AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಟ್ ಕಾಯಿನ್ ಬುರುಡೆರಾಮಯ್ಯ ಎಂದು ಸಿದ್ದರಾಮಯ್ಯರನ್ನು ಟೀಕಿಸಿ ಬಿಜೆಪಿ ಸರಣಿ ಟ್ವೀಟ್, ಫೋಟೋದಲ್ಲಿ ಏನಿದೆ?

ಮಾನ್ಯ ಸಿದ್ದರಾಮಯ್ಯ ಅವರೇ, ರಾಜ್ಯದಲ್ಲಿ ನಡೆದಿದೆ ಎನ್ನಲಾದ ಬಿಟ್ ಕಾಯಿನ್ ಹಗರಣದ ಬಗ್ಗೆ ತಾವು ಪ್ರಸ್ತಾಪಿಸಿದ್ದೀರಿ. ಈಗ ನಮಗೆ ಒಂದಿಷ್ಟು ಪ್ರಶ್ನೆಗಳಿವೆ. ಒಂದಷ್ಟು ಚಿತ್ರಗಳಿವೆ. ಹಂತ ಹಂತವಾಗಿ ಬಿಡುಗಡೆ ಮಾಡುತ್ತೇವೆ . ಉತ್ತರಿಸಿ ಎಂದು ಟ್ವೀಟ್ ಮಾಡಿ ಪ್ರಶ್ನಿಸಿದೆ.

ಬಿಟ್ ಕಾಯಿನ್ ಬುರುಡೆರಾಮಯ್ಯ ಎಂದು ಸಿದ್ದರಾಮಯ್ಯರನ್ನು ಟೀಕಿಸಿ ಬಿಜೆಪಿ ಸರಣಿ ಟ್ವೀಟ್, ಫೋಟೋದಲ್ಲಿ ಏನಿದೆ?
ಸಿದ್ದರಾಮಯ್ಯ
TV9 Web
| Updated By: ಆಯೇಷಾ ಬಾನು|

Updated on:Nov 18, 2021 | 3:07 PM

Share

ಬೆಂಗಳೂರು: ಬಿಟ್ ಕಾಯಿನ್ ಪ್ರಕರಣ ರಾಜ್ಯದಲ್ಲಿ ಅನೇಕ ಗೊಂದಲ, ತಿರುವುಗಳನ್ನು ನೀಡುತ್ತಿದೆ. ದಿನದಿಂದ ದಿನಕ್ಕೆ ಈ ಪ್ರಕರಣದಲ್ಲಿ ರಾಜಕಾರಣಿಗಳು ಆರೋಪಗಳನ್ನು ಮಾಡುತ್ತಲೇ ಬಂದಿದ್ದಾರೆ. ಸದ್ಯ ಬಿಟ್ ಕಾಯಿನ್ ವಿಷಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಬಿಜೆಪಿ ಟಾರ್ಗೆಟ್ ಮಾಡುತ್ತಿದ್ದು ಇದಕ್ಕೆ ಸಂಬಂಧಿಸಿದಂತೆ ಸರಣಿ ಟ್ವೀಟ್ ಮಾಡಿದೆ.

ಮಾನ್ಯ ಸಿದ್ದರಾಮಯ್ಯ ಅವರೇ, ರಾಜ್ಯದಲ್ಲಿ ನಡೆದಿದೆ ಎನ್ನಲಾದ ಬಿಟ್ ಕಾಯಿನ್ ಹಗರಣದ ಬಗ್ಗೆ ತಾವು ಪ್ರಸ್ತಾಪಿಸಿದ್ದೀರಿ. ಈಗ ನಮಗೆ ಒಂದಿಷ್ಟು ಪ್ರಶ್ನೆಗಳಿವೆ. ಒಂದಷ್ಟು ಚಿತ್ರಗಳಿವೆ. ಹಂತ ಹಂತವಾಗಿ ಬಿಡುಗಡೆ ಮಾಡುತ್ತೇವೆ . ಉತ್ತರಿಸಿ ಎಂದು ಟ್ವೀಟ್ ಮಾಡಿ ಪ್ರಶ್ನಿಸಿದೆ.

ಮಾನ್ಯ ಬಿಟ್ ಕಾಯಿನ್ ಬುರುಡೆರಾಮಯ್ಯ ಅವರೇ, ಈ ಚಿತ್ರದಲ್ಲಿರುವ ಸುನೀಶ್ ಹೆಗ್ಡೆ & ಹೇಮಂತ್ ಜೊತೆಗಿರುವ ಎಲ್ಲರನ್ನು ನೀವು ಗುರುತಿಸಬಲ್ಲಿರಿ ಎಂಬುದು ನಮ್ಮ ನಂಬಿಕೆ. ಆ ನಂಬಿಕೆ ನಿಜವೇ ಆದರೆ ಬಿಟ್ ಕಾಯಿನ್ ಹ್ಯಾಕಿಂಗ್ ದಂಧೆ ನಿಮ್ಮ ಕಾಲದಲ್ಲೇ ಆರಂಭವಾಗಿತ್ತು. ಸಿದ್ದರಾಮಯ್ಯನವರೇ, ಆ ಬಗ್ಗೆ ನೀವು ಸ್ಪಷ್ಟ ಮಾಹಿತಿ ಹೊಂದಿದ್ದೀರಿ ಅಲ್ಲವೇ? ಎಂದು ಪ್ರಶ್ನಿಸಿದೆ.

ಮಾನ್ಯ ಬಿಟ್ ಕಾಯಿನ್ ಬುರುಡೆರಾಮಯ್ಯ, ನಿಮ್ಮ ಅವಧಿಯಲ್ಲಿ ನಡೆದ ಈ ಹಗರಣವನ್ನು ಮುಚ್ಚಿ ಹಾಕುವುದು ನಿಮಗೆ ತೀರಾ ಅನಿವಾರ್ಯವಾಗಿತ್ತು. ಅಪ್ರಿಯವಾದ ಸತ್ಯ ಹೇಳುತ್ತೇವೆ, ಇಲ್ಲಿ ನಿಮ್ಮ ಅತ್ಯಾಪ್ತರೇ ಇದ್ದರು ಎಂಬ ಅನುಮಾನಕ್ಕೆ ಈ ಚಿತ್ರ ಪುಷ್ಠಿ ನೀಡುತ್ತಿದೆ. ಸತ್ಯ ಅನಾವರಣವಾಗುವ ಭಯಕ್ಕೆ ನೀವು ಯೂ ಟರ್ನ್ ತೆಗೆದುಕೊಳ್ಳುತ್ತಿದ್ದೀರಿ ಅಲ್ಲವೇ?

ಬಿಟ್ ಕಾಯಿನ್ ಹಗರಣದಲ್ಲಿ ಪ್ರಭಾವಿಗಳು ಇದ್ದಾರೆ ಎಂದು ಸಿದ್ದರಾಮಯ್ಯ ಅವರು ಆರೋಪಿಸಿದ್ದರು. ಆದರೆ ಈಗ ದಾಖಲೆಯೇ ಇಲ್ಲ ಎನ್ನುತ್ತಿದ್ದಾರೆ. ನಿಮ್ಮ ಅತ್ಯಾಪ್ತರ ವಹಿವಾಟು ನಿಮ್ಮನ್ನು ಅಸಹಾಕನನ್ನಾಗಿ ಮಾಡಿದೆಯೇ? ಬಿಟ್ ಕಾಯಿನ್ ಪ್ರಭಾ ವಲಯ ನಿಮ್ಮನ್ನೇ ಸುತ್ತಿಕೊಳ್ಳಬಹುದೆಂಬ ಭಯ ಕಾಡುತ್ತಿದೆಯೇ? ಮುಳುಗುತ್ತಿರುವವನಿಗೆ ಹುಲ್ಲುಕಡ್ಡಿ ಆಸರೆ ಎಂಬಂತೆ ತಮ್ಮ ನಾಯಕತ್ವ ದುರ್ಬಲವಾಗುತ್ತಿರುವ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರಿಗೆ ಬಿಟ್ ಕಾಯಿನ್ ಆಸರೆಯಾಗಿದೆ. ಆದರೆ, ಒಂದು ಚಿತ್ರ ಸಾವಿರ ಕತೆ ಹೇಳುತ್ತದೆ ಮತ್ತೊಮ್ಮೆ ಆಗ್ರಹ ಈ ಚಿತ್ರದಲ್ಲಿರುವ ವ್ಯಕ್ತಿಗಳನ್ನು ಗುರುತಿಸಿ.

ಮಾನ್ಯ ಸಿದ್ದರಾಮಯ್ಯನವರೇ, ಡ್ರಗ್ಸ್ ಹಾಗೂ ಬಿಟ್ ಕಾಯಿನ್ ಅವ್ಯವಹಾರ ಬಹಿರಂಗವಾಗಿದ್ದು ನಿಮ್ಮ ಕಾಲದಲ್ಲಿ. ಒಂದೆರಡು ಕಡೆ ದಾಳಿ ನಡೆದರೂ ತನಿಖೆ ಹಠಾತ್ ಸ್ಥಗಿತಗೊಂಡಿತು. ಬೆಂಗಳೂರಿನ ಪ್ರತಿಷ್ಠಿತ‌ ಹೊಟೇಲ್‌ನಲ್ಲಿ ನಡೆಯುತ್ತಿದ್ದ ಹುಕ್ಕಾ ಬಾರ್ ಆ ಎಲ್ಲ ಚಟುವಟಿಕೆಯ ಕೇಂದ್ರವಾಗಿತ್ತು. ಸುನೀಶ್ ಹೆಗ್ಡೆ, ಹೇಮಂತ್ ಮುದ್ದಪ್ಪ, ಶ್ರೀಕಿಯಂಥವರು ಆಗ ನಿಮ್ಮ ಮನೆಯ ಸುತ್ತಮುತ್ತಲೂ ಓಡಾಡಿರಲೂಬಹುದಲ್ಲವೇ!? ಎಂದು ಬಿಜೆಪಿ ಟ್ವೀಟ್ ಮೂಲಕ ಸಿದ್ದರಾಮಯ್ಯವನರನ್ನು ಪ್ರಶ್ನಿಸಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ಬೂಟಾಟಿಕೆ ಹೇಳಿಕೆ ನೀಡಲು ಶುರು ಮಾಡಿದ್ದಾರೆ; ಸಚಿವ ಬಿ ಶ್ರೀರಾಮುಲು ವಾಗ್ದಾಳಿ

Published On - 3:02 pm, Thu, 18 November 21

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು