AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೇ ಮೈಸೂರಿನ ನವಪರ್ವಕ್ಕೆ ಮುನ್ನುಡಿ ಬರೆಯೋಣ; ಹಳೇ ಮೈಸೂರು ಭಾಗದ ಜನರಿಗೆ ಜೆಡಿಎಸ್, ಕಾಂಗ್ರೆಸ್​ ದ್ರೋಹ ಮಾಡಿದೆ -ಬಿಜೆಪಿ ವಾಗ್ದಾಳಿ

ಜೆಡಿಎಸ್​​ ಕೇವಲ ಮೈಸೂರು ಭಾಗದ ಜನರಿಂದ ಬದುಕಿರುವ ಪಕ್ಷ. ಜಿಲ್ಲಾ ಪಂಚಾಯಿತಿಯಿಂದ ಸಂಸತ್​ವರೆಗೆ ಹುದ್ದೆ ಹೊಂದಿರುವ ಪಕ್ಷ. ಕಾರ್ಯಕರ್ತರಿಗೆ ಮಾತ್ರ ಯಾವುದೇ ಹುದ್ದೆಯಿಲ್ಲ.

ಹಳೇ ಮೈಸೂರಿನ ನವಪರ್ವಕ್ಕೆ ಮುನ್ನುಡಿ ಬರೆಯೋಣ; ಹಳೇ ಮೈಸೂರು ಭಾಗದ ಜನರಿಗೆ ಜೆಡಿಎಸ್, ಕಾಂಗ್ರೆಸ್​ ದ್ರೋಹ ಮಾಡಿದೆ -ಬಿಜೆಪಿ ವಾಗ್ದಾಳಿ
ಸಾಂದರ್ಭಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on: Dec 28, 2022 | 12:29 PM

Share

ಬೆಂಗಳೂರು: ಹಳೇ ಮೈಸೂರಿನ ನವಪರ್ವಕ್ಕೆ ಮುನ್ನುಡಿ ಬರೆಯೋಣ. ಹಳೇ ಮೈಸೂರು ಭಾಗದ ಜನರಿಗೆ ಜೆಡಿಎಸ್​​ ದ್ರೋಹ ಬಗೆಯುತ್ತಿದೆ. ಹಳೇ ಮೈಸೂರು ಅಭಿವೃದ್ಧಿಗಾಗಿ ಕಾಂಗ್ರೆಸ್ ಏನೂ ಮಾಡಲಿಲ್ಲ ಎಂದು ಟ್ವೀಟ್​​ ಮೂಲಕ ಜೆಡಿಎಸ್​​​​ ಹಾಗೂ ಕಾಂಗ್ರೆಸ್ ವಿರುದ್ಧ ರಾಜ್ಯ ಬಿಜೆಪಿ ಘಟಕ ವಾಗ್ದಾಳಿ ನಡೆಸಿದೆ.

ಜೆಡಿಎಸ್​​ ಕೇವಲ ಮೈಸೂರು ಭಾಗದ ಜನರಿಂದ ಬದುಕಿರುವ ಪಕ್ಷ. ಜಿಲ್ಲಾ ಪಂಚಾಯಿತಿಯಿಂದ ಸಂಸತ್​ವರೆಗೆ ಹುದ್ದೆ ಹೊಂದಿರುವ ಪಕ್ಷ. ಕಾರ್ಯಕರ್ತರಿಗೆ ಮಾತ್ರ ಯಾವುದೇ ಹುದ್ದೆಯಿಲ್ಲ. ಅಭಿವೃದ್ಧಿ ಹೆಸರಲ್ಲಿ JDS ಮೈಸೂರು ಭಾಗದ ಜನರನ್ನ ಲೂಟಿ ಮಾಡಿದೆ. ಇಷ್ಟು ವರ್ಷ ಅಧಿಕಾರ ಕೊಟ್ಟ ಜನರಿಗೆ ನೀಡಿದ್ದು ಮಾತ್ರ ಶೂನ್ಯ. ಕುಮಾರಸ್ವಾಮಿ ಸಾರ್ವಜನಿಕವಾಗಿ ಕಣ್ಣೀರು ಸುರಿಸುವುದು ಕೇವಲ ಈ ಭಾಗದ ಜನರನ್ನ ಮೂರ್ಖರನ್ನಾಗಿಸಲು ತಂತ್ರ. ಏನಾದರೂ ಮಾಡಿ ಅಧಿಕಾರ ಹಿಡಿಯಲೇಬೇಕು ಎಂಬುದು​ ಸಿದ್ಧಾಂತ. ಹೆಸರಲ್ಲಷ್ಟೇ ಜಾತ್ಯಾತೀತತೆ, ಉಳಿದೆಲ್ಲ ಮಾಡಿದ್ದು ಜಾತಿ ರಾಜಕಾರಣ. ಕೇವಲ ಒಂದು ಸಮುದಾಯದವರನ್ನು ನೆಚ್ಚಿ ಬದುಕುತ್ತಿರುವ ಪಕ್ಷ ಜೆಡಿಎಸ್. ಆ ಸಮುದಾಯದ ಉದ್ಧಾರವನ್ನೂ ಕಡೆಗಣಿಸಿದೆ. ಜೆಡಿಎಸ್​​ ಅಲ್ಪಸಂಖ್ಯಾತರ ತುಷ್ಟೀಕರಣಕ್ಕಿಳಿದುಬಿಟ್ಟಿದೆ. ಪಕ್ಷದ ಬೆನ್ನೆಲುಬಾದ ಕಾರ್ಯಕರ್ತರನ್ನೇ ಕಡೆಗಣಿಸುತ್ತಿದೆ. ತಮ್ಮ ಕುಟುಂಬದವರನ್ನೇ ಚುನಾವಣಾ ಅಭ್ಯರ್ಥಿಯನ್ನಾಗಿಸುತ್ತದೆ ಎಂದು ಟ್ವೀಟ್​​​ ಮೂಲಕ ಜೆಡಿಎಸ್​ ವಿರುದ್ಧ ರಾಜ್ಯ ಬಿಜೆಪಿ ಘಟಕ ಟಾಂಗ್ ಕೊಟ್ಟಿದೆ.

ಕಾಂಗ್ರೆಸ್​​ ವಿರುದ್ಧವೂ ಬಿಜೆಪಿ ವಾಗ್ದಾಳಿ

ಹಳೇ ಮೈಸೂರು ಅಭಿವೃದ್ಧಿಗಾಗಿ ಕಾಂಗ್ರೆಸ್ ಏನೂ ಮಾಡಲಿಲ್ಲ ಎಂದು ಟ್ವೀಟ್ ಮೂಲಕ ಕಾಂಗ್ರೆಸ್ ಪಕ್ಷದ​ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೂ ಅಭಿವೃದ್ಧಿ ಕಡೆಗಣಿಸಿದ್ದಾರೆ. ಒಡೆದಾಳುವ ನೀತಿ ಅನುಸರಿಸಿ ವೋಟ್ ​ಬ್ಯಾಂಕ್ ರಾಜಕಾರಣ ಮಾಡಿದ್ದಾರೆ. ಜನ ಇದೆಲ್ಲಾ ಗಮನದಲ್ಲಿಟ್ಟುಕೊಂಡು ಕಳೆದ ಬಾರಿ ಪಾಠ ಕಲಿಸಿದರು. 2018ರ ಚುನಾವಣೆಯಲ್ಲಿ ಸೋಲು ಖಚಿತದ ಅರಿವಾದಾಗ ಚಾಮುಂಡಿ ಕ್ಷೇತ್ರದ ಜನರನ್ನು ಅನಾಥರನ್ನಾಗಿಸಿ ಓಡಿಹೋದರು. ಬಾಗಲಕೋಟೆ ಜಿಲ್ಲೆ ಬಾದಾಮಿಗೆ ಸಿದ್ದರಾಮಯ್ಯ ಓಡಿಹೋದರು. ಅಲ್ಲಿಂದ ಮತ್ತೆ ಮೈಸೂರಿಗೆ ಬರುವ ಯೋಚನೆ ಮಾಡುತ್ತಿದ್ದಾರೆ. ಒಡೆಯರ್​ಗೆ ಅಗೌರವದ ಏಕವಚನ ಪದ ಬಳಸಿದವರನ್ನು ಈ ಭಾಗದ ಸುಸಂಸ್ಕೃತ ಜನರು ಶಾಶ್ವತವಾಗಿ ತಿರಸ್ಕರಿಸಿದ್ದಾರೆ ಎಂದು ಟ್ವೀಟ್ ಮೂಲಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

ಕಾಂಗ್ರೆಸ್​ ವಿರುದ್ಧ ರಾಜ್ಯ ಬಿಜೆಪಿಯಿಂದ ಸರಣಿ ಟ್ವೀಟ್

ಸಿದ್ದರಾಮಯ್ಯ ಓಡಲೆಂದು ಸರ್ಕಾರ ಉತ್ತಮ ರಸ್ತೆ ನಿರ್ಮಿಸುತ್ತಿದೆ. ಬನ್ನೂರು-ಮಳವಳ್ಳಿ ಮಾರ್ಗದಲ್ಲಿ ಓಡಲು ಕನಕಪುರದಲ್ಲಿ ಬಂಡೆ ಅಡ್ಡಲಾಗಿದೆ! ಸಿಎಂ ಆಗಿದ್ದಾಗ ನಿದ್ದೆ ಮಾಡಿ, ಈಗ ಚುನಾವಣೆಯೆಂದು ತಟ್ಟನೆ ಎಚ್ಚರಗೊಂಡು ಈ ಭಾಗದ ಬಗ್ಗೆ ಮಾತಾಡುತ್ತಿದ್ದಾರೆ. ಹಳೇ ಮೈಸೂರು ಭಾಗದ ಜನರಿಗೆ ಅಭಿವೃದ್ಧಿಯ ರಾಜಕಾರಣ ಬೇಕಿದೆ. ಈ ಭಾಗದ ಜನರು ಕಾಂಗ್ರೆಸ್-ಜೆಡಿಎಸ್​ ಪಕ್ಷಗಳ ಆಷಾಢಭೂತಿತನ ಕಂಡು ಬದಲಾವಣೆಗೆ ತೆರೆದುಕೊಂಡಿದ್ದಾರೆ. ಇದೆಲ್ಲದಕ್ಕೂ ಅಮಿತ್​​ ಶಾ ಕಾರ್ಯಕ್ರಮವೇ ಮುನ್ನುಡಿಯಾಗಲಿದೆ ಎಂದಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್