AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತದಾರರ ಮಾಹಿತಿ ಸೋರಿಕೆ ಪ್ರಕರಣ: ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಬಿಜೆಪಿ

ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಹಾಗೂ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ವಿವೇಕ್ ರೆಡ್ಡಿ ಮುಖ್ಯ ಚುನಾವಣಾಧಿಕಾರಿಯನ್ನು ಭೇಟಿ ಮಾಡಿ ದೂರು ಪತ್ರ ನೀಡಿದರು.

ಮತದಾರರ ಮಾಹಿತಿ ಸೋರಿಕೆ ಪ್ರಕರಣ: ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಬಿಜೆಪಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Nov 23, 2022 | 12:39 PM

Share

ಬೆಂಗಳೂರು: ನಗರದಲ್ಲಿ ನಡೆದಿರುವ ಮತದಾರರ ಮಾಹಿತಿ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ. ನಗರದ ಶೇಷಾದ್ರಿ ರಸ್ತೆಯಲ್ಲಿರುವ ಶೇಷಾದ್ರಿ ರಸ್ತೆಯಲ್ಲಿರುವ ರಾಜ್ಯ ಚುನಾವಣಾ ಆಯೋಗದ ಕಚೇರಿಗೆ ಭೇಟಿ ನೀಡಿದ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಹಾಗೂ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ವಿವೇಕ್ ರೆಡ್ಡಿ ಮುಖ್ಯ ಚುನಾವಣಾಧಿಕಾರಿಯನ್ನು ಭೇಟಿ ಮಾಡಿ ದೂರು ಪತ್ರ ನೀಡಿದರು. ‘ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು. ಬಿಜೆಪಿಯು ನಿನ್ನೆಯಷ್ಟೇ (ನ 22) ಕೇಂದ್ರ ಚುನಾವಣಾ ಆಯೋಗಕ್ಕೆ ಫ್ಯಾಕ್ಸ್ ಮೂಲಕ ದೂರು ಸಲ್ಲಿಸಿತ್ತು.

ಹುಬ್ಬಳ್ಳಿಯಲ್ಲಿಯೂ ಮತದಾರರ ಮಾಹಿತಿ ಸಂಗ್ರಹ

ಬೆಂಗಳೂರಿನಲ್ಲಿ ಚಿಲುಮೆ ಸಂಸ್ಥೆ ನಡೆಸಿರುವ ಅಕ್ರಮದಂಥದ್ದೇ ಮಾದರಿಯ ಅವ್ಯವಹಾರ ಹುಬ್ಬಳ್ಳಿಯಲ್ಲಿಯೂ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ. ಬೆಂಗಳೂರು ಮೂಲದ ಐಐಎಂಟಿ ಸಂಸ್ಥೆಯು ಧಾರವಾಡ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ 6 ತಿಂಗಳ ಹಿಂದೆಯೇ ಮಾಹಿತಿ ಸಂಗ್ರಹಿಸಲಾಗಿದೆ. ಈ ಕುರಿತು ಕಾಂಗ್ರೆಸ್ ಮಹಾನಗರ ಪಾಲಿಕೆ ಸದಸ್ಯರ ಕ್ಷೇತ್ರಗಳ ವ್ಯಾಪ್ತಿಯಲ್ಲಿಯೇ ಮತದಾರರ ಮಾಹಿತಿ ಸಂಗ್ರಹ ಮಾಡಲಾಗಿದೆ. ‘ಸ್ಮಾರ್ಟ್​ ಸಿಟಿ’ ವಿಭಾಗದಿಂದ ಸರ್ವೆಗೆ ಬಂದಿರುವುದಾಗಿ ತಂಡದ ಸದಸ್ಯರು ಹೇಳಿಕೊಂಡಿದ್ದರು. ಗಾರ್ಡನ್​ ರೀಸರ್ಚ್​​ ಸೊಸೈಟಿ ಕೇಳಿದ್ದ ಪಾಲಿಕೆ ಅನುಮತಿ ಪತ್ರಕ್ಕೆ ಆಯುಕ್ತರು ಕೇವಲ ಸ್ವೀಕೃತಿ ಪತ್ರ ಮಾತ್ರ ನೀಡಿದ್ದರು. ಅನುಮತಿ ಪತ್ರ ನೀಡಿರಲಿಲ್ಲ ಎಂದು ಸದಸ್ಯರು ವಿವರಿಸಿದ್ದಾರೆ.

ಕನಕಗಿರಿ ಕ್ಷೇತ್ರದಲ್ಲಿ ಮತದಾರರ ಸಂಖ್ಯೆ ಕುಸಿತ

ಕನಕಗಿರಿ ಕ್ಷೇತ್ರದಲ್ಲಿಯೂ ಸುಮಾರು 9 ಸಾವಿರ ಮತದಾರರ ಸಂಖ್ಯೆ ಕಡಿಮೆ ಆಗಿದೆ. ​ಬಿಜೆಪಿಯವರು ಸೋಲಿನ ಭೀತಿಯಿಂದ ಈ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ನಾವು ನಮ್ಮ ಕಾರ್ಯಕರ್ತರ ಮೂಲಕ ಬೂತ್ ಮಟ್ಟದಲ್ಲಿ ಮತದಾರರ ಪಟ್ಟಿಯನ್ನು ಪರಿಶೀಲಿಸುತ್ತಿದ್ದೇವೆ. ಎಸ್​ಸಿ, ಎಸ್​ಟಿ, ಒಬಿಸಿ ಮತಗಳನ್ನು ಟಾರ್ಗೆಟ್ ಮಾಡಿ ಬಿಜೆಪಿಯವರು ಆಟ ಆಡುತ್ತಿದ್ದಾರೆ. ಮತದಾರರ ಹಕ್ಕು ಕಸಿದುಕೊಳ್ಳುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಅವರು ತಿಳಿಸಿದರು.

ದಾವಣಗೆರೆಯಲ್ಲಿಯೂ ಅವ್ಯವಹಾರ

ಬೆಂಗಳೂರಿನಲ್ಲಿ ನಡೆದ ಅವ್ಯವಹಾರದ ಬಗ್ಗೆ ತಿಳಿದ ನಂತರ ದಾವಣಗೆರೆಯ ಮತದಾರರು ಪಟ್ಟಿಯಲ್ಲಿ ತಮ್ಮ ಹೆಸರು ಇರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ 1,718 ಸಾವಿರಾರು ಮಂದಿಯ ಹೆಸರು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಯಾವುದೇ ವ್ಯಕ್ತಿಯು ಮತದಾರರ ಪಟ್ಟಿಯಿಂದ ಹೆಸರು ತೆಗೆಸಲು ಫಾರ್ಮ್ ನಂಬರ್ 7 ಭರ್ತಿ ಮಾಡಬೇಕು. ಆದರೆ ಈ ಪ್ರಕ್ರಿಯೆಯೇ ನಡೆಯದೇ ಹೆಸರುಗಳನ್ನು ಕೈಬಿಡಲಾಗಿದೆ ಎಂದು ಕಾಂಗ್ರೆಸ್ ನಾಯಕರಾದ ಎ.ನಾಗರಾಜ್ ಹೇಳಿದ್ದಾರೆ.

Published On - 12:39 pm, Wed, 23 November 22

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ