AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿ.ಎಸ್​.ಯಡಿಯೂರಪ್ಪ ರಾಜೀನಾಮೆ ವಿಚಾರದ ಬಗ್ಗೆ ಅರುಣ್​ ಸಿಂಗ್​ ಮೌನ; ಅಚ್ಚರಿ ಮೂಡಿಸಿದ ರಾಜ್ಯ ಉಸ್ತುವಾರಿಯ ನಡೆ

Arun Singh: ಪಕ್ಷದಲ್ಲಿ ಸಣ್ಣ ಮಟ್ಟದ ಆಂತರಿಕ ಭಿನ್ನಾಭಿಪ್ರಾಯಗಳು ಎದ್ದು, ಬಸನಗೌಡ ಪಾಟೀಲ್​ ಯತ್ನಾಳ್​ ಅವರು ಮುಖ್ಯಮಂತ್ರಿ ಬದಲಾಗುತ್ತಾರೆ ಎಂದು ಒತ್ತಿಒತ್ತಿ ಹೇಳಿದಾಗಲೂ ಅರುಣ್​ ಸಿಂಗ್​ ವಹಿಸಿಕೊಂಡು ಬಂದಿದ್ದರು.

ಬಿ.ಎಸ್​.ಯಡಿಯೂರಪ್ಪ ರಾಜೀನಾಮೆ ವಿಚಾರದ ಬಗ್ಗೆ ಅರುಣ್​ ಸಿಂಗ್​ ಮೌನ; ಅಚ್ಚರಿ ಮೂಡಿಸಿದ ರಾಜ್ಯ ಉಸ್ತುವಾರಿಯ ನಡೆ
ಅರುಣ್ ಸಿಂಗ್
TV9 Web
| Updated By: Lakshmi Hegde|

Updated on:Jul 22, 2021 | 11:17 AM

Share

ಇನ್ನೆರಡು ಮೂರು ದಿನಗಳಲ್ಲಿ ಬಿ.ಎಸ್​.ಯಡಿಯೂರಪ್ಪ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುತ್ತಾರೆ ಎಂಬುದು ಬಹುತೇಕ ಖಚಿತವಾಗುತ್ತಿದೆ. ಅದರಲ್ಲೂ ಇಂದು ಧನ್ವಂತರಿ ಹೋಮ ನಡೆಸಿದ ಯಡಿಯೂರಪ್ಪ ಬಳಿಕ ಮಾತನಾಡಿದ್ದನ್ನು ಕೇಳಿದರೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಖಂಡಿತವಾಗಿ ಆಗುತ್ತದೆ ಎಂದೇ ಹೇಳಲಾಗುತ್ತಿದೆ. ಇಷ್ಟೆಲ್ಲದರ ಮಧ್ಯೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್​ ಮೌನವೂ ಅಷ್ಟೇ ಕುತೂಹಲ ಕೆರಳಿಸಿದೆ. ಇತ್ತೀಚೆಗೆ ದೆಹಲಿಗೆ ಹೋಗಿದ್ದ ಬಿ.ಎಸ್​.ಯಡಿಯೂರಪ್ಪ ತುಂಬ ಖುಷಿಯಾಗಿಯೇ ವಾಪಸ್ ಬಂದಿದ್ದರು. ಆದರೆ ಅದರ ಬೆನ್ನಲ್ಲೇ ರಾಜ್ಯಾಧ್ಯಕ್ಷ ನಳಿನ್​ ಕುಮಾರ್ ಕಟೀಲ್​ ಅವರದ್ದು ಎನ್ನಲಾದ ಆಡಿಯೋವೊಂದು ವೈರಲ್ ಆಗಿ ಸಂಚಲನ ಸೃಷ್ಟಿಸಿತ್ತು. ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಖಚಿತ ಎಂಬ ಮಾತುಗಳು ಅದಾಗಿದ್ದವು. ಅಷ್ಟಾದರೂ ಸುಮ್ಮನಿದ್ದ ಬಿ.ಎಸ್​. ಯಡಿಯೂರಪ್ಪ ಇಂದು ಮೊದಲ ಬಾರಿಗೆ ಮೌನ ಮುರಿದಿದ್ದಾರೆ.

ಆದರೆ ಅರುಣ್​ ಸಿಂಗ್​ ಯಾಕೆ ಏನೂ ಪ್ರತಿಕ್ರಿಯೆ ನೀಡುತ್ತಿಲ್ಲ ಎಂಬುದು ಕುತೂಹಲ ಕೆರಳಿಸಿದೆ. ಪಕ್ಷದಲ್ಲಿ ಸಣ್ಣ ಮಟ್ಟದ ಆಂತರಿಕ ಭಿನ್ನಾಭಿಪ್ರಾಯಗಳು ಎದ್ದು, ಬಸನಗೌಡ ಪಾಟೀಲ್​ ಯತ್ನಾಳ್​ ಅವರು ಮುಖ್ಯಮಂತ್ರಿ ಬದಲಾಗುತ್ತಾರೆ ಎಂದು ಒತ್ತಿಒತ್ತಿ ಹೇಳಿದಾಗಲೂ ಅರುಣ್​ ಸಿಂಗ್​ ವಹಿಸಿಕೊಂಡು ಬಂದಿದ್ದರು. ಅಂಥ ಮಾತುಗಳಿಗೆ ತಲೆಕೆಡಿಸಿಕೊಳ್ಳಬೇಡಿ. ಕರ್ನಾಟಕದಲ್ಲಿ ಮುಖ್ಯಮಂತ್ರಿ ರಾಜೀನಾಮೆ ಪ್ರಶ್ನೆಯೇ ಇಲ್ಲ. ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದೇ ಹೇಳಿದ್ದರು. ಆದರೀಗ ಮುಖ್ಯಮಂತ್ರಿ ರಾಜೀನಾಮೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಅರುಣ್​ ಸಿಂಗ್​ ಸಿದ್ಧರಿಲ್ಲ.  ಈ ಬಗ್ಗೆ ಮಾಧ್ಯಮದವರು ಪ್ರಶ್ನಿಸಿದ್ದಕ್ಕೆ, ಏನೂ ಉತ್ತರ ನೀಡದ ಅವರು, ಮುಂದೊಂದು ದಿನ ಟೀ ಕುಡಿಯೋಣ ಎಂದು ಹೇಳಿ ಹೋಗಿದ್ದಾರೆ.   ರಾಜ್ಯ ರಾಜಕಾರಣ ಮತ್ತಷ್ಟು ಕುತೂಹಲ ಉಂಟು ಮಾಡಿದೆ. ಬಿಜೆಪಿ ವಲಯದಲ್ಲಿ ಏನಾಗುತ್ತಿದೆ ಎಂಬ ಸ್ಪಷ್ಟತೆಯೇ ಸಿಗದಂತಾಗಿದೆ.

ಇದನ್ನೂ ಓದಿ: Big Breaking: ಸಿಎಂ ಹುದ್ದೆಗೆ ರಾಜೀನಾಮೆ? ಸುಳಿವು ನೀಡಿದ ಬಿಎಸ್ ಯಡಿಯೂರಪ್ಪ

BJP Karnataka Incharge Arun Singh is not speaking on BS Yediyurappa resignation

Published On - 11:14 am, Thu, 22 July 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ