AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆ ಸಿದ್ಧತೆ ಆರಂಭಿಸಿದ ಬಿಜೆಪಿ: ವಿವಿಧ ಜಿಲ್ಲೆಗಳಿಗೆ ಅರುಣ್ ಸಿಂಗ್ ಭೇಟಿ

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಸಂವಾದ ನಡೆಸಲು ಮುಂದಾಗಿದ್ದಾರೆ. ಮೊದಲ ಹಂತದಲ್ಲಿ ಹಳೇ ಮೈಸೂರು ಭಾಗದ ಜಿಲ್ಲೆಗಳಿಗೆ ಅರುಣ್ ಸಿಂಗ್ ಭೇಟಿ ನೀಡಲಿದ್ದಾರೆ.

ಚುನಾವಣೆ ಸಿದ್ಧತೆ ಆರಂಭಿಸಿದ ಬಿಜೆಪಿ: ವಿವಿಧ ಜಿಲ್ಲೆಗಳಿಗೆ ಅರುಣ್ ಸಿಂಗ್ ಭೇಟಿ
ಅರುಣ್ ಸಿಂಗ್
TV9 Web
| Edited By: |

Updated on: Aug 30, 2021 | 6:48 PM

Share

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಇನ್ನೂ ಎರಡು ವರ್ಷ ಬಾಕಿಯಿರುವಂತೆಯೇ ಬಿಜೆಪಿ ಸಿದ್ಧತೆ ಆರಂಭಿಸಿದೆ. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಸಂವಾದ ನಡೆಸಲು ಮುಂದಾಗಿದ್ದಾರೆ. ಮೊದಲ ಹಂತದಲ್ಲಿ ಹಳೇ ಮೈಸೂರು ಭಾಗದ ಜಿಲ್ಲೆಗಳಿಗೆ ಅರುಣ್ ಸಿಂಗ್ ಭೇಟಿ ನೀಡಲಿದ್ದಾರೆ.

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದ ಅರುಣ್ ಸಿಂಗ್ ಅವರನ್ನು ಕಾರ್ಯಕರ್ತರು ಆದರದಿಂದ ಬರಮಾಡಿಕೊಂಡರು. ಬೆಂಗಳೂರಿನಿಂದ ಮೈಸೂರಿಗೆ ಅರುಣ್ ಸಿಂಗ್ ರಸ್ತೆ ಮಾರ್ಗದಲ್ಲಿ ತೆರಳಿದರು. ಮೈಸೂರಿನಲ್ಲಿ ನಡೆಯಲಿರುವ ವಿವಿಧ ಸಭೆಗಳಲ್ಲಿ ಅರುಣ್ ಸಿಂಗ್ ಭಾಗಿಯಾಗಲಿದ್ದಾರೆ. ಮೈಸೂರಿನಲ್ಲಿ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆ ನಡೆಯಲಿದೆ. ಸಭೆಯಲ್ಲಿ ಮೈಸೂರು, ಮೈಸೂರು ಗ್ರಾಮಾಂತರ, ಚಾಮರಾಜನಗರ ಜಿಲ್ಲೆಯ ಮಂಡಲ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಪಾಲ್ಗೊಳ್ಳಲಿದ್ದಾರೆ.

ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅರುಣ್ ಸಿಂಗ್, ಸಚಿವ ಸಂಪುಟದಲ್ಲಿ ಖಾಲಿ ಇರುವ ಸ್ಥಾನಗಳ ಭರ್ತಿಗೆ ವರಿಷ್ಠರ ಜೊತೆಗೆ ಮುಖ್ಯಮಂತ್ರಿ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. 2023ರ ಚುನಾವಣೆಯಲ್ಲಿ ಗೆಲ್ಲುವುದೇ ನಮ್ಮ ಮುಂದಿರುವ ಸವಾಲು. ಹೀಗಾಗಿ ರಾಜ್ಯದ ಎಲ್ಲ ಜಿಲ್ಲೆಗಳಿಗೂ ಭೇಟಿ ನೀಡಲು ನಿರ್ಧರಿಸಿದ್ದೇನೆ ಎಂದು ಹೇಳಿದರು.

ವಿಮಾನ ನಿಲ್ದಾಣದ ಟರ್ಮಿನಲ್ ಹೊರಗೆ ಕಾರ್ಯಕರ್ತರ ಜೊತೆಗೆ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ನಿಂತಿರುವುದು ಕಂಡು ಅಚ್ಚರಿಪಟ್ಟರು. ಸ್ವಾಗತಕ್ಕಾಗಿ ಬಿಜೆಪಿ ಉಪಾಧ್ಯಕ್ಷರೇ ಬಂದಿದ್ದಾರೆ ಎಂದು ಹಾಸ್ಯ ಚಟಾಕಿ ಹಾರಿಸಿದರು. ನೀವು ಕಲಬುರ್ತಿಯಿಂದ ಬರುತ್ತಿರುವ ವಿಷಯ ತಿಳಿಯಿತು. ಹೀಗಾಗಿ ಇಲ್ಲಿಗೆ ಬಂದು ನಿಂತಿದ್ದೆ ಎಂದು ವಿಜಯೇಂದ್ರ ಹೇಳಿದರು.

(BJP Karnataka Incharge Arun Singh Visits Mysore to Prepare party for Upcoming Elections)

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ