AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರಗೀತೆಗೆ ಅಪಮಾನಿಸಿದ ಆರೋಪ: ಸಾಹಿತಿ ಬರಗೂರು ರಾಮಚಂದ್ರಪ್ಪ ವಿರುದ್ಧ ಬೆಂಗಳೂರು ಕಮಿಷನರ್​ಗೆ ದೂರು ನೀಡಿದ ಬಿಜೆಪಿ

ರಾಷ್ಟ್ರಗೀತೆಗೆ ಅಪಮಾನ ಮಾಡಿದ್ದಾರೆಂದು ಆರೋಪಿಸಿ ಸಾಹಿತಿ ಬರಗೂರು ರಾಮಚಂದ್ರಪ್ಪ ವಿರುದ್ಧ ಬೆಂಗಳೂರು ನಗರ ಕಮಿಷನರ್​ ಪ್ರತಾಪ್ ರೆಡ್ಡಿ ಅವರಿಗೆ ಎಂಎಲ್​ಸಿಗಳಾದ ರವಿಕುಮಾರ್ , ಛಲವಾದಿ ನಾರಾಯಣಸ್ವಾಮಿ ದೂರು ನೀಡಿದ್ದಾರೆ.

ರಾಷ್ಟ್ರಗೀತೆಗೆ ಅಪಮಾನಿಸಿದ ಆರೋಪ: ಸಾಹಿತಿ ಬರಗೂರು ರಾಮಚಂದ್ರಪ್ಪ ವಿರುದ್ಧ ಬೆಂಗಳೂರು ಕಮಿಷನರ್​ಗೆ ದೂರು ನೀಡಿದ ಬಿಜೆಪಿ
ಸಾಹಿತಿ ಬರಗೂರು ರಾಮಚಂದ್ರಪ್ಪ
TV9 Web
| Edited By: |

Updated on:Aug 29, 2022 | 5:27 PM

Share

ಬೆಂಗಳೂರು: ರಾಷ್ಟ್ರಗೀತೆಗೆ (National Anthem) ಅಪಮಾನ ಮಾಡಿದ್ದಾರೆಂದು ಆರೋಪಿಸಿ ಸಾಹಿತಿ ಬರಗೂರು ರಾಮಚಂದ್ರಪ್ಪ (Baraguru Ramachandrappa) ವಿರುದ್ಧ ಬೆಂಗಳೂರು (Bengaluru) ನಗರ ಕಮಿಷನರ್​ ಪ್ರತಾಪ್ ರೆಡ್ಡಿ ಅವರಿಗೆ ಎಂಎಲ್​ಸಿಗಳಾದ ರವಿಕುಮಾರ್ (Ravikumar), ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ದೂರು ನೀಡಿದ್ದಾರೆ.

ಭರತನಗರಿ ಎಂಬ ಕಾದಂಬರಿಯಲ್ಲಿ ರಾಷ್ಟ್ರಗೀತೆಗೆ ಅಪಮಾನ ಮಾಡಿದ್ದಾರೆಂದು ಆರೋಪಿಸಿ ದೂರು ನೀಡಿದ್ದಾರೆ. ಈ ಕುರಿತು ಬಿಜೆಪಿ ವಿಧಾನ​ ಪರಿಷತ್​ ಸದಸ್ಯ ರವಿಕುಮಾರ್ ಮಾತನಾಡಿ 2016ರಲ್ಲಿ ವಿಪಕ್ಷನಾಯಕ ಸಿದ್ಧರಾಮಯ್ಯ ಸಿಎಂ ಆಗಿದ್ದಾಗ ಬರಗೂರು ರಾಮಚಂದ್ರಪ್ಪ ಅಕಾಡೆಮಿ ಅಧ್ಯಕ್ಷರಾಗಿದ್ದರು.

ಆಗ ರಾಮಚಂದ್ರಪ್ಪ ಭರತನಗರಿ ಎಂಬ ಕಾದಂಬರಿ ಬರೆದಿದ್ದಾರೆ. ಅದರಲ್ಲಿ ರಾಷ್ಟ್ರಗೀತೆ ಬಗ್ಗೆ ಅತ್ಯಂತ ಅವಹೇಳನವಾಗಿ ಬರೆದಿದ್ದಾರೆ. ಭಾರತವನ್ನ ಜಡ ಅಂದಿದ್ದಾರೆ. ಅತ್ಯಂತ ಕೆಟ್ಟ ಶಬ್ಧಗಳನ್ನು ಬರೆದಿದ್ದಾರೆ. ರಾಷ್ಟ್ರಗೀತೆ, ರಾಷ್ಟ್ರಧ್ವಜದ ಬಗ್ಗೆ ಅಪಮಾನವಾದಾಗ ಸಹಿಸಲು ಸಾಧ್ಯವಿಲ್ಲ. ಇದು ಅತ್ಯಂತ ಅವಹೇಳನ ಹಾಗೂ ತಲೆ ತಗ್ಗಿಸುವಂತ ವಿಚಾರ ಎಂದರು.

ಹೇಳಿಕೇಳಿ ಸಿದ್ದರಾಮಯ್ಯನವರು ಅತಿಸೂಕ್ಷ್ಮ. ಅಂದು ಯಾಕೆ ಕ್ರಮ ಕೈಗೊಂಡಿಲ್ಲ, ಅಥವಾ ಹೋಗಲಿ ಬಿಡಿ ಅಂತಾ ಸುಮ್ಮನಾದರಾ? ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರು ನೀಡಿದ್ದೇವೆ. ಬರಗೂರು ರಾಮಚಂದ್ರಪ್ಪನವರ ಕಾದಂಬರಿ ಬ್ಯಾನ್ ಮಾಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:27 pm, Mon, 29 August 22

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​