AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೋಟರ್​ ಐಡಿ ಅಕ್ರಮ: ನಕಲಿ ಮತದಾರರ ಹೆಸರು ಬಿಟ್ಟು ಹೋಗಿರುವುದರಿಂದ ಕಾಂಗ್ರೆಸ್ಸ್​​ಗೆ​ ಗೆಲ್ಲುವುದು ಸಾಧ್ಯವಿಲ್ಲವೆಂದು ಅನಿಸುತ್ತಿದೆ- ಕಟೀಲ್​ ಆರೋಪ

ನಕಲಿ ಮತದಾರರ ಹೆಸರು ಬಿಟ್ಟು ಹೋಗಿರುವುದರಿಂದ ಕಾಂಗ್ರೆಸ್ಸಿಗರಿಗೆ ತಾವು ಗೆಲ್ಲುವುದು ಸಾಧ್ಯವಿಲ್ಲ ಎಂದು ಅನಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್​ ಕುಮಾರ್​ ಕಟೀಲ್​ ಟ್ವೀಟ್​ ಮಾಡಿದ್ದಾರೆ.

ವೋಟರ್​ ಐಡಿ ಅಕ್ರಮ: ನಕಲಿ ಮತದಾರರ ಹೆಸರು ಬಿಟ್ಟು ಹೋಗಿರುವುದರಿಂದ ಕಾಂಗ್ರೆಸ್ಸ್​​ಗೆ​  ಗೆಲ್ಲುವುದು ಸಾಧ್ಯವಿಲ್ಲವೆಂದು ಅನಿಸುತ್ತಿದೆ- ಕಟೀಲ್​ ಆರೋಪ
ಬಿಜೆಪಿ ರಾಜ್ಯಾಧ್ಯಕ್ಷ ನಳೀನ್​ ಕುಮಾರ್​ ಕಟೀಲ್​
TV9 Web
| Edited By: ವಿವೇಕ ಬಿರಾದಾರ|

Updated on:Nov 19, 2022 | 3:34 PM

Share

ಬೆಂಗಳೂರು: ವೋಟರ್ ಐಡಿ ಪರಿಷ್ಕರಣೆಯಲ್ಲಿ ನಡೆದ ಅಕ್ರಮ ಪ್ರಕರಣ (Voters Data Scam, Voters ID Revision) ರಾಜ್ಯ ರಾಜಕೀಯದಲ್ಲಿ ಪರ-ವಿರೋಧದ ಚರ್ಚೆಗೆ ಕಾರಣವಾಗುತ್ತಿದೆ. ಈ ಸಂಬಂಧ ವಿರೋಧ ಪಕ್ಷಗಳು ರಾಜ್ಯ ಬಿಜೆಪಿ ಸರ್ಕಾರವನ್ನು ತೀರ್ವ ಟೀಕೆ ಮಾಡುತ್ತಿದೆ. ಆದ್ರೆ, ಈ ಆರೋಪವನ್ನು ಬಿಜೆಪಿ ತಳ್ಳಿಹಾಕುತ್ತಿದೆ. ಇನ್ನು ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸರಣಿ ಟ್ವೀಟ್​ ಮೂಲಕ ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ” ಇದು ನಕಲಿ ಮತದಾರರ ಹೆಸರು ಬಿಟ್ಟು ಹೋಗಿರುವುದರಿಂದ ಕಾಂಗ್ರೆಸ್ಸಿಗರಿಗೆ (Congress) ತಾವು ಗೆಲ್ಲುವುದು ಸಾಧ್ಯವಿಲ್ಲ ಎಂದು ಅನಿಸುತ್ತಿದೆ. ಅದಕ್ಕಾಗಿ ಬಿಜೆಪಿ (BJP) ಮೇಲೆ ಆರೋಪ ಹಾಕುತ್ತಿದ್ದಾರೆ”, ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್​ ಕುಮಾರ್​ ಕಟೀಲ್ (Nalin Kumar Kateel)​ ಟ್ವೀಟ್​ ಮಾಡಿದ್ದಾರೆ.

ಕಾಂಗ್ರೆಸ್ಸಿಗರ ಆರೋಪಕ್ಕೂ ನಮ್ಮ ಸರಕಾರ, ಪಕ್ಷಕ್ಕೆ ಸಂಬಂಧವಿಲ್ಲ. ಜನರಲ್ಲಿ ಭಾಜಪಾ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡಿಸುವ ಕಾಂಗ್ರೆಸ್ಸಿನ ಹತಾಶ ಪ್ರಯತ್ನ ಇದು. ಮತದಾರರ ನೋಂದಣಿ ಕುರಿತು ಜಾಗೃತಿ ಮೂಡಿಸಲು ಪಡೆದುಕೊಂಡ ಅನುಮತಿಯನ್ನು ಚಿಲುಮೆ ಸಂಸ್ಥೆ ದುರ್ಬಳಕೆ ಮಾಡಿಕೊಂಡಿದೆ ಎಂದು ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ಕೊಟ್ಟಿರುವುದರಿಂದ ತನಿಖೆ ನಡೆಯುತ್ತಿದೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಇದೇ ಸಂಸ್ಥೆಗೆ ಗುತ್ತಿಗೆ ನೀಡಿತ್ತು. ಈಗ ಅದೇ ಸಂಸ್ಥೆಯ ವಿರುದ್ಧ ದೂರು ನೀಡಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ನಮ್ಮ ಪಕ್ಷದ ರಾಜ್ಯ ಸರಕಾರ ಪಾರದರ್ಶಕವಾಗಿರುವುದರಿಂದ ದೂರು ಬಂದ ಹಿನ್ನಲೆಯಲ್ಲಿ ಚಿಲುಮೆಗೆ ನೀಡಿರುವ ಅನುಮತಿಯನ್ನು ಬಿಬಿಎಂಪಿ ರದ್ದುಪಡಿಸಿದೆ. ಆದರೆ ಸೋಲಿನ ಭೀತಿಯಿಂದ ಕಾಂಗ್ರೆಸ್ ಅನಗತ್ಯ ರಾಜಕೀಯ ಮಾಡುತ್ತಿದೆ. ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಚಿಲುಮೆ ಸಂಸ್ಥೆ ಮೂಲಕ ಮತದಾರರ ಮಾಹಿತಿ ದುರ್ಬಳಕೆ ಬಗ್ಗೆನೂ ತನಿಖೆ ನಡೆಯಲಿದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:32 pm, Sat, 19 November 22

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ