AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಯಕರ್ತರ ಅಭಿಪ್ರಾಯ ಪಡೆದು ಟಿಕೆಟ್ ಕೊಟ್ಟಿರೋದು ಇದೊಂದೇ ಪಕ್ಷ -ಬಿ.ವೈ. ವಿಜಯೇಂದ್ರ

ನಾನು ಹಲವಾರು ವರ್ಷಗಳಿಂದ ಸಂಘಟನೆ ಕೆಲಸ ಮಾಡಿದ್ದೇನೆ. ಬಿಎಸ್ ವೈ ಮಗ ಅಂತ ಟಿಕೆಟ್ ಕೊಡೋದೇ ಆಗಿದ್ರೆ, ಕಳೆದ ಬಾರಿಯೇ ವರುಣದಿಂದ ಟಿಕೆಟ್ ಸಿಕ್ತಾ ಇತ್ತು ಎಂದು ಬಿ.ವೈ. ವಿಜಯೇಂದ್ರ ತಿಳಿಸಿದರು.

ಕಾರ್ಯಕರ್ತರ ಅಭಿಪ್ರಾಯ ಪಡೆದು ಟಿಕೆಟ್ ಕೊಟ್ಟಿರೋದು ಇದೊಂದೇ ಪಕ್ಷ -ಬಿ.ವೈ. ವಿಜಯೇಂದ್ರ
ಬಿವೈ ವಿಜಯೇಂದ್ರ
ಆಯೇಷಾ ಬಾನು
|

Updated on:Apr 13, 2023 | 3:17 PM

Share

ಬೆಂಗಳೂರು: ರಾಜ್ಯ ವಿದಾನಸಭಾ ಚುನಾವಣೆಗೆ(Karnataka Assembly Elections 2023) ಬಿಜೆಪಿ 2ನೇ ಪಟ್ಟಿ ರಿಲೀಸ್ ಮಾಡಿದ್ದು ಬಿಜೆಪಿ ವಲಯದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಶಿಕಾರಿಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ವಿಜಯೇಂದ್ರ(BY Vijayendra) ಪ್ರತಿಕ್ರಿಯೆ ನೀಡಿದ್ದಾರೆ. ವಿಸ್ತೃತವಾಗಿ ಕಾರ್ಯಕರ್ತರ ಅಭಿಪ್ರಾಯ ಪಡೆದು, ಸರ್ವೇ ಮಾಡಿ ಟಿಕೆಟ್ ನೀಡಲಾಗಿದೆ. ಮಹಿಳೆಯರಿಗೆ, ಸಮಾಜದ ಎಲ್ಲಾ ವರ್ಗಗಳಿಗೆ ಅವಕಾಶ ಕೊಡಲಾಗಿದೆ. ಕಾರ್ಯಕರ್ತರ ಅಭಿಪ್ರಾಯ ಪಡೆದು ಟಿಕೆಟ್ ಕೊಟ್ಟಿರೋದು ಇದೊಂದೇ ಪಕ್ಷ. ಟಿಕೆಟ್ ಮಿಸ್ ಆದವರಿಂದ ಅಸಮಾಧಾನ, ಬಂಡಾಯ ಅನ್ನೋದು ಸಹಜ. ಪೈಪೋಟಿ ಸಹಜವಾಗಿ ಇದ್ದೇ ಇದೆ. ಇದೆಲ್ಲವನ್ನೂ ಕೂಡ ಸಿಎಂ ಬಸವರಾಜ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ, ಪಕ್ಷದ ಅಧ್ಯಕ್ಷರು ಕೂತು ಮಾತಾಡಿ ಸರಿ ಪಡಿಸುತ್ತಾರೆ ಎಂದರು.

ಲಕ್ಷ್ಮಣ್ ಸವದಿ ಅವರಿಗೆ ಪಕ್ಷ ಏನೇನು ಕೊಟ್ಟಿದೆ ಅಂತ ಎಲ್ಲರಿಗೂ ಗೊತ್ತಿದೆ. ಇದನ್ನೆಲ್ಲಾ ಪಕ್ಷದ ಹಿರಿಯರು ಸರಿ ಮಾಡುವ ಕೆಲಸ ಮಾಡ್ತಾರೆ. ವರುಣ ಸೇರಿದಂತೆ ಪಕ್ಷ ಎಲ್ಲಿ ಹೇಳುತ್ತೋ ಅಲ್ಲಿ ಪ್ರಚಾರ ಮಾಡುತ್ತೇನೆ ಎಂದು ವಿಜಯೇಂದ್ರ ತಿಳಿಸಿದರು. ಇನ್ನು ಬಿಎಸ್ ಯಡಿಯೂರಪ್ಪ ಪುತ್ರ ಎಂಬ ಕಾರಣಕ್ಕೆ ಟಿಕೆಟ್ ನೀಡಿದ್ದಾರೆಂಬ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಅವರು, ನಾನು ಹಲವಾರು ವರ್ಷಗಳಿಂದ ಸಂಘಟನೆ ಕೆಲಸ ಮಾಡಿದ್ದೇನೆ. ಬಿಎಸ್ ವೈ ಮಗ ಅಂತ ಟಿಕೆಟ್ ಕೊಡೋದೇ ಆಗಿದ್ರೆ, ಕಳೆದ ಬಾರಿಯೇ ವರುಣದಿಂದ ಟಿಕೆಟ್ ಸಿಕ್ತಾ ಇತ್ತು.

ಇದನ್ನೂ ಓದಿ: Karnataka Assembly Election: ಸಿದ್ದರಾಮಯ್ಯ ಜೀ ಕೋ ಗುಸ್ಸಾ ಕ್ಯೋಂ ಆತಾ ಹೈ? ಮತ್ತೊಮ್ಮೆ ಸಾರ್ವಜನಿಕವಾಗಿ ರೇಗಿದ ವಿರೋಧ ಪಕ್ಷದ ನಾಯಕ!

ಇಂಥಹ ಪರಿಪಾಠ ಈ‌ ಪಕ್ಷದಲ್ಲಿ ಇಲ್ಲ. ಪಕ್ಷ ಅವಲೋಕನ ಮಾಡಿಯೇ ಟಿಕೆಟ್ ಕೊಡುವುದು. ಬಿಎಸ್ ವೈ ಮಗ ಅಂತ ಟಿಕೆಟ್ ಕೊಟ್ಟಿದಾರೆ ಅಂತ ನನಗೆ ಅನ್ನಿಸಿಲ್ಲ. 19 ರಂದು ನಾನು ನಾಮಪತ್ರ ಸಲ್ಲಿಕೆ ಮಾಡುತ್ತೇನೆ. ಶಿರಾ ಹಾಗೂ ಕೆ.ಆರ್. ಪೇಟೆಯಲ್ಲಿ ಗೆದ್ದದ್ದು ವಿಜಯೇಂದ್ರನಿಂದ ಅಲ್ಲ. ಕಾರ್ಯಕರ್ತರ ಸಂಘಟನೆಯಿಂದ ನಾವು ಅಲ್ಲಿ ಆಗ ಗೆದ್ದೆವು. ವಿಜಯೇಂದ್ರ ಅನ್ನೋದು ನೆಪ ಮಾತ್ರ. ಯಾರು ಸಿಎಂ ಆಗ್ತಾರೆ ಅನ್ನೋದು‌ ಮುಖ್ಯ ಅಲ್ಲ. ಬಿಜೆಪಿ ಅಧಿಕಾರಕ್ಕೆ ಬರೋದು ಮುಖ್ಯ ಎಂದರು.

ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:15 pm, Thu, 13 April 23

ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ