AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿ.ಎಸ್​.ಯಡಿಯೂರಪ್ಪ ರಾಜೀನಾಮೆ ವಿಚಾರದ ಬಗ್ಗೆ ಅರುಣ್​ ಸಿಂಗ್​ ಮೌನ; ಅಚ್ಚರಿ ಮೂಡಿಸಿದ ರಾಜ್ಯ ಉಸ್ತುವಾರಿಯ ನಡೆ

Arun Singh: ಪಕ್ಷದಲ್ಲಿ ಸಣ್ಣ ಮಟ್ಟದ ಆಂತರಿಕ ಭಿನ್ನಾಭಿಪ್ರಾಯಗಳು ಎದ್ದು, ಬಸನಗೌಡ ಪಾಟೀಲ್​ ಯತ್ನಾಳ್​ ಅವರು ಮುಖ್ಯಮಂತ್ರಿ ಬದಲಾಗುತ್ತಾರೆ ಎಂದು ಒತ್ತಿಒತ್ತಿ ಹೇಳಿದಾಗಲೂ ಅರುಣ್​ ಸಿಂಗ್​ ವಹಿಸಿಕೊಂಡು ಬಂದಿದ್ದರು.

ಬಿ.ಎಸ್​.ಯಡಿಯೂರಪ್ಪ ರಾಜೀನಾಮೆ ವಿಚಾರದ ಬಗ್ಗೆ ಅರುಣ್​ ಸಿಂಗ್​ ಮೌನ; ಅಚ್ಚರಿ ಮೂಡಿಸಿದ ರಾಜ್ಯ ಉಸ್ತುವಾರಿಯ ನಡೆ
ಅರುಣ್ ಸಿಂಗ್
TV9 Web
| Edited By: |

Updated on:Jul 22, 2021 | 11:17 AM

Share

ಇನ್ನೆರಡು ಮೂರು ದಿನಗಳಲ್ಲಿ ಬಿ.ಎಸ್​.ಯಡಿಯೂರಪ್ಪ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುತ್ತಾರೆ ಎಂಬುದು ಬಹುತೇಕ ಖಚಿತವಾಗುತ್ತಿದೆ. ಅದರಲ್ಲೂ ಇಂದು ಧನ್ವಂತರಿ ಹೋಮ ನಡೆಸಿದ ಯಡಿಯೂರಪ್ಪ ಬಳಿಕ ಮಾತನಾಡಿದ್ದನ್ನು ಕೇಳಿದರೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಖಂಡಿತವಾಗಿ ಆಗುತ್ತದೆ ಎಂದೇ ಹೇಳಲಾಗುತ್ತಿದೆ. ಇಷ್ಟೆಲ್ಲದರ ಮಧ್ಯೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್​ ಮೌನವೂ ಅಷ್ಟೇ ಕುತೂಹಲ ಕೆರಳಿಸಿದೆ. ಇತ್ತೀಚೆಗೆ ದೆಹಲಿಗೆ ಹೋಗಿದ್ದ ಬಿ.ಎಸ್​.ಯಡಿಯೂರಪ್ಪ ತುಂಬ ಖುಷಿಯಾಗಿಯೇ ವಾಪಸ್ ಬಂದಿದ್ದರು. ಆದರೆ ಅದರ ಬೆನ್ನಲ್ಲೇ ರಾಜ್ಯಾಧ್ಯಕ್ಷ ನಳಿನ್​ ಕುಮಾರ್ ಕಟೀಲ್​ ಅವರದ್ದು ಎನ್ನಲಾದ ಆಡಿಯೋವೊಂದು ವೈರಲ್ ಆಗಿ ಸಂಚಲನ ಸೃಷ್ಟಿಸಿತ್ತು. ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಖಚಿತ ಎಂಬ ಮಾತುಗಳು ಅದಾಗಿದ್ದವು. ಅಷ್ಟಾದರೂ ಸುಮ್ಮನಿದ್ದ ಬಿ.ಎಸ್​. ಯಡಿಯೂರಪ್ಪ ಇಂದು ಮೊದಲ ಬಾರಿಗೆ ಮೌನ ಮುರಿದಿದ್ದಾರೆ.

ಆದರೆ ಅರುಣ್​ ಸಿಂಗ್​ ಯಾಕೆ ಏನೂ ಪ್ರತಿಕ್ರಿಯೆ ನೀಡುತ್ತಿಲ್ಲ ಎಂಬುದು ಕುತೂಹಲ ಕೆರಳಿಸಿದೆ. ಪಕ್ಷದಲ್ಲಿ ಸಣ್ಣ ಮಟ್ಟದ ಆಂತರಿಕ ಭಿನ್ನಾಭಿಪ್ರಾಯಗಳು ಎದ್ದು, ಬಸನಗೌಡ ಪಾಟೀಲ್​ ಯತ್ನಾಳ್​ ಅವರು ಮುಖ್ಯಮಂತ್ರಿ ಬದಲಾಗುತ್ತಾರೆ ಎಂದು ಒತ್ತಿಒತ್ತಿ ಹೇಳಿದಾಗಲೂ ಅರುಣ್​ ಸಿಂಗ್​ ವಹಿಸಿಕೊಂಡು ಬಂದಿದ್ದರು. ಅಂಥ ಮಾತುಗಳಿಗೆ ತಲೆಕೆಡಿಸಿಕೊಳ್ಳಬೇಡಿ. ಕರ್ನಾಟಕದಲ್ಲಿ ಮುಖ್ಯಮಂತ್ರಿ ರಾಜೀನಾಮೆ ಪ್ರಶ್ನೆಯೇ ಇಲ್ಲ. ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದೇ ಹೇಳಿದ್ದರು. ಆದರೀಗ ಮುಖ್ಯಮಂತ್ರಿ ರಾಜೀನಾಮೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಅರುಣ್​ ಸಿಂಗ್​ ಸಿದ್ಧರಿಲ್ಲ.  ಈ ಬಗ್ಗೆ ಮಾಧ್ಯಮದವರು ಪ್ರಶ್ನಿಸಿದ್ದಕ್ಕೆ, ಏನೂ ಉತ್ತರ ನೀಡದ ಅವರು, ಮುಂದೊಂದು ದಿನ ಟೀ ಕುಡಿಯೋಣ ಎಂದು ಹೇಳಿ ಹೋಗಿದ್ದಾರೆ.   ರಾಜ್ಯ ರಾಜಕಾರಣ ಮತ್ತಷ್ಟು ಕುತೂಹಲ ಉಂಟು ಮಾಡಿದೆ. ಬಿಜೆಪಿ ವಲಯದಲ್ಲಿ ಏನಾಗುತ್ತಿದೆ ಎಂಬ ಸ್ಪಷ್ಟತೆಯೇ ಸಿಗದಂತಾಗಿದೆ.

ಇದನ್ನೂ ಓದಿ: Big Breaking: ಸಿಎಂ ಹುದ್ದೆಗೆ ರಾಜೀನಾಮೆ? ಸುಳಿವು ನೀಡಿದ ಬಿಎಸ್ ಯಡಿಯೂರಪ್ಪ

BJP Karnataka Incharge Arun Singh is not speaking on BS Yediyurappa resignation

Published On - 11:14 am, Thu, 22 July 21

ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?