AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿ.ಎಸ್​.ಯಡಿಯೂರಪ್ಪ ರಾಜೀನಾಮೆ ವಿಚಾರದ ಬಗ್ಗೆ ಅರುಣ್​ ಸಿಂಗ್​ ಮೌನ; ಅಚ್ಚರಿ ಮೂಡಿಸಿದ ರಾಜ್ಯ ಉಸ್ತುವಾರಿಯ ನಡೆ

Arun Singh: ಪಕ್ಷದಲ್ಲಿ ಸಣ್ಣ ಮಟ್ಟದ ಆಂತರಿಕ ಭಿನ್ನಾಭಿಪ್ರಾಯಗಳು ಎದ್ದು, ಬಸನಗೌಡ ಪಾಟೀಲ್​ ಯತ್ನಾಳ್​ ಅವರು ಮುಖ್ಯಮಂತ್ರಿ ಬದಲಾಗುತ್ತಾರೆ ಎಂದು ಒತ್ತಿಒತ್ತಿ ಹೇಳಿದಾಗಲೂ ಅರುಣ್​ ಸಿಂಗ್​ ವಹಿಸಿಕೊಂಡು ಬಂದಿದ್ದರು.

ಬಿ.ಎಸ್​.ಯಡಿಯೂರಪ್ಪ ರಾಜೀನಾಮೆ ವಿಚಾರದ ಬಗ್ಗೆ ಅರುಣ್​ ಸಿಂಗ್​ ಮೌನ; ಅಚ್ಚರಿ ಮೂಡಿಸಿದ ರಾಜ್ಯ ಉಸ್ತುವಾರಿಯ ನಡೆ
ಅರುಣ್ ಸಿಂಗ್
TV9 Web
| Edited By: |

Updated on:Jul 22, 2021 | 11:17 AM

Share

ಇನ್ನೆರಡು ಮೂರು ದಿನಗಳಲ್ಲಿ ಬಿ.ಎಸ್​.ಯಡಿಯೂರಪ್ಪ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುತ್ತಾರೆ ಎಂಬುದು ಬಹುತೇಕ ಖಚಿತವಾಗುತ್ತಿದೆ. ಅದರಲ್ಲೂ ಇಂದು ಧನ್ವಂತರಿ ಹೋಮ ನಡೆಸಿದ ಯಡಿಯೂರಪ್ಪ ಬಳಿಕ ಮಾತನಾಡಿದ್ದನ್ನು ಕೇಳಿದರೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಖಂಡಿತವಾಗಿ ಆಗುತ್ತದೆ ಎಂದೇ ಹೇಳಲಾಗುತ್ತಿದೆ. ಇಷ್ಟೆಲ್ಲದರ ಮಧ್ಯೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್​ ಮೌನವೂ ಅಷ್ಟೇ ಕುತೂಹಲ ಕೆರಳಿಸಿದೆ. ಇತ್ತೀಚೆಗೆ ದೆಹಲಿಗೆ ಹೋಗಿದ್ದ ಬಿ.ಎಸ್​.ಯಡಿಯೂರಪ್ಪ ತುಂಬ ಖುಷಿಯಾಗಿಯೇ ವಾಪಸ್ ಬಂದಿದ್ದರು. ಆದರೆ ಅದರ ಬೆನ್ನಲ್ಲೇ ರಾಜ್ಯಾಧ್ಯಕ್ಷ ನಳಿನ್​ ಕುಮಾರ್ ಕಟೀಲ್​ ಅವರದ್ದು ಎನ್ನಲಾದ ಆಡಿಯೋವೊಂದು ವೈರಲ್ ಆಗಿ ಸಂಚಲನ ಸೃಷ್ಟಿಸಿತ್ತು. ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಖಚಿತ ಎಂಬ ಮಾತುಗಳು ಅದಾಗಿದ್ದವು. ಅಷ್ಟಾದರೂ ಸುಮ್ಮನಿದ್ದ ಬಿ.ಎಸ್​. ಯಡಿಯೂರಪ್ಪ ಇಂದು ಮೊದಲ ಬಾರಿಗೆ ಮೌನ ಮುರಿದಿದ್ದಾರೆ.

ಆದರೆ ಅರುಣ್​ ಸಿಂಗ್​ ಯಾಕೆ ಏನೂ ಪ್ರತಿಕ್ರಿಯೆ ನೀಡುತ್ತಿಲ್ಲ ಎಂಬುದು ಕುತೂಹಲ ಕೆರಳಿಸಿದೆ. ಪಕ್ಷದಲ್ಲಿ ಸಣ್ಣ ಮಟ್ಟದ ಆಂತರಿಕ ಭಿನ್ನಾಭಿಪ್ರಾಯಗಳು ಎದ್ದು, ಬಸನಗೌಡ ಪಾಟೀಲ್​ ಯತ್ನಾಳ್​ ಅವರು ಮುಖ್ಯಮಂತ್ರಿ ಬದಲಾಗುತ್ತಾರೆ ಎಂದು ಒತ್ತಿಒತ್ತಿ ಹೇಳಿದಾಗಲೂ ಅರುಣ್​ ಸಿಂಗ್​ ವಹಿಸಿಕೊಂಡು ಬಂದಿದ್ದರು. ಅಂಥ ಮಾತುಗಳಿಗೆ ತಲೆಕೆಡಿಸಿಕೊಳ್ಳಬೇಡಿ. ಕರ್ನಾಟಕದಲ್ಲಿ ಮುಖ್ಯಮಂತ್ರಿ ರಾಜೀನಾಮೆ ಪ್ರಶ್ನೆಯೇ ಇಲ್ಲ. ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದೇ ಹೇಳಿದ್ದರು. ಆದರೀಗ ಮುಖ್ಯಮಂತ್ರಿ ರಾಜೀನಾಮೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಅರುಣ್​ ಸಿಂಗ್​ ಸಿದ್ಧರಿಲ್ಲ.  ಈ ಬಗ್ಗೆ ಮಾಧ್ಯಮದವರು ಪ್ರಶ್ನಿಸಿದ್ದಕ್ಕೆ, ಏನೂ ಉತ್ತರ ನೀಡದ ಅವರು, ಮುಂದೊಂದು ದಿನ ಟೀ ಕುಡಿಯೋಣ ಎಂದು ಹೇಳಿ ಹೋಗಿದ್ದಾರೆ.   ರಾಜ್ಯ ರಾಜಕಾರಣ ಮತ್ತಷ್ಟು ಕುತೂಹಲ ಉಂಟು ಮಾಡಿದೆ. ಬಿಜೆಪಿ ವಲಯದಲ್ಲಿ ಏನಾಗುತ್ತಿದೆ ಎಂಬ ಸ್ಪಷ್ಟತೆಯೇ ಸಿಗದಂತಾಗಿದೆ.

ಇದನ್ನೂ ಓದಿ: Big Breaking: ಸಿಎಂ ಹುದ್ದೆಗೆ ರಾಜೀನಾಮೆ? ಸುಳಿವು ನೀಡಿದ ಬಿಎಸ್ ಯಡಿಯೂರಪ್ಪ

BJP Karnataka Incharge Arun Singh is not speaking on BS Yediyurappa resignation

Published On - 11:14 am, Thu, 22 July 21

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ