AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರಗೀತೆಗೆ ಅಪಮಾನಿಸಿದ ಆರೋಪ: ಸಾಹಿತಿ ಬರಗೂರು ರಾಮಚಂದ್ರಪ್ಪ ವಿರುದ್ಧ ಬೆಂಗಳೂರು ಕಮಿಷನರ್​ಗೆ ದೂರು ನೀಡಿದ ಬಿಜೆಪಿ

ರಾಷ್ಟ್ರಗೀತೆಗೆ ಅಪಮಾನ ಮಾಡಿದ್ದಾರೆಂದು ಆರೋಪಿಸಿ ಸಾಹಿತಿ ಬರಗೂರು ರಾಮಚಂದ್ರಪ್ಪ ವಿರುದ್ಧ ಬೆಂಗಳೂರು ನಗರ ಕಮಿಷನರ್​ ಪ್ರತಾಪ್ ರೆಡ್ಡಿ ಅವರಿಗೆ ಎಂಎಲ್​ಸಿಗಳಾದ ರವಿಕುಮಾರ್ , ಛಲವಾದಿ ನಾರಾಯಣಸ್ವಾಮಿ ದೂರು ನೀಡಿದ್ದಾರೆ.

ರಾಷ್ಟ್ರಗೀತೆಗೆ ಅಪಮಾನಿಸಿದ ಆರೋಪ: ಸಾಹಿತಿ ಬರಗೂರು ರಾಮಚಂದ್ರಪ್ಪ ವಿರುದ್ಧ ಬೆಂಗಳೂರು ಕಮಿಷನರ್​ಗೆ ದೂರು ನೀಡಿದ ಬಿಜೆಪಿ
ಸಾಹಿತಿ ಬರಗೂರು ರಾಮಚಂದ್ರಪ್ಪ
Follow us
TV9 Web
| Updated By: ವಿವೇಕ ಬಿರಾದಾರ

Updated on:Aug 29, 2022 | 5:27 PM

ಬೆಂಗಳೂರು: ರಾಷ್ಟ್ರಗೀತೆಗೆ (National Anthem) ಅಪಮಾನ ಮಾಡಿದ್ದಾರೆಂದು ಆರೋಪಿಸಿ ಸಾಹಿತಿ ಬರಗೂರು ರಾಮಚಂದ್ರಪ್ಪ (Baraguru Ramachandrappa) ವಿರುದ್ಧ ಬೆಂಗಳೂರು (Bengaluru) ನಗರ ಕಮಿಷನರ್​ ಪ್ರತಾಪ್ ರೆಡ್ಡಿ ಅವರಿಗೆ ಎಂಎಲ್​ಸಿಗಳಾದ ರವಿಕುಮಾರ್ (Ravikumar), ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ದೂರು ನೀಡಿದ್ದಾರೆ.

ಭರತನಗರಿ ಎಂಬ ಕಾದಂಬರಿಯಲ್ಲಿ ರಾಷ್ಟ್ರಗೀತೆಗೆ ಅಪಮಾನ ಮಾಡಿದ್ದಾರೆಂದು ಆರೋಪಿಸಿ ದೂರು ನೀಡಿದ್ದಾರೆ. ಈ ಕುರಿತು ಬಿಜೆಪಿ ವಿಧಾನ​ ಪರಿಷತ್​ ಸದಸ್ಯ ರವಿಕುಮಾರ್ ಮಾತನಾಡಿ 2016ರಲ್ಲಿ ವಿಪಕ್ಷನಾಯಕ ಸಿದ್ಧರಾಮಯ್ಯ ಸಿಎಂ ಆಗಿದ್ದಾಗ ಬರಗೂರು ರಾಮಚಂದ್ರಪ್ಪ ಅಕಾಡೆಮಿ ಅಧ್ಯಕ್ಷರಾಗಿದ್ದರು.

ಆಗ ರಾಮಚಂದ್ರಪ್ಪ ಭರತನಗರಿ ಎಂಬ ಕಾದಂಬರಿ ಬರೆದಿದ್ದಾರೆ. ಅದರಲ್ಲಿ ರಾಷ್ಟ್ರಗೀತೆ ಬಗ್ಗೆ ಅತ್ಯಂತ ಅವಹೇಳನವಾಗಿ ಬರೆದಿದ್ದಾರೆ. ಭಾರತವನ್ನ ಜಡ ಅಂದಿದ್ದಾರೆ. ಅತ್ಯಂತ ಕೆಟ್ಟ ಶಬ್ಧಗಳನ್ನು ಬರೆದಿದ್ದಾರೆ. ರಾಷ್ಟ್ರಗೀತೆ, ರಾಷ್ಟ್ರಧ್ವಜದ ಬಗ್ಗೆ ಅಪಮಾನವಾದಾಗ ಸಹಿಸಲು ಸಾಧ್ಯವಿಲ್ಲ. ಇದು ಅತ್ಯಂತ ಅವಹೇಳನ ಹಾಗೂ ತಲೆ ತಗ್ಗಿಸುವಂತ ವಿಚಾರ ಎಂದರು.

ಹೇಳಿಕೇಳಿ ಸಿದ್ದರಾಮಯ್ಯನವರು ಅತಿಸೂಕ್ಷ್ಮ. ಅಂದು ಯಾಕೆ ಕ್ರಮ ಕೈಗೊಂಡಿಲ್ಲ, ಅಥವಾ ಹೋಗಲಿ ಬಿಡಿ ಅಂತಾ ಸುಮ್ಮನಾದರಾ? ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರು ನೀಡಿದ್ದೇವೆ. ಬರಗೂರು ರಾಮಚಂದ್ರಪ್ಪನವರ ಕಾದಂಬರಿ ಬ್ಯಾನ್ ಮಾಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:27 pm, Mon, 29 August 22

ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ಪ್ರಲ್ಹಾದ್ ಜೋಶಿ ಸುದ್ದಿಗೋಷ್ಠಿ ಲೈವ್
ಪ್ರಲ್ಹಾದ್ ಜೋಶಿ ಸುದ್ದಿಗೋಷ್ಠಿ ಲೈವ್
‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು
‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು