AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಕಿ ವಿಚಾರದಲ್ಲಿ ಕೇಂದ್ರದ ಕಡೆ ಬೊಟ್ಟು ಮಾಡುತ್ತಾ ನವರಂಗಿ ನಾಟಕ ಮಾಡುತ್ತಿದ್ದೀರಿ: ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಟ್ವೀಟ್ ವಾರ್​​

ಪುಕ್ಕಟೆ ವಿದ್ಯುತ್ ಕೊಡುತ್ತೇವೆಂದು ವಿದ್ಯುತ್ ದರ ಏರಿಸಿದ್ದೀರಿ. ಗೃಹಜ್ಯೋತಿ ಅರ್ಜಿ ದಿನಾಂಕವನ್ನು ಮುಂದಕ್ಕೆ ತಳ್ಳಿದ್ದೀರಿ. ಈಗ ಅಕ್ಕಿಯ ವಿಚಾರದಲ್ಲಿ ಕೇಂದ್ರದ ಕಡೆ ಬೊಟ್ಟು ಮಾಡುತ್ತಾ ನವರಂಗಿ ನಾಟಕ ಮಾಡುತ್ತಿದ್ದೀರಿ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ಅಕ್ಕಿ ವಿಚಾರದಲ್ಲಿ ಕೇಂದ್ರದ ಕಡೆ ಬೊಟ್ಟು ಮಾಡುತ್ತಾ ನವರಂಗಿ ನಾಟಕ ಮಾಡುತ್ತಿದ್ದೀರಿ: ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಟ್ವೀಟ್ ವಾರ್​​
ಸಿದ್ದರಾಮಯ್ಯ ವಿರುದ್ಧ ಬಿಜೆಪಿ ವಾಗ್ದಾಳಿ
ಆಯೇಷಾ ಬಾನು
ಆಯೇಷಾ ಬಾನು|

Updated on:Jun 15, 2023 | 7:33 AM

Share

ಬೆಂಗಳೂರು: ದಾಸ್ತಾನು ಇದ್ದರೂ ಅನ್ನಭಾಗ್ಯಕ್ಕೆ(Anna Bhagya Scheme) ಕೇಂದ್ರ ಸರ್ಕಾರ ಅಕ್ಕಿ ಕೊಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಅವರು ಮಾಡಿರುವ ಆರೋಪಕ್ಕೆ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ. ಜೊತೆಗೆ ಭಾರತೀಯ ಆಹಾರ ನಿಗಮ (FCI) ಪರೋಕ್ಷವಾಗಿ ತಿರುಗೇಟು ನೀಡಿದೆ. ಸದ್ಯ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಟ್ವೀಟ್ ವಾರ್ ಮಾಡಿದೆ. ​​ ಪುಕ್ಕಟೆ ವಿದ್ಯುತ್ ಕೊಡುತ್ತೇವೆಂದು ವಿದ್ಯುತ್ ದರ ಏರಿಸಿದ್ದೀರಿ. ಗೃಹಜ್ಯೋತಿ ಅರ್ಜಿ ದಿನಾಂಕವನ್ನು ಮುಂದಕ್ಕೆ ತಳ್ಳಿದ್ದೀರಿ. ಈಗ ಅಕ್ಕಿಯ ವಿಚಾರದಲ್ಲಿ ಕೇಂದ್ರದ ಕಡೆ ಬೊಟ್ಟು ಮಾಡುತ್ತಾ ನವರಂಗಿ ನಾಟಕ ಮಾಡುತ್ತಿದ್ದೀರಿ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ. ಕೊಟ್ಟ ಗ್ಯಾರಂಟಿಗಳನ್ನು ಜಾರಿ ಮಾಡುವಲ್ಲಿ ಪತರುಗುಟ್ಟುತ್ತಿರುವ ನಿಮ್ಮ ಚಿಂತಾಜನಕ ಸ್ಥಿತಿಗೆ ನಮ್ಮ ವಿಷಾದ ಎಂದು ಬಿಜೆಪಿ ಲೇವಡಿ ಮಾಡಿದೆ.

ಇದನ್ನೂ ಓದಿ: ಅಕ್ಕಿ ನೀಡಲಾಗದ ಸಿದ್ದರಾಮಯ್ಯ ಮೋದಿ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ: ತೇಜಸ್ವಿ ಸೂರ್ಯ

ಅಕ್ಕಿ ಕೊಡುವ ಮೊದಲೇ ಕೇಂದ್ರದ ಕಡೆ ‘ಕೈ’ ತೋರಿಸಿ ನಿರೀಕ್ಷಣಾ ಜಾಮೀನು ಪಡೆಯುವ ನಿಮ್ಮ ‘ಗ್ಯಾರಂಟಿ’ ಹುನ್ನಾರ ನಾಡಿನ ಸಮಸ್ತ ಜನರಿಗೆ ಅರ್ಥವಾಗಿದೆ ಸ್ವಾಮಿ ಎಂದು ಟ್ವೀಟ್ ಮೂಲಕ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

ಕೇಂದ್ರ ಸರ್ಕಾರದ ಮೇಲೆ ಸಿದ್ದರಾಮಯ್ಯ ಆರೋಪ

ಅನ್ನಭಾಗ್ಯ ಯೋಜನೆಯಡಿ ಅಕ್ಕಿ ವಿತರಿಸಲು 2,08,425 ಮೆಟ್ರಿಕ್ ಟನ್ ಅಕ್ಕಿ ಅವಶ್ಯಕತೆ ಇದೆ. ಇದನ್ನು ಕೊಡಲು ಕೇಂದ್ರವು ಒಪ್ಪಿಕೊಂಡಿತ್ತು. ಕೇಂದ್ರದ ಒಪ್ಪಿಗೆ ಆಧಾರದಲ್ಲಿ ಜುಲೈ 1ರಿಂದ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದಿದ್ದೆವು. ಇದಾದ ಬಳಿಕ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ತೆಗೆದುಕೊಂಡಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದರು. 13ರಂದು ಒಂದು ಪತ್ರ ಬರೆದು ರಾಜ್ಯ ಸರ್ಕಾರಗಳಿಗೆ ಸೇಲಂ ಗೋಧಿ ಹಾಗೂ ಅಕ್ಕಿ ಕೊಡಲು ಆಗಲ್ಲವೆಂದು ತಿಳಿಸಿದೆ. ಕೇಂದ್ರ ಸರ್ಕಾರ ರಾಜಕೀಯ ತೀರ್ಮಾನ ಮಾಡಿ ಕರ್ನಾಟಕ ಸರ್ಕಾರಕ್ಕೆ ಅಕ್ಕಿ ಕೊಡಬಾರದು ಅಂತ ಈ ರೀತಿ ಮಾಡುತ್ತಿದೆ. ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಈ ರೀತಿ ಮಾಡುತ್ತಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದರು.

ರಾಜಕೀಯಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:30 am, Thu, 15 June 23

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್