AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಕಿ ವಿಚಾರದಲ್ಲಿ ಕೇಂದ್ರದ ಕಡೆ ಬೊಟ್ಟು ಮಾಡುತ್ತಾ ನವರಂಗಿ ನಾಟಕ ಮಾಡುತ್ತಿದ್ದೀರಿ: ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಟ್ವೀಟ್ ವಾರ್​​

ಪುಕ್ಕಟೆ ವಿದ್ಯುತ್ ಕೊಡುತ್ತೇವೆಂದು ವಿದ್ಯುತ್ ದರ ಏರಿಸಿದ್ದೀರಿ. ಗೃಹಜ್ಯೋತಿ ಅರ್ಜಿ ದಿನಾಂಕವನ್ನು ಮುಂದಕ್ಕೆ ತಳ್ಳಿದ್ದೀರಿ. ಈಗ ಅಕ್ಕಿಯ ವಿಚಾರದಲ್ಲಿ ಕೇಂದ್ರದ ಕಡೆ ಬೊಟ್ಟು ಮಾಡುತ್ತಾ ನವರಂಗಿ ನಾಟಕ ಮಾಡುತ್ತಿದ್ದೀರಿ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ಅಕ್ಕಿ ವಿಚಾರದಲ್ಲಿ ಕೇಂದ್ರದ ಕಡೆ ಬೊಟ್ಟು ಮಾಡುತ್ತಾ ನವರಂಗಿ ನಾಟಕ ಮಾಡುತ್ತಿದ್ದೀರಿ: ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಟ್ವೀಟ್ ವಾರ್​​
ಸಿದ್ದರಾಮಯ್ಯ ವಿರುದ್ಧ ಬಿಜೆಪಿ ವಾಗ್ದಾಳಿ
ಆಯೇಷಾ ಬಾನು
ಆಯೇಷಾ ಬಾನು|

Updated on:Jun 15, 2023 | 7:33 AM

Share

ಬೆಂಗಳೂರು: ದಾಸ್ತಾನು ಇದ್ದರೂ ಅನ್ನಭಾಗ್ಯಕ್ಕೆ(Anna Bhagya Scheme) ಕೇಂದ್ರ ಸರ್ಕಾರ ಅಕ್ಕಿ ಕೊಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಅವರು ಮಾಡಿರುವ ಆರೋಪಕ್ಕೆ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ. ಜೊತೆಗೆ ಭಾರತೀಯ ಆಹಾರ ನಿಗಮ (FCI) ಪರೋಕ್ಷವಾಗಿ ತಿರುಗೇಟು ನೀಡಿದೆ. ಸದ್ಯ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಟ್ವೀಟ್ ವಾರ್ ಮಾಡಿದೆ. ​​ ಪುಕ್ಕಟೆ ವಿದ್ಯುತ್ ಕೊಡುತ್ತೇವೆಂದು ವಿದ್ಯುತ್ ದರ ಏರಿಸಿದ್ದೀರಿ. ಗೃಹಜ್ಯೋತಿ ಅರ್ಜಿ ದಿನಾಂಕವನ್ನು ಮುಂದಕ್ಕೆ ತಳ್ಳಿದ್ದೀರಿ. ಈಗ ಅಕ್ಕಿಯ ವಿಚಾರದಲ್ಲಿ ಕೇಂದ್ರದ ಕಡೆ ಬೊಟ್ಟು ಮಾಡುತ್ತಾ ನವರಂಗಿ ನಾಟಕ ಮಾಡುತ್ತಿದ್ದೀರಿ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ. ಕೊಟ್ಟ ಗ್ಯಾರಂಟಿಗಳನ್ನು ಜಾರಿ ಮಾಡುವಲ್ಲಿ ಪತರುಗುಟ್ಟುತ್ತಿರುವ ನಿಮ್ಮ ಚಿಂತಾಜನಕ ಸ್ಥಿತಿಗೆ ನಮ್ಮ ವಿಷಾದ ಎಂದು ಬಿಜೆಪಿ ಲೇವಡಿ ಮಾಡಿದೆ.

ಇದನ್ನೂ ಓದಿ: ಅಕ್ಕಿ ನೀಡಲಾಗದ ಸಿದ್ದರಾಮಯ್ಯ ಮೋದಿ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ: ತೇಜಸ್ವಿ ಸೂರ್ಯ

ಅಕ್ಕಿ ಕೊಡುವ ಮೊದಲೇ ಕೇಂದ್ರದ ಕಡೆ ‘ಕೈ’ ತೋರಿಸಿ ನಿರೀಕ್ಷಣಾ ಜಾಮೀನು ಪಡೆಯುವ ನಿಮ್ಮ ‘ಗ್ಯಾರಂಟಿ’ ಹುನ್ನಾರ ನಾಡಿನ ಸಮಸ್ತ ಜನರಿಗೆ ಅರ್ಥವಾಗಿದೆ ಸ್ವಾಮಿ ಎಂದು ಟ್ವೀಟ್ ಮೂಲಕ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

ಕೇಂದ್ರ ಸರ್ಕಾರದ ಮೇಲೆ ಸಿದ್ದರಾಮಯ್ಯ ಆರೋಪ

ಅನ್ನಭಾಗ್ಯ ಯೋಜನೆಯಡಿ ಅಕ್ಕಿ ವಿತರಿಸಲು 2,08,425 ಮೆಟ್ರಿಕ್ ಟನ್ ಅಕ್ಕಿ ಅವಶ್ಯಕತೆ ಇದೆ. ಇದನ್ನು ಕೊಡಲು ಕೇಂದ್ರವು ಒಪ್ಪಿಕೊಂಡಿತ್ತು. ಕೇಂದ್ರದ ಒಪ್ಪಿಗೆ ಆಧಾರದಲ್ಲಿ ಜುಲೈ 1ರಿಂದ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದಿದ್ದೆವು. ಇದಾದ ಬಳಿಕ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ತೆಗೆದುಕೊಂಡಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದರು. 13ರಂದು ಒಂದು ಪತ್ರ ಬರೆದು ರಾಜ್ಯ ಸರ್ಕಾರಗಳಿಗೆ ಸೇಲಂ ಗೋಧಿ ಹಾಗೂ ಅಕ್ಕಿ ಕೊಡಲು ಆಗಲ್ಲವೆಂದು ತಿಳಿಸಿದೆ. ಕೇಂದ್ರ ಸರ್ಕಾರ ರಾಜಕೀಯ ತೀರ್ಮಾನ ಮಾಡಿ ಕರ್ನಾಟಕ ಸರ್ಕಾರಕ್ಕೆ ಅಕ್ಕಿ ಕೊಡಬಾರದು ಅಂತ ಈ ರೀತಿ ಮಾಡುತ್ತಿದೆ. ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಈ ರೀತಿ ಮಾಡುತ್ತಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದರು.

ರಾಜಕೀಯಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:30 am, Thu, 15 June 23

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ