AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಅಮಿತ್ ಶಾ: ಯಡಿಯೂರಪ್ಪ ಜೊತೆ ಉಪಹಾರ, ಆರಗ ಜ್ಞಾನೇಂದ್ರಗೆ ಕ್ಲಾಸ್, ಉದ್ಯಮಿಗಳಿಗೆ ಉಪನ್ಯಾಸ

ಯಡಿಯೂರಪ್ಪ ಅವರೊಂದಿಗೆ ಉಪಾಹಾರ ಸ್ವೀಕರಿಸಿದ ಅಮಿತ್ ಶಾ ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿದರು.

ಬೆಂಗಳೂರಿನಲ್ಲಿ ಅಮಿತ್ ಶಾ: ಯಡಿಯೂರಪ್ಪ ಜೊತೆ ಉಪಹಾರ, ಆರಗ ಜ್ಞಾನೇಂದ್ರಗೆ ಕ್ಲಾಸ್, ಉದ್ಯಮಿಗಳಿಗೆ ಉಪನ್ಯಾಸ
ಕೇಂದ್ರ ಗೃಹ ಸಚಿವ ಅಮಿತ್ ಶಾ
TV9 Web
| Edited By: |

Updated on:Aug 04, 2022 | 2:25 PM

Share

ಬೆಂಗಳೂರು: ಭಾರತೀಯ ಜನತಾ ಪಕ್ಷದ (BJP) ಚಾಣಕ್ಯ ಎಂದೇ ಖ್ಯಾತರಾಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಗುರುವಾರ ಬೆಂಗಳೂರಿನಲ್ಲಿ ಹಲವು ನಾಯಕರನ್ನು ಭೇಟಿಯಾದರು. ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲು, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಕುಂತೂರು ಮತ್ತು ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ಅವರನ್ನು ಅಮಿತ್ ಶಾ ಭೇಟಿಯಾಗಿ ಚರ್ಚಿಸಿದರು.

ಯಡಿಯೂರಪ್ಪ ಅವರೊಂದಿಗೆ ಉಪಾಹಾರ ಸ್ವೀಕರಿಸಿದ ಅಮಿತ್ ಶಾ ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿದರು. ಹೊಟೆಲ್​ನಲ್ಲಿ ತಮ್ಮನ್ನು ಭೇಟಿಯಾಗುವಂತೆ ಯಡಿಯೂರಪ್ಪ ಅವರಿಗೆ ನಿನ್ನೆಯೇ ಅಮಿತ್ ಶಾ ಕಡೆಯಿಂದ ಸಂದೇಶ ರವಾನೆಯಾಗಿತ್ತು. ಅಮಿತ್ ಶಾ ವಾಸ್ತವ್ಯ ಹೂಡಿದ್ದ ತಾಜ್ ವೆಸ್ಟ್​ ಎಂಡ್ ಹೊಟೆಲ್​ಗೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಹೋಟೆಲ್​ ಒಳಗೆ ಮತ್ತು ಹೊರಗೆ ಬಂದೋಬಸ್ತ್​ಗಾಗಿ 1,000ಕ್ಕೂ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಆರಗ ಜ್ಞಾನೇಂದ್ರಗೆ ಕ್ಲಾಸ್

ಬೆಂಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರೊಂದಿಗೆ ಮಾತನಾಡಿದ ಅಮಿತ್ ಶಾ, ಕರಾವಳಿಯಲ್ಲಿ ನಡೆಯುತ್ತಿರುವ ಸರಣಿ ಹತ್ಯೆಯ ಬಗ್ಗೆ ಮಾಹಿತಿ ಕೇಳಿದರು. ಆರಗ ಜ್ಞಾನೇಂದ್ರ ನೀಡಿದ ವಿವರಣೆಯ ಬಗ್ಗೆ ಅಮಿತ್ ಶಾ ಅತೃಪ್ತಿ ವ್ಯಕ್ತಪಡಿಸಿದರು ಎಂದು ಮೂಲಗಳು ಹೇಳಿವೆ. ‘ಮಾಧ್ಯಮಗಳ ಮುಂದೆ ಹೇಳಿಕೆ ನೀಡುವುದು ಮುಖ್ಯವಲ್ಲ. ಇಂಥ ಪ್ರಕರಣಗಳ ಸಮಗ್ರ ವಿವರ ನಿಮಗೆ ಗೊತ್ತಿರಬೇಕು. ಗೃಹ ಇಲಾಖೆಯ ನಿರ್ವಹಣೆ ಬಿಗಿಯಾಗಿರಬೇಕು’ ಎಂದು ಅಮಿತ್ ಶಾ ತಾಕೀತು ಮಾಡಿದರು ಎಂದು ಮೂಲಗಳು ಹೇಳಿವೆ.

ಕೊವಿಡ್​ಗೆ ಅಂಜದೆ ಆರ್ಥಿಕ ಪ್ರಗತಿ

ಬಿಜೆಪಿ ನಾಯಕರು ಮತ್ತು ಸಚಿವ ಭೇಟಿಯ ನಂತರ ಭಾರತೀಯ ಕೈಗಾರಿಕೆಗಳ ಒಕ್ಕೂಟ (Confederation of Indian Industry – CII) ಆಯೋಜಿಸಿದ್ದ ‘ಸಂಕಲ್ಪ್​ ಸೆ ಸಿದ್ಧಿ’ ಕಾರ್ಯಕ್ರಮದಲ್ಲಿ ಅಮಿತ್ ಶಾ ಪಾಲ್ಗೊಂಡರು. ಉದ್ಯಮ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಕ್ರಮಗಳನ್ನು ವಿವರಿಸಿದರು. ಕೊವಿಡ್ ಸಂಕಷ್ಟ ಪರಿಸ್ಥಿತಿ ಆವರಿಸಿದ್ದಾಗ ಲಸಿಕೆಗಳನ್ನು ಉಚಿತವಾಗಿ ಕೊಟ್ಟೆವು. ಲಸಿಕೆ ಪಡೆದವರು ಪ್ರಮಾಣ ಪತ್ರಕ್ಕಾಗಿ ಕಷ್ಟಪಡಬೇಕಾದ ಪರಿಸ್ಥಿತಿ ಇರಲಿಲ್ಲ. ಆರ್ಥಿಕ ಅಭಿವೃದ್ಧಿಗಾಗಿಯೂ ಇದೇ ಸಂದರ್ಭದಲ್ಲಿ ಹಲವು ಯೋಜನೆಗಳನ್ನು ಜಾರಿ ಮಾಡಿದೆವು ಎಂದು ಹೇಳಿದರು.

ಸ್ವಚ್ಛ ಭಾರತ್ ಮತ್ತು ಸ್ವಸ್ಥ್ ಭಾರತ್ ಅಭಿಯಾನಗಳು ನಿರೀಕ್ಷಿತ ಫಲಿತಾಂಶ ನೀಡಿದವು. ನೇರ ನಗದು ವರ್ಗಾವಣೆ, ಜಿಎಸ್​ಟಿ, ಉಜ್ವಲಾ, ಡಿಸ್ಕಾಂ ಸೇರಿದಂತೆ ಆರ್ಥಿಕ ವ್ಯವಸ್ಥೆ ಸದೃಢಗೊಳಿಸಲು ಹಲವು ರೀತಿಯಲ್ಲಿ ಯತ್ನಿಸಿದೆವು. ನಾವು ಎಂಥ ವಸ್ತುಗಳನ್ನು ಆಮದು ಮಾಡಿಕೊಳ್ಳುತ್ತೇವೆ ಎಂಬುದನ್ನು ಕೈಗಾರಿಕೋದ್ಯಮಗಳು ಗುರುತಿಸಬೇಕು. ಸಪ್ಲೈ ಚೈನ್​ನಲ್ಲಿ ನಾಪತ್ತೆಯಾಗಿರುವ ವಸ್ತುಗಳನ್ನು ಗುರುತಿಸಿ, ಅದು ಭಾರತದಲ್ಲಿಯೇ ತಯಾರಾಗುವಂತೆ ಮಾಡುವ ಕಡೆಗೆ ಗಮನ ನೀಡಬೇಕು ಎಂದು ಸಲಹೆ ಮಾಡಿದರು.

ಕೈಗಾರಿಕೆಗಳು ಏಕಾಂಗಿಯಾಗಿ ಬದುಕಲು ಸಾಧ್ಯವಿಲ್ಲ. ದೇಶದ ಆಶೋತ್ತರಗಳನ್ನು ಅರಿತುಕೊಂಡು ಸ್ಪಂದಿಸಬೇಕು. ದೇಶವನ್ನು ಸ್ವಾವಲಂಬಿಯಾಗಿಸಲು ಉದ್ಯಮಿಗಳು ಮುಂದೆ ಬರಬೇಕು. ರಕ್ಷಣೆ ಸೇರಿದಂತೆ ಅಗತ್ಯ ಕ್ಷೇತ್ರಗಳಿಗೆ ಆದ್ಯತೆ ಸಿಗಬೇಕು ಎಂದು ನುಡಿದರು.

ಸಿಐಐ ಕಾರ್ಯಕ್ರಮದ ನಂತರ ಯಲಹಂಕದ ಕೆಎಂಎಫ್ ಮದರ್ ಡೇರಿಗೆ ಭೇಟಿ ನೀಡಲಿರುವ ಅಮಿತ್ ಶಾ, ಪೂರ್ವ ನಿಗದಿಯಂತೆ ಎಚ್​ಎಎಲ್ ಏರ್​ಪೋರ್ಟ್ ಬದಲಾಗಿ ಯಲಹಂಕ ಏರ್ ಫೋರ್ಸ್ ಸ್ಟೇಷನ್​ನಿಂದಲೇ ವಿಶೇಷ ವಿಮಾನದ ಮೂಲಕ ದೆಹಲಿಗೆ ನಿರ್ಗಮಿಸಲಿದ್ದಾರೆ.

Published On - 2:25 pm, Thu, 4 August 22

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ