AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಯಕರ್ತರ ಅಭಿಪ್ರಾಯ ಪಡೆದು ಟಿಕೆಟ್ ಕೊಟ್ಟಿರೋದು ಇದೊಂದೇ ಪಕ್ಷ -ಬಿ.ವೈ. ವಿಜಯೇಂದ್ರ

ನಾನು ಹಲವಾರು ವರ್ಷಗಳಿಂದ ಸಂಘಟನೆ ಕೆಲಸ ಮಾಡಿದ್ದೇನೆ. ಬಿಎಸ್ ವೈ ಮಗ ಅಂತ ಟಿಕೆಟ್ ಕೊಡೋದೇ ಆಗಿದ್ರೆ, ಕಳೆದ ಬಾರಿಯೇ ವರುಣದಿಂದ ಟಿಕೆಟ್ ಸಿಕ್ತಾ ಇತ್ತು ಎಂದು ಬಿ.ವೈ. ವಿಜಯೇಂದ್ರ ತಿಳಿಸಿದರು.

ಕಾರ್ಯಕರ್ತರ ಅಭಿಪ್ರಾಯ ಪಡೆದು ಟಿಕೆಟ್ ಕೊಟ್ಟಿರೋದು ಇದೊಂದೇ ಪಕ್ಷ -ಬಿ.ವೈ. ವಿಜಯೇಂದ್ರ
ಬಿವೈ ವಿಜಯೇಂದ್ರ
ಆಯೇಷಾ ಬಾನು
ಆಯೇಷಾ ಬಾನು|

Updated on:Apr 13, 2023 | 3:17 PM

Share

ಮುಖ್ಯಾಂಶಗಳು

  • ಬಿಜೆಪಿ ವಲಯದಲ್ಲಿ ಅಸಮಾಧಾನ ಭುಗಿಲೆದ್ದ ಬಗ್ಗೆ ಬಿ.ವೈ. ವಿಜಯೇಂದ್ರ ಪ್ರತಿಕ್ರಿಯೆ
  • ವರುಣ ಸೇರಿದಂತೆ ಪಕ್ಷ ಎಲ್ಲಿ ಹೇಳುತ್ತೋ ಅಲ್ಲಿ ಪ್ರಚಾರ ಮಾಡುತ್ತೇನೆ ಎಂದು ವಿಜಯೇಂದ್ರ
  • ಬಿಎಸ್ ವೈ ಮಗ ಅಂತ ಟಿಕೆಟ್ ಕೊಡೋದೇ ಆಗಿದ್ರೆ, ಕಳೆದ ಬಾರಿಯೇ ವರುಣದಿಂದ ಟಿಕೆಟ್ ಸಿಕ್ತಾ ಇತ್ತು

ಬೆಂಗಳೂರು: ರಾಜ್ಯ ವಿದಾನಸಭಾ ಚುನಾವಣೆಗೆ(Karnataka Assembly Elections 2023) ಬಿಜೆಪಿ 2ನೇ ಪಟ್ಟಿ ರಿಲೀಸ್ ಮಾಡಿದ್ದು ಬಿಜೆಪಿ ವಲಯದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಶಿಕಾರಿಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ವಿಜಯೇಂದ್ರ(BY Vijayendra) ಪ್ರತಿಕ್ರಿಯೆ ನೀಡಿದ್ದಾರೆ. ವಿಸ್ತೃತವಾಗಿ ಕಾರ್ಯಕರ್ತರ ಅಭಿಪ್ರಾಯ ಪಡೆದು, ಸರ್ವೇ ಮಾಡಿ ಟಿಕೆಟ್ ನೀಡಲಾಗಿದೆ. ಮಹಿಳೆಯರಿಗೆ, ಸಮಾಜದ ಎಲ್ಲಾ ವರ್ಗಗಳಿಗೆ ಅವಕಾಶ ಕೊಡಲಾಗಿದೆ. ಕಾರ್ಯಕರ್ತರ ಅಭಿಪ್ರಾಯ ಪಡೆದು ಟಿಕೆಟ್ ಕೊಟ್ಟಿರೋದು ಇದೊಂದೇ ಪಕ್ಷ. ಟಿಕೆಟ್ ಮಿಸ್ ಆದವರಿಂದ ಅಸಮಾಧಾನ, ಬಂಡಾಯ ಅನ್ನೋದು ಸಹಜ. ಪೈಪೋಟಿ ಸಹಜವಾಗಿ ಇದ್ದೇ ಇದೆ. ಇದೆಲ್ಲವನ್ನೂ ಕೂಡ ಸಿಎಂ ಬಸವರಾಜ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ, ಪಕ್ಷದ ಅಧ್ಯಕ್ಷರು ಕೂತು ಮಾತಾಡಿ ಸರಿ ಪಡಿಸುತ್ತಾರೆ ಎಂದರು.

ಲಕ್ಷ್ಮಣ್ ಸವದಿ ಅವರಿಗೆ ಪಕ್ಷ ಏನೇನು ಕೊಟ್ಟಿದೆ ಅಂತ ಎಲ್ಲರಿಗೂ ಗೊತ್ತಿದೆ. ಇದನ್ನೆಲ್ಲಾ ಪಕ್ಷದ ಹಿರಿಯರು ಸರಿ ಮಾಡುವ ಕೆಲಸ ಮಾಡ್ತಾರೆ. ವರುಣ ಸೇರಿದಂತೆ ಪಕ್ಷ ಎಲ್ಲಿ ಹೇಳುತ್ತೋ ಅಲ್ಲಿ ಪ್ರಚಾರ ಮಾಡುತ್ತೇನೆ ಎಂದು ವಿಜಯೇಂದ್ರ ತಿಳಿಸಿದರು. ಇನ್ನು ಬಿಎಸ್ ಯಡಿಯೂರಪ್ಪ ಪುತ್ರ ಎಂಬ ಕಾರಣಕ್ಕೆ ಟಿಕೆಟ್ ನೀಡಿದ್ದಾರೆಂಬ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಅವರು, ನಾನು ಹಲವಾರು ವರ್ಷಗಳಿಂದ ಸಂಘಟನೆ ಕೆಲಸ ಮಾಡಿದ್ದೇನೆ. ಬಿಎಸ್ ವೈ ಮಗ ಅಂತ ಟಿಕೆಟ್ ಕೊಡೋದೇ ಆಗಿದ್ರೆ, ಕಳೆದ ಬಾರಿಯೇ ವರುಣದಿಂದ ಟಿಕೆಟ್ ಸಿಕ್ತಾ ಇತ್ತು.

ಇದನ್ನೂ ಓದಿ: Karnataka Assembly Election: ಸಿದ್ದರಾಮಯ್ಯ ಜೀ ಕೋ ಗುಸ್ಸಾ ಕ್ಯೋಂ ಆತಾ ಹೈ? ಮತ್ತೊಮ್ಮೆ ಸಾರ್ವಜನಿಕವಾಗಿ ರೇಗಿದ ವಿರೋಧ ಪಕ್ಷದ ನಾಯಕ!

ಇಂಥಹ ಪರಿಪಾಠ ಈ‌ ಪಕ್ಷದಲ್ಲಿ ಇಲ್ಲ. ಪಕ್ಷ ಅವಲೋಕನ ಮಾಡಿಯೇ ಟಿಕೆಟ್ ಕೊಡುವುದು. ಬಿಎಸ್ ವೈ ಮಗ ಅಂತ ಟಿಕೆಟ್ ಕೊಟ್ಟಿದಾರೆ ಅಂತ ನನಗೆ ಅನ್ನಿಸಿಲ್ಲ. 19 ರಂದು ನಾನು ನಾಮಪತ್ರ ಸಲ್ಲಿಕೆ ಮಾಡುತ್ತೇನೆ. ಶಿರಾ ಹಾಗೂ ಕೆ.ಆರ್. ಪೇಟೆಯಲ್ಲಿ ಗೆದ್ದದ್ದು ವಿಜಯೇಂದ್ರನಿಂದ ಅಲ್ಲ. ಕಾರ್ಯಕರ್ತರ ಸಂಘಟನೆಯಿಂದ ನಾವು ಅಲ್ಲಿ ಆಗ ಗೆದ್ದೆವು. ವಿಜಯೇಂದ್ರ ಅನ್ನೋದು ನೆಪ ಮಾತ್ರ. ಯಾರು ಸಿಎಂ ಆಗ್ತಾರೆ ಅನ್ನೋದು‌ ಮುಖ್ಯ ಅಲ್ಲ. ಬಿಜೆಪಿ ಅಧಿಕಾರಕ್ಕೆ ಬರೋದು ಮುಖ್ಯ ಎಂದರು.

ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:15 pm, Thu, 13 April 23

Follow Us
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ