AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿ.ಎಸ್​.ಯಡಿಯೂರಪ್ಪ ರಾಜೀನಾಮೆ ವಿಚಾರದ ಬಗ್ಗೆ ಅರುಣ್​ ಸಿಂಗ್​ ಮೌನ; ಅಚ್ಚರಿ ಮೂಡಿಸಿದ ರಾಜ್ಯ ಉಸ್ತುವಾರಿಯ ನಡೆ

Arun Singh: ಪಕ್ಷದಲ್ಲಿ ಸಣ್ಣ ಮಟ್ಟದ ಆಂತರಿಕ ಭಿನ್ನಾಭಿಪ್ರಾಯಗಳು ಎದ್ದು, ಬಸನಗೌಡ ಪಾಟೀಲ್​ ಯತ್ನಾಳ್​ ಅವರು ಮುಖ್ಯಮಂತ್ರಿ ಬದಲಾಗುತ್ತಾರೆ ಎಂದು ಒತ್ತಿಒತ್ತಿ ಹೇಳಿದಾಗಲೂ ಅರುಣ್​ ಸಿಂಗ್​ ವಹಿಸಿಕೊಂಡು ಬಂದಿದ್ದರು.

ಬಿ.ಎಸ್​.ಯಡಿಯೂರಪ್ಪ ರಾಜೀನಾಮೆ ವಿಚಾರದ ಬಗ್ಗೆ ಅರುಣ್​ ಸಿಂಗ್​ ಮೌನ; ಅಚ್ಚರಿ ಮೂಡಿಸಿದ ರಾಜ್ಯ ಉಸ್ತುವಾರಿಯ ನಡೆ
ಅರುಣ್ ಸಿಂಗ್
TV9 Web
| Edited By: |

Updated on:Jul 22, 2021 | 11:17 AM

Share

ಇನ್ನೆರಡು ಮೂರು ದಿನಗಳಲ್ಲಿ ಬಿ.ಎಸ್​.ಯಡಿಯೂರಪ್ಪ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುತ್ತಾರೆ ಎಂಬುದು ಬಹುತೇಕ ಖಚಿತವಾಗುತ್ತಿದೆ. ಅದರಲ್ಲೂ ಇಂದು ಧನ್ವಂತರಿ ಹೋಮ ನಡೆಸಿದ ಯಡಿಯೂರಪ್ಪ ಬಳಿಕ ಮಾತನಾಡಿದ್ದನ್ನು ಕೇಳಿದರೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಖಂಡಿತವಾಗಿ ಆಗುತ್ತದೆ ಎಂದೇ ಹೇಳಲಾಗುತ್ತಿದೆ. ಇಷ್ಟೆಲ್ಲದರ ಮಧ್ಯೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್​ ಮೌನವೂ ಅಷ್ಟೇ ಕುತೂಹಲ ಕೆರಳಿಸಿದೆ. ಇತ್ತೀಚೆಗೆ ದೆಹಲಿಗೆ ಹೋಗಿದ್ದ ಬಿ.ಎಸ್​.ಯಡಿಯೂರಪ್ಪ ತುಂಬ ಖುಷಿಯಾಗಿಯೇ ವಾಪಸ್ ಬಂದಿದ್ದರು. ಆದರೆ ಅದರ ಬೆನ್ನಲ್ಲೇ ರಾಜ್ಯಾಧ್ಯಕ್ಷ ನಳಿನ್​ ಕುಮಾರ್ ಕಟೀಲ್​ ಅವರದ್ದು ಎನ್ನಲಾದ ಆಡಿಯೋವೊಂದು ವೈರಲ್ ಆಗಿ ಸಂಚಲನ ಸೃಷ್ಟಿಸಿತ್ತು. ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಖಚಿತ ಎಂಬ ಮಾತುಗಳು ಅದಾಗಿದ್ದವು. ಅಷ್ಟಾದರೂ ಸುಮ್ಮನಿದ್ದ ಬಿ.ಎಸ್​. ಯಡಿಯೂರಪ್ಪ ಇಂದು ಮೊದಲ ಬಾರಿಗೆ ಮೌನ ಮುರಿದಿದ್ದಾರೆ.

ಆದರೆ ಅರುಣ್​ ಸಿಂಗ್​ ಯಾಕೆ ಏನೂ ಪ್ರತಿಕ್ರಿಯೆ ನೀಡುತ್ತಿಲ್ಲ ಎಂಬುದು ಕುತೂಹಲ ಕೆರಳಿಸಿದೆ. ಪಕ್ಷದಲ್ಲಿ ಸಣ್ಣ ಮಟ್ಟದ ಆಂತರಿಕ ಭಿನ್ನಾಭಿಪ್ರಾಯಗಳು ಎದ್ದು, ಬಸನಗೌಡ ಪಾಟೀಲ್​ ಯತ್ನಾಳ್​ ಅವರು ಮುಖ್ಯಮಂತ್ರಿ ಬದಲಾಗುತ್ತಾರೆ ಎಂದು ಒತ್ತಿಒತ್ತಿ ಹೇಳಿದಾಗಲೂ ಅರುಣ್​ ಸಿಂಗ್​ ವಹಿಸಿಕೊಂಡು ಬಂದಿದ್ದರು. ಅಂಥ ಮಾತುಗಳಿಗೆ ತಲೆಕೆಡಿಸಿಕೊಳ್ಳಬೇಡಿ. ಕರ್ನಾಟಕದಲ್ಲಿ ಮುಖ್ಯಮಂತ್ರಿ ರಾಜೀನಾಮೆ ಪ್ರಶ್ನೆಯೇ ಇಲ್ಲ. ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದೇ ಹೇಳಿದ್ದರು. ಆದರೀಗ ಮುಖ್ಯಮಂತ್ರಿ ರಾಜೀನಾಮೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಅರುಣ್​ ಸಿಂಗ್​ ಸಿದ್ಧರಿಲ್ಲ.  ಈ ಬಗ್ಗೆ ಮಾಧ್ಯಮದವರು ಪ್ರಶ್ನಿಸಿದ್ದಕ್ಕೆ, ಏನೂ ಉತ್ತರ ನೀಡದ ಅವರು, ಮುಂದೊಂದು ದಿನ ಟೀ ಕುಡಿಯೋಣ ಎಂದು ಹೇಳಿ ಹೋಗಿದ್ದಾರೆ.   ರಾಜ್ಯ ರಾಜಕಾರಣ ಮತ್ತಷ್ಟು ಕುತೂಹಲ ಉಂಟು ಮಾಡಿದೆ. ಬಿಜೆಪಿ ವಲಯದಲ್ಲಿ ಏನಾಗುತ್ತಿದೆ ಎಂಬ ಸ್ಪಷ್ಟತೆಯೇ ಸಿಗದಂತಾಗಿದೆ.

ಇದನ್ನೂ ಓದಿ: Big Breaking: ಸಿಎಂ ಹುದ್ದೆಗೆ ರಾಜೀನಾಮೆ? ಸುಳಿವು ನೀಡಿದ ಬಿಎಸ್ ಯಡಿಯೂರಪ್ಪ

BJP Karnataka Incharge Arun Singh is not speaking on BS Yediyurappa resignation

Published On - 11:14 am, Thu, 22 July 21

Follow Us
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು