರೆಡ್ಡಿ ಅವರಿಗೆ ಎಂಎಲ್​ಸಿಗಳಾದ ರವಿಕುಮಾರ್ , ಛಲವಾದಿ ನಾರಾಯಣಸ್ವಾಮಿ ದೂರು ನೀಡಿದ್ದಾರೆ.

ರಾಷ್ಟ್ರಗೀತೆಗೆ ಅಪಮಾನಿಸಿದ ಆರೋಪ: ಸಾಹಿತಿ ಬರಗೂರು ರಾಮಚಂದ್ರಪ್ಪ ವಿರುದ್ಧ ಬೆಂಗಳೂರು ಕಮಿಷನರ್​ಗೆ ದೂರು ನೀಡಿದ ಬಿಜೆಪಿ
ಸಾಹಿತಿ ಬರಗೂರು ರಾಮಚಂದ್ರಪ್ಪ
TV9 Web
| Edited By: ವಿವೇಕ ಬಿರಾದಾರ|

Updated on:Aug 29, 2022 | 5:27 PM

Share

ಬೆಂಗಳೂರು: ರಾಷ್ಟ್ರಗೀತೆಗೆ (National Anthem) ಅಪಮಾನ ಮಾಡಿದ್ದಾರೆಂದು ಆರೋಪಿಸಿ ಸಾಹಿತಿ ಬರಗೂರು ರಾಮಚಂದ್ರಪ್ಪ (Baraguru Ramachandrappa) ವಿರುದ್ಧ ಬೆಂಗಳೂರು (Bengaluru) ನಗರ ಕಮಿಷನರ್​ ಪ್ರತಾಪ್ ರೆಡ್ಡಿ ಅವರಿಗೆ ಎಂಎಲ್​ಸಿಗಳಾದ ರವಿಕುಮಾರ್ (Ravikumar), ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ದೂರು ನೀಡಿದ್ದಾರೆ.

ಭರತನಗರಿ ಎಂಬ ಕಾದಂಬರಿಯಲ್ಲಿ ರಾಷ್ಟ್ರಗೀತೆಗೆ ಅಪಮಾನ ಮಾಡಿದ್ದಾರೆಂದು ಆರೋಪಿಸಿ ದೂರು ನೀಡಿದ್ದಾರೆ. ಈ ಕುರಿತು ಬಿಜೆಪಿ ವಿಧಾನ​ ಪರಿಷತ್​ ಸದಸ್ಯ ರವಿಕುಮಾರ್ ಮಾತನಾಡಿ 2016ರಲ್ಲಿ ವಿಪಕ್ಷನಾಯಕ ಸಿದ್ಧರಾಮಯ್ಯ ಸಿಎಂ ಆಗಿದ್ದಾಗ ಬರಗೂರು ರಾಮಚಂದ್ರಪ್ಪ ಅಕಾಡೆಮಿ ಅಧ್ಯಕ್ಷರಾಗಿದ್ದರು.

ಆಗ ರಾಮಚಂದ್ರಪ್ಪ ಭರತನಗರಿ ಎಂಬ ಕಾದಂಬರಿ ಬರೆದಿದ್ದಾರೆ. ಅದರಲ್ಲಿ ರಾಷ್ಟ್ರಗೀತೆ ಬಗ್ಗೆ ಅತ್ಯಂತ ಅವಹೇಳನವಾಗಿ ಬರೆದಿದ್ದಾರೆ. ಭಾರತವನ್ನ ಜಡ ಅಂದಿದ್ದಾರೆ. ಅತ್ಯಂತ ಕೆಟ್ಟ ಶಬ್ಧಗಳನ್ನು ಬರೆದಿದ್ದಾರೆ. ರಾಷ್ಟ್ರಗೀತೆ, ರಾಷ್ಟ್ರಧ್ವಜದ ಬಗ್ಗೆ ಅಪಮಾನವಾದಾಗ ಸಹಿಸಲು ಸಾಧ್ಯವಿಲ್ಲ. ಇದು ಅತ್ಯಂತ ಅವಹೇಳನ ಹಾಗೂ ತಲೆ ತಗ್ಗಿಸುವಂತ ವಿಚಾರ ಎಂದರು.

ಹೇಳಿಕೇಳಿ ಸಿದ್ದರಾಮಯ್ಯನವರು ಅತಿಸೂಕ್ಷ್ಮ. ಅಂದು ಯಾಕೆ ಕ್ರಮ ಕೈಗೊಂಡಿಲ್ಲ, ಅಥವಾ ಹೋಗಲಿ ಬಿಡಿ ಅಂತಾ ಸುಮ್ಮನಾದರಾ? ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರು ನೀಡಿದ್ದೇವೆ. ಬರಗೂರು ರಾಮಚಂದ್ರಪ್ಪನವರ ಕಾದಂಬರಿ ಬ್ಯಾನ್ ಮಾಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:27 pm, Mon, 29 August 22

Follow Us
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು