AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದನದಲ್ಲಿ ವಕ್ಫ್ ಬೋರ್ಡ್ ವರದಿ ಮಂಡಿಸಕ್ಕೆ ಬಿಜೆಪಿಯವರಿಗೆ ಡ್ಯಾಷ್ ಇಲ್ಲ ಎಂದು ಏಕವಚನದಲ್ಲೇ ಜಾಡಿಸಿದ ಸಿಎಂ ಇಬ್ರಾಹಿಂ!

ಯಾರು ಯಾರ ಮೇಲೆ ಬೇಕಾದರೂ ದಾಳಿ ಮಾಡಕೊಳ್ಳಲಿ. ಬಜರಂಗದಳ, RSS, ಶ್ರೀರಾಮಸೇನೆ ಅವರೆಲ್ಲ ಒಂದೇ ಗುಂಪು. ನಮಗೆ ಬೇರೆ ಯಾರೂ ಇಲ್ಲ, ನಮಗೆ ಜನರ ಆಶೀರ್ವಾದ ಅಷ್ಟೇ.

ಸದನದಲ್ಲಿ ವಕ್ಫ್ ಬೋರ್ಡ್ ವರದಿ ಮಂಡಿಸಕ್ಕೆ ಬಿಜೆಪಿಯವರಿಗೆ ಡ್ಯಾಷ್ ಇಲ್ಲ ಎಂದು ಏಕವಚನದಲ್ಲೇ ಜಾಡಿಸಿದ ಸಿಎಂ ಇಬ್ರಾಹಿಂ!
JDS ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Sep 22, 2022 | 2:52 PM

ಬೆಂಗಳೂರು: ವಕ್ಫ್ ಬೋರ್ಡ್ ಬಗ್ಗೆ ಮೂರು ವರ್ಷ ರಿಪೋರ್ಟ್ ಇಟ್ಕೊಂಡು ಹುಲಿ ಬಂತು ಹುಲಿ ಅಂತಾ ಹೇಳ್ತಾರೆ. ತನಿಖೆ ಮಾಡೋದಕ್ಕೆ ಬಿಜೆಪಿ ಅವರಿಗೆ (ಡ್ಯಾಷ್) ಇಲ್ಲ ಎಂದು ಏಕ ವಚನದಲ್ಲೇ ಜೆ.ಡಿ.ಎಸ್ ರಾಜ್ಯದ್ಯಕ್ಷ ಸಿಎಂ ಇಬ್ರಾಹಿಂ ಜಾಡಿಸಿದ್ದಾರೆ. ಪಿ‌ಎಸ್‌ಐ ಹಗರಣದಲ್ಲಿ ನಿಮ್ಮ ಜೇಬಿಗೆ ಕೈ ಹಾಕಿದ್ರೆ ನೀವು ಬೇರೆಯವರ ಜೇಬಿಗೆ ಕೈಹಾಕ್ತೀರಾ ಎಂದು ಪ್ರಶ್ನಿಸಿದರು. IMA, ಅಮಾನತ್ ಬ್ಯಾಂಕ್, ಸಹಕಾರ ಸಂಘದ ಹಗರಣಗಳ ವರದಿ ಏನಾಯ್ತು. ಜನತಾ ದಳ ಸರ್ಕಾರಕ್ಕೆ ಬಂದಾಗ ಚಿಕ್ಕಪ್ಪ ದೊಡ್ಡಪ್ಪನ ಮಕ್ಕಳನ್ನ ಜೈಲಿಗೆ ಕಳಿಸ್ತೇವೆ. ನಿಮಗೆ ಧೈರ್ಯ ಇದ್ರೆ ಎಲ್ಲಾ ಹಗರಣಗಳನ್ನ ಸಿಬಿಐ‌ಗೆ ಕೊಡಿ. ನೋಡ್ತೀನಿ ಮಾಡ್ತೀನಿ ಅಂತಾ ಯಾಕೆ ಹೇಳ್ತಾ ಇದ್ದೀರ. ಇನ್ನೂ NIA ದಾಳಿ ವಿಚಾರವಾಗಿ ಮಾತನಾಡಿದ್ದು, ಯಾರು ಯಾರ ಮೇಲೆ ಬೇಕಾದರೂ ದಾಳಿ ಮಾಡಕೊಳ್ಳಲಿ.

ಬಜರಂಗದಳ, RSS, ಶ್ರೀರಾಮಸೇನೆ ಅವರೆಲ್ಲ ಒಂದೇ ಗುಂಪು. ನಮಗೆ ಬೇರೆ ಯಾರೂ ಇಲ್ಲ, ನಮಗೆ ಜನರ ಆಶೀರ್ವಾದ ಅಷ್ಟೇ. ನೀವೆಲ್ಲ ಚಿಕ್ಕಪ್ಪ ದೊಡ್ಡಪ್ಪನ ಮಕ್ಕಳು. ಶ್ರೀರಾಮಸೇನೆ, ಆರ್‌ಎಸ್‌ಎಸ್‌, ಭಜರಂಗದಳ PFI ಎಲ್ಲಾ ಒಂದೇ ತಾಯಿ ಮಕ್ಕಳು. ನಮಗೆ ಜನತಾದಳ ಒಂದೆ. ನಮ್ಮ ತಾಯಿ ಕಿತ್ತೂರು ರಾಣಿ ಚೆನ್ನಮ್ಮ ಎಂದು ಸಿಎಂ ಇಬ್ರಾಹಿಂ ಹೇಳಿದರು.

ಕಾಂಗ್ರೆಸ್​ ವಿರುದ್ಧ ಕಿಡಿ ಕಾರಿದ ಗೃಹಸಚಿವ ಆರಗ ಜ್ಞಾನೇಂದ್ರ:

ಮಾಹಿತಿ ಆಧಾರದ ಮೇಲೆ NIAಯವರು ದಾಳಿ ಮಾಡಿದ್ದಾರೆ. ಅದನ್ನ ತಡೆದು ಪ್ರತಿಭಟನೆ ಮಾಡುತ್ತಾರೆ ಅಂದರೆ ಏನರ್ಥ? ಇಂಥ ದುಷ್ಟ ಶಕ್ತಿಗಳಿಗೆ ಬೆಂಬಲ ಕೊಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. NIA ದಾಳಿಯಲ್ಲಿ ಯಾವ ರಾಜಕೀಯ ಇಲ್ಲ. PFI ಸಂಘಟನೆ ಏನೇನು ಕೃತ್ಯ ಮಾಡುತ್ತಿದೆ ಮಾಹಿತಿ ಇದೆ. ಕಾಂಗ್ರೆಸ್ ಇಂಥ ದುಷ್ಟ ಶಕ್ತಿಯನ್ನ ಬೆಳೆಸಿದ್ದರಿಂದ ಪ್ರಾಣಹಾನಿಯಾಗಿದೆ. ವೋಟ್ ಬ್ಯಾಂಕ್ ರಾಜಕಾರಣದಿಂದ ಪ್ರಾಣಹಾನಿ ಆಗುತ್ತಿವೆ ಎಂದು ಕಾಂಗ್ರೆಸ್​ ವಿರುದ್ಧ ಗೃಹಸಚಿವ ಆರಗ ಜ್ಞಾನೇಂದ್ರ ಆಕ್ರೋಶ ಹೊರ ಹಾಕಿದ್ರು.

PFI, SDPI ಬ್ಯಾನ್ ಮಾಡಲು ಸಮಯ ಬರಬೇಕು:

PFI, SDPI ಬ್ಯಾನ್​ ಮಾಡುವ ನಿಟ್ಟಿನಲ್ಲಿ ಕೆಲಸ ನಡೆಯುತ್ತಿದೆ. ಕೇಂದ್ರ ಸರ್ಕಾರ ಈ ಕುರಿತು ನಿರ್ಧಾರ ತೆಗೆದುಕೊಳ್ಳುತ್ತೆ. ಸಂಘಟನೆಗಳನ್ನ ಬ್ಯಾನ್​ ಮಾಡಲು ಸಮಯ ಬರಬೇಕು. ಶಂಕಿತ ಉಗ್ರರನ್ನ ಬಂಧಿಸಿದ ಪೊಲೀಸರಿಗೆ ಅಭಿನಂದನೆ. ಧರ್ಮ ನೋಡಿ ಪೊಲೀಸರು ಕಾರ್ಯಚರಣೆ ಮಾಡಲ್ಲ ಎಂದು ಶಿವಮೊಗ್ಗ ಪೊಲೀಸರಿಗೆ ಗೃಹಸಚಿವ ಅರಗ ಜ್ಞಾನೇಂದ್ರ ಅಭಿನಂದನೆ ಸಲ್ಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 2:45 pm, Thu, 22 September 22

ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ